Homeಮುಖಪುಟಕೊರೊನಾ ಎದುರಿಸಲು ಬಾಬಾ ರಾಮ್‌ದೇವ್ ಸಲಹೆ ಪಡೆದ ಮಧ್ಯಪ್ರದೇಶ ಸರ್ಕಾರ

ಕೊರೊನಾ ಎದುರಿಸಲು ಬಾಬಾ ರಾಮ್‌ದೇವ್ ಸಲಹೆ ಪಡೆದ ಮಧ್ಯಪ್ರದೇಶ ಸರ್ಕಾರ

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿ, ಪ್ರತಿಭಟನೆಗೆ ಕಾರಣವಾಗಿತ್ತು

- Advertisement -
- Advertisement -

ಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ವೈದ್ಯರ ಆಕ್ರೋಶಕ್ಕೆ ಕಾರಣವಾಗಿದ್ದ ಬಾಬಾ ರಾಮ್‌ದೇವ್ ಅವರಿಂದ ಮಧ್ಯಪ್ರದೇಶ ಸರ್ಕಾರ ರಾಜ್ಯದಲ್ಲಿ ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ಸಲಹೆ ಪಡೆದಿದೆ.

ಪ್ರಾಣಾಯಾಮ ಮತ್ತು ಆಯುರ್ವೇದ ಔಷಧಿಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಕೊರೊನಾ ಸೋಂಕನ್ನು ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್  ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ 52 ಜಿಲ್ಲೆಗಳ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಬಾಬಾ ರಾಮದೇವ್, “ಒಬ್ಬ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದ್ದರೇ, ಕೊರೊನಾ ಯಾವುದೇ ಹಾನಿ ಮಾಡಲಾರದು ಅವರು. ಆಯುರ್ವೇದ ಔಷಧಿಗಳ ಬಳಕೆ ಮತ್ತು ಪ್ರಾಣಾಯಾಮಗಳನ್ನು ಮಾಡುವುದರಿಂದ ದೇಹದಲ್ಲಿ  ರೋಗನಿರೋಧಕ ಶಕ್ತಿ ಹೆಚ್ಚುತ್ತದೆ” ಎಮದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ಆರೋಗ್ಯ ಸಚಿವ ನರೋತ್ತಮ್ ಮಿಶ್ರಾ, ಮುಖ್ಯ ಕಾರ್ಯದರ್ಶಿ ಇಕ್ಬಾಲ್ ಸಿಂಗ್ ಬೈನ್ಸ್, ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೋಹ್ರಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಮೊಹಮ್ಮದ್ ಸುಲೇಮಾನ್ ಸಭೆಯಲ್ಲಿ ಉಪಸ್ಥಿತರಿದ್ದರು, ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೊರೊನಾ ಎದುರಿಸಲು ಆಯುರ್ವೇದ ಔಷಧಿಗಳು ಮತ್ತು ಪ್ರಾಣಾಯಾಮಗಳ ಬಳಕೆಯ ಬಗ್ಗೆ ಬಾಬಾ ರಾಮದೇವ್ ಆರೋಗ್ಯ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಬಾಬಾ ರಾಮದೇವ್ ಗಿಡಮೂಲಿಕೆಗಳಾದ ಅಶ್ವಗಂಧ ( withania somnifera) ಮತ್ತು ಗಿಲೋಯ್ (tinospora cordifolia ) ಸೋಂಕಿನ ಸರಪಳಿ ಮುರಿಯಲು ಪರಿಣಾಮಕಾರಿ ಎಂದು ಹೇಳಿದ್ದಾರೆ. ಜೊತೆಗೆ ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಇವುಗಳ ಬಳಕೆಯು ಉತ್ತಮ ಫಲಿತಾಂಶಗಳನ್ನು ನೀಡಿದೆ” ಎಂದು ಹೇಳಿದ್ದಾರೆ.

ಉಸಿರಾಟದ ವ್ಯಾಯಾಮಕ್ಕೆ ಸಂಬಂಧಿಸಿದಂತೆ, ಸೋಂಕನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗುವ 6  ಬಗೆಯ ಪ್ರಾಣಾಯಾಮಗಳನ್ನು ಪಟ್ಟಿ ಮಾಡಿ ನೀಡಿದ್ದಾರೆ. ಕೊರೊನಾ ರೋಗಿಗಳು ಪ್ರಾಣಾಯಾಮವನ್ನೂ ಮಾಡಬಹುದು. ಇದು ತ್ವರಿತ ಪರಿಹಾರ ನೀಡುತ್ತದೆ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಮಧ್ಯಪ್ರದೇಶ ರಾಜ್ಯದಲ್ಲಿ ಸುಮಾರು 2 ಕೋಟಿ ಜನರಿಗೆ ಕಷಾಯದ ಸಿರಪ್ ಪ್ಯಾಕೆಟ್‌ಗಳನ್ನು ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಹ ಕಷಾಯದ ಸಿರಪ್ ನೀಡಲಾಗುತ್ತಿದೆ. ಆಯುರ್ವೇದ ಔಷಧಿಗಳ ಬಳಕೆ ಮತ್ತು ಪ್ರಾಣಾಯಾಮವು ರೋಗದ ವಿರುದ್ಧದ ಯುದ್ಧವನ್ನು ಗೆಲ್ಲುವಲ್ಲಿ ಬಹಳ ಸಹಾಯ ಮಾಡುತ್ತದೆ ಎಂದು ರಾಜ್ಯದಲ್ಲಿ ಆಯುರ್ವೇದ ಔಷಧಿಗಳ ವಿತರಣೆಯ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿವರಿಸಿದ್ದಾರೆ.

“ಏಳು ಆಯುರ್ವೇದ ತಜ್ಞರ ತಂಡವು ಕೊರೊನಾಗೆ ಚಿಕಿತ್ಸೆ ನೀಡುವಲ್ಲಿ ಆಯುರ್ವೇದ ಔಷಧಿಗಳ ಕುರಿತು 19 ಜಿಲ್ಲೆಗಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ನಡೆಸುತ್ತಿದೆ. ನಾವು ಸಂಶೋಧನಾ ಪ್ರಬಂಧವನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ ಮತ್ತು ಈಗಾಗಲೇ ಅದಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದೇವೆ ”ಎಂದು ಆಯುಷ್ ಇಲಾಖೆ ಕಾರ್ಯದರ್ಶಿ ಎಂ.ಕೆ ಡಾ.ಅಗ್ರಾವಾಲ್ ತಿಳಿಸಿದ್ದಾರೆ.

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿತ್ತು. ಬಾಬಾ ರಾಮ್‌ ದೇವ್‌ ಅವರ ಇಂಗ್ಲೀಷ್‌ ಮೆಡಿಸಿನ್‌ ಎಂಬ ಆಧುನಿಕ ವೈದ್ಯ ಪದ್ಧತಿ ಬೋಗಸ್‌ ಹೇಳಿಕೆಗೆ ದೇಶಾದ್ಯಂತ ನೂರಾರು ಸಂಖ್ಯೆಯ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ನಡೆಸಿದ್ದರು. ಭಾರತೀಯ ವೈದ್ಯಕೀಯ ಸಂಘ ರಾಮ್‌ದೇವ್ ವಿರುದ್ಧ 1,000 ಕೋಟಿಯ ಮಾನನಷ್ಟ ಮೊಕದ್ದಮೆ ಹೂಡಿದೆ.


ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...