Homeಮುಖಪುಟಕೊರೊನಾ ಎದುರಿಸಲು ಬಾಬಾ ರಾಮ್‌ದೇವ್ ಸಲಹೆ ಪಡೆದ ಮಧ್ಯಪ್ರದೇಶ ಸರ್ಕಾರ

ಕೊರೊನಾ ಎದುರಿಸಲು ಬಾಬಾ ರಾಮ್‌ದೇವ್ ಸಲಹೆ ಪಡೆದ ಮಧ್ಯಪ್ರದೇಶ ಸರ್ಕಾರ

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿ, ಪ್ರತಿಭಟನೆಗೆ ಕಾರಣವಾಗಿತ್ತು

- Advertisement -
- Advertisement -

ಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ವೈದ್ಯರ ಆಕ್ರೋಶಕ್ಕೆ ಕಾರಣವಾಗಿದ್ದ ಬಾಬಾ ರಾಮ್‌ದೇವ್ ಅವರಿಂದ ಮಧ್ಯಪ್ರದೇಶ ಸರ್ಕಾರ ರಾಜ್ಯದಲ್ಲಿ ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ಸಲಹೆ ಪಡೆದಿದೆ.

ಪ್ರಾಣಾಯಾಮ ಮತ್ತು ಆಯುರ್ವೇದ ಔಷಧಿಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಕೊರೊನಾ ಸೋಂಕನ್ನು ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್  ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ 52 ಜಿಲ್ಲೆಗಳ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಬಾಬಾ ರಾಮದೇವ್, “ಒಬ್ಬ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದ್ದರೇ, ಕೊರೊನಾ ಯಾವುದೇ ಹಾನಿ ಮಾಡಲಾರದು ಅವರು. ಆಯುರ್ವೇದ ಔಷಧಿಗಳ ಬಳಕೆ ಮತ್ತು ಪ್ರಾಣಾಯಾಮಗಳನ್ನು ಮಾಡುವುದರಿಂದ ದೇಹದಲ್ಲಿ  ರೋಗನಿರೋಧಕ ಶಕ್ತಿ ಹೆಚ್ಚುತ್ತದೆ” ಎಮದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ಆರೋಗ್ಯ ಸಚಿವ ನರೋತ್ತಮ್ ಮಿಶ್ರಾ, ಮುಖ್ಯ ಕಾರ್ಯದರ್ಶಿ ಇಕ್ಬಾಲ್ ಸಿಂಗ್ ಬೈನ್ಸ್, ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೋಹ್ರಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಮೊಹಮ್ಮದ್ ಸುಲೇಮಾನ್ ಸಭೆಯಲ್ಲಿ ಉಪಸ್ಥಿತರಿದ್ದರು, ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೊರೊನಾ ಎದುರಿಸಲು ಆಯುರ್ವೇದ ಔಷಧಿಗಳು ಮತ್ತು ಪ್ರಾಣಾಯಾಮಗಳ ಬಳಕೆಯ ಬಗ್ಗೆ ಬಾಬಾ ರಾಮದೇವ್ ಆರೋಗ್ಯ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಬಾಬಾ ರಾಮದೇವ್ ಗಿಡಮೂಲಿಕೆಗಳಾದ ಅಶ್ವಗಂಧ ( withania somnifera) ಮತ್ತು ಗಿಲೋಯ್ (tinospora cordifolia ) ಸೋಂಕಿನ ಸರಪಳಿ ಮುರಿಯಲು ಪರಿಣಾಮಕಾರಿ ಎಂದು ಹೇಳಿದ್ದಾರೆ. ಜೊತೆಗೆ ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಇವುಗಳ ಬಳಕೆಯು ಉತ್ತಮ ಫಲಿತಾಂಶಗಳನ್ನು ನೀಡಿದೆ” ಎಂದು ಹೇಳಿದ್ದಾರೆ.

ಉಸಿರಾಟದ ವ್ಯಾಯಾಮಕ್ಕೆ ಸಂಬಂಧಿಸಿದಂತೆ, ಸೋಂಕನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗುವ 6  ಬಗೆಯ ಪ್ರಾಣಾಯಾಮಗಳನ್ನು ಪಟ್ಟಿ ಮಾಡಿ ನೀಡಿದ್ದಾರೆ. ಕೊರೊನಾ ರೋಗಿಗಳು ಪ್ರಾಣಾಯಾಮವನ್ನೂ ಮಾಡಬಹುದು. ಇದು ತ್ವರಿತ ಪರಿಹಾರ ನೀಡುತ್ತದೆ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಮಧ್ಯಪ್ರದೇಶ ರಾಜ್ಯದಲ್ಲಿ ಸುಮಾರು 2 ಕೋಟಿ ಜನರಿಗೆ ಕಷಾಯದ ಸಿರಪ್ ಪ್ಯಾಕೆಟ್‌ಗಳನ್ನು ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಹ ಕಷಾಯದ ಸಿರಪ್ ನೀಡಲಾಗುತ್ತಿದೆ. ಆಯುರ್ವೇದ ಔಷಧಿಗಳ ಬಳಕೆ ಮತ್ತು ಪ್ರಾಣಾಯಾಮವು ರೋಗದ ವಿರುದ್ಧದ ಯುದ್ಧವನ್ನು ಗೆಲ್ಲುವಲ್ಲಿ ಬಹಳ ಸಹಾಯ ಮಾಡುತ್ತದೆ ಎಂದು ರಾಜ್ಯದಲ್ಲಿ ಆಯುರ್ವೇದ ಔಷಧಿಗಳ ವಿತರಣೆಯ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿವರಿಸಿದ್ದಾರೆ.

“ಏಳು ಆಯುರ್ವೇದ ತಜ್ಞರ ತಂಡವು ಕೊರೊನಾಗೆ ಚಿಕಿತ್ಸೆ ನೀಡುವಲ್ಲಿ ಆಯುರ್ವೇದ ಔಷಧಿಗಳ ಕುರಿತು 19 ಜಿಲ್ಲೆಗಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ನಡೆಸುತ್ತಿದೆ. ನಾವು ಸಂಶೋಧನಾ ಪ್ರಬಂಧವನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ ಮತ್ತು ಈಗಾಗಲೇ ಅದಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದೇವೆ ”ಎಂದು ಆಯುಷ್ ಇಲಾಖೆ ಕಾರ್ಯದರ್ಶಿ ಎಂ.ಕೆ ಡಾ.ಅಗ್ರಾವಾಲ್ ತಿಳಿಸಿದ್ದಾರೆ.

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿತ್ತು. ಬಾಬಾ ರಾಮ್‌ ದೇವ್‌ ಅವರ ಇಂಗ್ಲೀಷ್‌ ಮೆಡಿಸಿನ್‌ ಎಂಬ ಆಧುನಿಕ ವೈದ್ಯ ಪದ್ಧತಿ ಬೋಗಸ್‌ ಹೇಳಿಕೆಗೆ ದೇಶಾದ್ಯಂತ ನೂರಾರು ಸಂಖ್ಯೆಯ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ನಡೆಸಿದ್ದರು. ಭಾರತೀಯ ವೈದ್ಯಕೀಯ ಸಂಘ ರಾಮ್‌ದೇವ್ ವಿರುದ್ಧ 1,000 ಕೋಟಿಯ ಮಾನನಷ್ಟ ಮೊಕದ್ದಮೆ ಹೂಡಿದೆ.


ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...