Homeಮುಖಪುಟಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಮಧ್ಯಪ್ರದೇಶ ಪ್ರವಾಹ: ಕೊಚ್ಚಿಹೋದ ಹೊಸ ಸೇತುವೆ, 14 ಮಂದಿ ಸಾವು

ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

- Advertisement -
- Advertisement -

ಮಧ್ಯಪ್ರದೇಶದದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಿಸಲಾದ ಸೇತುವೆ ಸೇರಿದಂತೆ ಎರಡು ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಅಷ್ಟೇ ಅಲ್ಲದೆ 14 ಜನರು ಸಾವನ್ನಪ್ಪಿದ್ದು, ರಾಜ್ಯದ 450 ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸ್ಥಳಾಂತರಗೊಳಿಸಲಾಗಿದೆ.

ಕೊಚ್ಚಿಕೊಂಡು ಹೋಗಿರುವ ಸೇತುವೆ ರಾಜ್ಯದ ಮಹಾಕೋಷಲ್ ಪ್ರದೇಶದ ಸಿಯೋನಿ ಜಿಲ್ಲೆಯ ವೈಂಗಂಗಾ ನದಿಯ ಮೇಲೆ ನಿರ್ಮಿಸಲಾಗಿತ್ತು.

ಒಂದು ದಶಕದ ಹಿಂದೆ ನಿರ್ಮಿಸಲಾದ ಒಂದು ಸೇತುವೆ ಛಾಪಾರಾ ಮತ್ತು ಭೀಮ್‌ಗಡ್‌ನ್ನು ಸಂಪರ್ಕಿಸಿದರೆ, ಸೋನ್ವಾರಾ ಮತ್ತು ಧನೋರಾವನ್ನು ಸಂಪರ್ಕಿಸುವ ಇನ್ನೊಂದು ಸೇತುವೆ ಕೇವಲ ಎರಡು ತಿಂಗಳ ಹಿಂದೆಯೇ ಪೂರ್ಣಗೊಂಡಿತ್ತು ಎನ್ನಲಾಗಿದೆ.


ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?


ಎರಡು ಸೇತುವೆಗಳನ್ನು ತಲಾ 3 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎರಡನೇ ಸೇತುವೆಯನ್ನು ಪ್ರಧಾನ್ ಮಂತ್ರಿ ಗ್ರಾಮೀಣ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಅಡಿಯಲ್ಲಿ ನಿರ್ಮಿಸಲಾಗಿದೆ.

ಇದರ ನಿರ್ಮಾಣವು ಸೆಪ್ಟೆಂಬರ್ 2018 ರಲ್ಲಿ ಪ್ರಾರಂಭವಾಗಿ, ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿತ್ತು. ಸೇತುವೆಯನ್ನು ಇನ್ನೂ ಅಧಿಕೃತವಾಗಿ ಉದ್ಘಾಟಿಸಲಿಲ್ಲವಾದರೂ, ಅದು ಈಗಾಗಲೇ ಬಳಕೆಯಲ್ಲಿತ್ತು. ಅದೀಗ ನೀರು ಪಾಲಾಗಿದೆ.

“ಸೇತುವೆ 150 ಮೀಟರ್ ಉದ್ದ ಮತ್ತು 9.28 ಮೀಟರ್ ಎತ್ತರವಿತ್ತು. ಇದರ ನಿರ್ಮಾಣವು ಜೂನ್ 2020 ರಲ್ಲಿ ಪೂರ್ಣಗೊಂಡಿತು. ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ವೈಂಗಂಗಾ ನದಿ ಮತ್ತು ಅದರ ಉಪನದಿಯಲ್ಲಿ ಪ್ರವಾಹ ಉಂಟಾಯಿತು. ಭಾರೀ ಮಳೆ ಮತ್ತು ನದಿಯ ಪ್ರವಾಹದಿಂದಾಗಿ ಭೀಮ್‌ಗಡ್ ಅಣೆಕಟ್ಟು ಪೂರ್ಣ ಸಾಮರ್ಥ್ಯಕ್ಕೆ ತುಂಬಿತು. ಆಗಸ್ಟ್ 27-28 ರ ರಾತ್ರಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಬೇಕಾಗಿತ್ತು, ಇದರಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಪೂರ್ಣಗೊಂಡಿದ್ದ ಸೇತುವೆ ಕೊಚ್ಚಿಕೊಂಡು ಹೋಗಿದೆ” ಎಂದು ಸಿಯೋನಿ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ (ಪಿಎಂಜಿಎಸ್ವೈ) ಜೆಪಿ ಮೆಹ್ರಾ ಹೇಳಿದ್ದಾರೆ.

ಸಿಯೋನಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರ್ ಪ್ರತೀಕ್ ಎರಡು ಸೇತುವೆಗಳ ಕುಸಿತ ಮತ್ತು ಜಿಲ್ಲೆಯಲ್ಲಿ ಪ್ರವಾಹ ಮತ್ತು ಮಳೆ ಸಂಬಂಧಿತ ಅಪಘಾತಗಳಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಡಪಡಿಸಿದರು. ಸಿಯೋನಿ ಜಿಲ್ಲಾ ಆಡಳಿತವು ಅಪಘಾತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದೆ.

ಇದನ್ನೂ ಓದಿ: ನಿಲ್ಲದ ಪ್ರವಾಹ, ಬಾರದ ಪರಿಹಾರ: ಇಂದಿನ ಪ್ರಧಾನಿ ಸಭೆಯಲ್ಲಿ ದನಿಯೆತ್ತಲು ವಿಪಕ್ಷಗಳ ಆಗ್ರಹ

ಪಿಡಬ್ಲ್ಯುಡಿ ಇಲಾಖೆಯಿಂದ ಸುಮಾರು 10 ವರ್ಷಗಳ ಹಿಂದೆ ಅದೇ ವೈಂಗಂಗಾ ನದಿಯಲ್ಲಿ ನಿರ್ಮಿಸಲಾದ ಮತ್ತೊಂದು ಸೇತುವೆ ಭೀಮ್‌ಗಡ್ ಅಣೆಕಟ್ಟಿನಿಂದ ಕೇವಲ ಮೂರು ಕಿಲೋಮೀಟರ್ ದೂರದಲ್ಲಿದೆ, ಇದರಿಂದ ಕಳೆದ ಎರಡು ದಿನಗಳಲ್ಲಿ ಸುಮಾರು 2.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.

ಈ ನಡುವೆ, ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಧ್ಯ ಮಧ್ಯಪ್ರದೇಶದ ಮಹಾಕೋಷಲ್‌ ಪ್ರದೇಶದ ಪ್ರಮುಖ ನದಿಗಳಾದ ನರ್ಮದಾ, ಪೆಂಚ್ ಮತ್ತು ವೈಂಗಂಗ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಕನಿಷ್ಠ 12 ಜಿಲ್ಲೆಗಳಲ್ಲಿ ಸಾವಿರಾರು ಜನರ ಮೇಲೆ ಪರಿಣಾಮ ಬೀರಿದೆ.

ಹೋಶಂಗನಾಡ್, ಭೋಪಾಲ್, ಚಿಂದ್ವಾರ, ಸೆಹೋರ್, ರೈಸನ್, ನರಸಿಂಗ್‌ಪುರ, ಸಿಯೋನಿ, ಬಾಲಘಾಟ್, ಹರ್ಡಾ, ವಿದಿಶಾ ಮತ್ತು ದೇವಾಸ್ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಪ್ರವಾಹ ಪೀಡಿತ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಸ್ಥಳೀಯ ಆಡಳಿತ ಮತ್ತು ಪೊಲೀಸ್, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಹಾಗೂ ಭಾರತೀಯ ಸೇನೆ ನಡೆಸುತ್ತಿರುವ ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನಾ ತಂಡಗಳು ಈವರೆಗೆ ಸುಮಾರು 11,000 ಜನರನ್ನು ರಕ್ಷಿಸಿದೆ.

ರಾಜ್ಯದ ಒಟ್ಟು 251 ಜಲಾಶಯಗಳಲ್ಲಿ 120 ರಷ್ಟು ತುಂಬಿದ್ದು, ಹೆಚ್ಚುವರಿ ನೀರನ್ನು ಹೊರಹಾಕಲು ಅಣೆಕಟ್ಟು ಗೇಟ್‌ಗಳನ್ನು ತೆರೆಯಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ ತನಕ 815.2 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ: ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...