Homeಚಳವಳಿಆದಿವಾಸಿಗಳನ್ನು ಒಕ್ಕಲೆಬ್ಬಿಸಿದ ಮಧ್ಯಪ್ರದೇಶ ಸರ್ಕಾರ: ವ್ಯಾಪಕ ಖಂಡನೆ

ಆದಿವಾಸಿಗಳನ್ನು ಒಕ್ಕಲೆಬ್ಬಿಸಿದ ಮಧ್ಯಪ್ರದೇಶ ಸರ್ಕಾರ: ವ್ಯಾಪಕ ಖಂಡನೆ

- Advertisement -
- Advertisement -

ಜುಲೈ 14 ರಂದು ಮಧ್ಯಪ್ರದೇಶ, ಖಂಡವಾ ಜಿಲ್ಲೆಯ ಜಿಲ್ಲಾಡಳಿತದ ಅಧಿಕಾರಿಗಳು 40 ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳನ್ನು ಬಲವಂತವಾಗಿ ಒಕ್ಕಲೆಬ್ಬಿಸಿದ್ದಾರೆ ಎಂದು ಜಾಗೃತ ಆದಿವಾಸಿ ದಲಿತ ಸಂಘಟನೆ ಆರೋಪಿಸಿದ್ದು, ಸರ್ಕಾರದ ವಿರುದ್ಧ ಕಿಡಿಕಾರಿದೆ.

40 ಆದಿವಾಸಿ ಕುಟುಂಬಗಳು ಅಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡು ನೆಲೆಸಿದ್ದಾರೆ ಎಂದು ಆರೋಪಿಸಿ ಜಿಲ್ಲಾಡಳಿತ ಅರಣ್ಯ ಇಲಾಖೆ ಸಹಾಯದಿಂದ ಆದಿವಾಸಿಗಳ ಮನೆ-ಗುಡಿಸಲುಗಳನ್ನು ನೆಲಸಮ ಮಾಡಿ ನಾಶಗೊಳಿಸಿದ್ದಾರೆ.

ಅರಣ್ಯ ಇಲಾಖೆ ಜೊತೆಗೂಡಿ ನೆರೆಯ ಹಳ್ಳಿಯ ಜನರ ಗುಂಪು ಆದಿವಾಸಿಗಳ ಎಲ್ಲ ಆಹಾರಧಾನ್ಯ, ಮನೆಬಳಕೆಯ ವಸ್ತುಗಳು, ದನ, ಜಾನುವಾರುಗಳನ್ನು ಅಪಹರಿಸಿದ್ದಾರೆ. ಆದಿವಾಸಿಗಳಿಗಾಗಿ ಹೋರಾಡುವ  ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಸಂಘಟನೆ ಆರೋಪಿಸಿದೆ.

ಇದನ್ನೂ ಓದಿ: ಕೆ.ಆರ್‌ ಪೇಟೆ: ನಾಲೆ ಆಧುನೀಕರಣ ಹೆಸರಲ್ಲಿ 500 ಕೋಟಿ ಲೂಟಿ ಆರೋಪ; ಲೋಕಾಯುಕ್ತದಿಂದ ಪರಿಶೀಲನೆ!

ತಕ್ಷಣ ಮಧ್ಯಪ್ರದೇಶ ಸರ್ಕಾರ ಆದಿವಾಸಿ ಕುಟುಂಬಗಳನ್ನು ಅಕ್ರಮವಾಗಿ ಹೊರಹಾಕುವುದು, ಹಲ್ಲೆ ಮಾಡುವುದು ಮತ್ತು ಲೂಟಿ ಮಾಡಿದ್ದಕ್ಕಾಗಿ ಡಿಎಫ್‌ಒ ಚರಣ್ ಸಿಂಗ್ ಮತ್ತು ಇತರ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯಡಿ  ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಅರಣ್ಯ ಹಕ್ಕುಗಳ ಕಾಯ್ದೆ 2006 ರ ಉಲ್ಲಂಘನೆಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದೆ.

 

 

ಆದಿವಾಸಿಗಳ ಮೇಲೆ ಕಾನೂನುಬಾಹಿರ ಹಲ್ಲೆ, ಅಪಹರಣ ಮಾಡಿದ್ದಕ್ಕಾಗಿ ದೌರ್ಜನ್ಯ ತಡೆ ಕಾಯ್ದೆ 1989 ರ ಅಡಿಯಲ್ಲಿ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ನೌಕರರ ಮೇಲೆ ಪ್ರಕರಣ ದಾಖಲಿಸಬೇಕು ಮತ್ತು ಅವರನ್ನು ಬಂಧಿಸಬೇಕು. ಒಕ್ಕಲೆಬ್ಬಿಸಿರುವ ಕುಟುಂಬಗಳಿಗೆ ಪಡಿತರ ರೂಪದಲ್ಲಿ ತಕ್ಷಣ ಪರಿಹಾರ ನೀಡಬೇಕು. ಅರಣ್ಯ ಇಲಾಖೆಯ ಅಕ್ರಮ ಒಕ್ಕಲೆಬ್ಬಿಸುವಿಕೆಯಿಂದ ಉಂಟಾದ ನಷ್ಟವನ್ನು ಸರಿದೂಗಿಸಬೇಕು. ಬಂಧನಕ್ಕೊಳಗಾದವರಿಂದ ಕಳವು ಮಾಡಿದ ಮೊಬೈಲ್ ಫೋನ್‌ಗಳನ್ನು ತಕ್ಷಣವೇ ಹಿಂದಿರುಗಿಸಬೇಕು, ಬಂಧಿತರಿಂದ ಬಲವಂತವಾಗಿ ಸಹಿ ಪಡೆದಿರುವ ಎಲ್ಲಾ ಕಾಗದ ಪತ್ರಗಳನ್ನು ಸಂಪೂರ್ಣವಾಗಿ ವಜಾಗೊಳಿಸಬೇಕು ಎಂದು ಜಾಗೃತ ಆದಿವಾಸಿ ದಲಿತ ಸಂಘಟನೆ ಆಗ್ರಹಿಸಿದೆ.


ಇದನ್ನೂ ಓದಿ: ಯಾವ ಮಹಾತ್ಮರನ್ನು ಮನೆಗೆ ಕರೆಯಬಾರದಪ್ಪ…: ದೇವನೂರು ಮಹಾದೇವ ವಿಷಾಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...