Homeಮುಖಪುಟಕೊರೊನಾ ಎದುರಿಸಲು ಬಾಬಾ ರಾಮ್‌ದೇವ್ ಸಲಹೆ ಪಡೆದ ಮಧ್ಯಪ್ರದೇಶ ಸರ್ಕಾರ

ಕೊರೊನಾ ಎದುರಿಸಲು ಬಾಬಾ ರಾಮ್‌ದೇವ್ ಸಲಹೆ ಪಡೆದ ಮಧ್ಯಪ್ರದೇಶ ಸರ್ಕಾರ

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿ, ಪ್ರತಿಭಟನೆಗೆ ಕಾರಣವಾಗಿತ್ತು

- Advertisement -
- Advertisement -

ಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ವೈದ್ಯರ ಆಕ್ರೋಶಕ್ಕೆ ಕಾರಣವಾಗಿದ್ದ ಬಾಬಾ ರಾಮ್‌ದೇವ್ ಅವರಿಂದ ಮಧ್ಯಪ್ರದೇಶ ಸರ್ಕಾರ ರಾಜ್ಯದಲ್ಲಿ ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ಸಲಹೆ ಪಡೆದಿದೆ.

ಪ್ರಾಣಾಯಾಮ ಮತ್ತು ಆಯುರ್ವೇದ ಔಷಧಿಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಕೊರೊನಾ ಸೋಂಕನ್ನು ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್  ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ 52 ಜಿಲ್ಲೆಗಳ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಬಾಬಾ ರಾಮದೇವ್, “ಒಬ್ಬ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದ್ದರೇ, ಕೊರೊನಾ ಯಾವುದೇ ಹಾನಿ ಮಾಡಲಾರದು ಅವರು. ಆಯುರ್ವೇದ ಔಷಧಿಗಳ ಬಳಕೆ ಮತ್ತು ಪ್ರಾಣಾಯಾಮಗಳನ್ನು ಮಾಡುವುದರಿಂದ ದೇಹದಲ್ಲಿ  ರೋಗನಿರೋಧಕ ಶಕ್ತಿ ಹೆಚ್ಚುತ್ತದೆ” ಎಮದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ಆರೋಗ್ಯ ಸಚಿವ ನರೋತ್ತಮ್ ಮಿಶ್ರಾ, ಮುಖ್ಯ ಕಾರ್ಯದರ್ಶಿ ಇಕ್ಬಾಲ್ ಸಿಂಗ್ ಬೈನ್ಸ್, ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೋಹ್ರಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಮೊಹಮ್ಮದ್ ಸುಲೇಮಾನ್ ಸಭೆಯಲ್ಲಿ ಉಪಸ್ಥಿತರಿದ್ದರು, ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೊರೊನಾ ಎದುರಿಸಲು ಆಯುರ್ವೇದ ಔಷಧಿಗಳು ಮತ್ತು ಪ್ರಾಣಾಯಾಮಗಳ ಬಳಕೆಯ ಬಗ್ಗೆ ಬಾಬಾ ರಾಮದೇವ್ ಆರೋಗ್ಯ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಬಾಬಾ ರಾಮದೇವ್ ಗಿಡಮೂಲಿಕೆಗಳಾದ ಅಶ್ವಗಂಧ ( withania somnifera) ಮತ್ತು ಗಿಲೋಯ್ (tinospora cordifolia ) ಸೋಂಕಿನ ಸರಪಳಿ ಮುರಿಯಲು ಪರಿಣಾಮಕಾರಿ ಎಂದು ಹೇಳಿದ್ದಾರೆ. ಜೊತೆಗೆ ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಇವುಗಳ ಬಳಕೆಯು ಉತ್ತಮ ಫಲಿತಾಂಶಗಳನ್ನು ನೀಡಿದೆ” ಎಂದು ಹೇಳಿದ್ದಾರೆ.

ಉಸಿರಾಟದ ವ್ಯಾಯಾಮಕ್ಕೆ ಸಂಬಂಧಿಸಿದಂತೆ, ಸೋಂಕನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗುವ 6  ಬಗೆಯ ಪ್ರಾಣಾಯಾಮಗಳನ್ನು ಪಟ್ಟಿ ಮಾಡಿ ನೀಡಿದ್ದಾರೆ. ಕೊರೊನಾ ರೋಗಿಗಳು ಪ್ರಾಣಾಯಾಮವನ್ನೂ ಮಾಡಬಹುದು. ಇದು ತ್ವರಿತ ಪರಿಹಾರ ನೀಡುತ್ತದೆ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಮಧ್ಯಪ್ರದೇಶ ರಾಜ್ಯದಲ್ಲಿ ಸುಮಾರು 2 ಕೋಟಿ ಜನರಿಗೆ ಕಷಾಯದ ಸಿರಪ್ ಪ್ಯಾಕೆಟ್‌ಗಳನ್ನು ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಹ ಕಷಾಯದ ಸಿರಪ್ ನೀಡಲಾಗುತ್ತಿದೆ. ಆಯುರ್ವೇದ ಔಷಧಿಗಳ ಬಳಕೆ ಮತ್ತು ಪ್ರಾಣಾಯಾಮವು ರೋಗದ ವಿರುದ್ಧದ ಯುದ್ಧವನ್ನು ಗೆಲ್ಲುವಲ್ಲಿ ಬಹಳ ಸಹಾಯ ಮಾಡುತ್ತದೆ ಎಂದು ರಾಜ್ಯದಲ್ಲಿ ಆಯುರ್ವೇದ ಔಷಧಿಗಳ ವಿತರಣೆಯ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿವರಿಸಿದ್ದಾರೆ.

“ಏಳು ಆಯುರ್ವೇದ ತಜ್ಞರ ತಂಡವು ಕೊರೊನಾಗೆ ಚಿಕಿತ್ಸೆ ನೀಡುವಲ್ಲಿ ಆಯುರ್ವೇದ ಔಷಧಿಗಳ ಕುರಿತು 19 ಜಿಲ್ಲೆಗಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ನಡೆಸುತ್ತಿದೆ. ನಾವು ಸಂಶೋಧನಾ ಪ್ರಬಂಧವನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ ಮತ್ತು ಈಗಾಗಲೇ ಅದಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದೇವೆ ”ಎಂದು ಆಯುಷ್ ಇಲಾಖೆ ಕಾರ್ಯದರ್ಶಿ ಎಂ.ಕೆ ಡಾ.ಅಗ್ರಾವಾಲ್ ತಿಳಿಸಿದ್ದಾರೆ.

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿತ್ತು. ಬಾಬಾ ರಾಮ್‌ ದೇವ್‌ ಅವರ ಇಂಗ್ಲೀಷ್‌ ಮೆಡಿಸಿನ್‌ ಎಂಬ ಆಧುನಿಕ ವೈದ್ಯ ಪದ್ಧತಿ ಬೋಗಸ್‌ ಹೇಳಿಕೆಗೆ ದೇಶಾದ್ಯಂತ ನೂರಾರು ಸಂಖ್ಯೆಯ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ನಡೆಸಿದ್ದರು. ಭಾರತೀಯ ವೈದ್ಯಕೀಯ ಸಂಘ ರಾಮ್‌ದೇವ್ ವಿರುದ್ಧ 1,000 ಕೋಟಿಯ ಮಾನನಷ್ಟ ಮೊಕದ್ದಮೆ ಹೂಡಿದೆ.


ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...