Homeಮುಖಪುಟಕೊರೊನಾ ಎದುರಿಸಲು ಬಾಬಾ ರಾಮ್‌ದೇವ್ ಸಲಹೆ ಪಡೆದ ಮಧ್ಯಪ್ರದೇಶ ಸರ್ಕಾರ

ಕೊರೊನಾ ಎದುರಿಸಲು ಬಾಬಾ ರಾಮ್‌ದೇವ್ ಸಲಹೆ ಪಡೆದ ಮಧ್ಯಪ್ರದೇಶ ಸರ್ಕಾರ

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿ, ಪ್ರತಿಭಟನೆಗೆ ಕಾರಣವಾಗಿತ್ತು

- Advertisement -
- Advertisement -

ಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ, ವೈದ್ಯರ ಆಕ್ರೋಶಕ್ಕೆ ಕಾರಣವಾಗಿದ್ದ ಬಾಬಾ ರಾಮ್‌ದೇವ್ ಅವರಿಂದ ಮಧ್ಯಪ್ರದೇಶ ಸರ್ಕಾರ ರಾಜ್ಯದಲ್ಲಿ ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ಸಲಹೆ ಪಡೆದಿದೆ.

ಪ್ರಾಣಾಯಾಮ ಮತ್ತು ಆಯುರ್ವೇದ ಔಷಧಿಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಕೊರೊನಾ ಸೋಂಕನ್ನು ಅನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ಯೋಗ ಗುರು ಬಾಬಾ ರಾಮದೇವ್  ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ 52 ಜಿಲ್ಲೆಗಳ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಬಾಬಾ ರಾಮದೇವ್, “ಒಬ್ಬ ವ್ಯಕ್ತಿಯಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದ್ದರೇ, ಕೊರೊನಾ ಯಾವುದೇ ಹಾನಿ ಮಾಡಲಾರದು ಅವರು. ಆಯುರ್ವೇದ ಔಷಧಿಗಳ ಬಳಕೆ ಮತ್ತು ಪ್ರಾಣಾಯಾಮಗಳನ್ನು ಮಾಡುವುದರಿಂದ ದೇಹದಲ್ಲಿ  ರೋಗನಿರೋಧಕ ಶಕ್ತಿ ಹೆಚ್ಚುತ್ತದೆ” ಎಮದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬಾಬಾ ರಾಮ್‌ದೇವ್‌ ವಿರುದ್ಧ ಕಪ್ಪು ರಿಬ್ಬನ್‌ ಧರಿಸಿ ಪ್ರತಿಭಟನೆಗೆ ಮುಂದಾದ ವೈದ್ಯರು

ಆರೋಗ್ಯ ಸಚಿವ ನರೋತ್ತಮ್ ಮಿಶ್ರಾ, ಮುಖ್ಯ ಕಾರ್ಯದರ್ಶಿ ಇಕ್ಬಾಲ್ ಸಿಂಗ್ ಬೈನ್ಸ್, ಪೊಲೀಸ್ ಮಹಾನಿರ್ದೇಶಕ ವಿವೇಕ್ ಜೋಹ್ರಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ಮೊಹಮ್ಮದ್ ಸುಲೇಮಾನ್ ಸಭೆಯಲ್ಲಿ ಉಪಸ್ಥಿತರಿದ್ದರು, ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೊರೊನಾ ಎದುರಿಸಲು ಆಯುರ್ವೇದ ಔಷಧಿಗಳು ಮತ್ತು ಪ್ರಾಣಾಯಾಮಗಳ ಬಳಕೆಯ ಬಗ್ಗೆ ಬಾಬಾ ರಾಮದೇವ್ ಆರೋಗ್ಯ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಬಾಬಾ ರಾಮದೇವ್ ಗಿಡಮೂಲಿಕೆಗಳಾದ ಅಶ್ವಗಂಧ ( withania somnifera) ಮತ್ತು ಗಿಲೋಯ್ (tinospora cordifolia ) ಸೋಂಕಿನ ಸರಪಳಿ ಮುರಿಯಲು ಪರಿಣಾಮಕಾರಿ ಎಂದು ಹೇಳಿದ್ದಾರೆ. ಜೊತೆಗೆ ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ಇವುಗಳ ಬಳಕೆಯು ಉತ್ತಮ ಫಲಿತಾಂಶಗಳನ್ನು ನೀಡಿದೆ” ಎಂದು ಹೇಳಿದ್ದಾರೆ.

ಉಸಿರಾಟದ ವ್ಯಾಯಾಮಕ್ಕೆ ಸಂಬಂಧಿಸಿದಂತೆ, ಸೋಂಕನ್ನು ನಿಯಂತ್ರಣದಲ್ಲಿಡಲು ಸಹಾಯಕವಾಗುವ 6  ಬಗೆಯ ಪ್ರಾಣಾಯಾಮಗಳನ್ನು ಪಟ್ಟಿ ಮಾಡಿ ನೀಡಿದ್ದಾರೆ. ಕೊರೊನಾ ರೋಗಿಗಳು ಪ್ರಾಣಾಯಾಮವನ್ನೂ ಮಾಡಬಹುದು. ಇದು ತ್ವರಿತ ಪರಿಹಾರ ನೀಡುತ್ತದೆ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ.

ಮಧ್ಯಪ್ರದೇಶ ರಾಜ್ಯದಲ್ಲಿ ಸುಮಾರು 2 ಕೋಟಿ ಜನರಿಗೆ ಕಷಾಯದ ಸಿರಪ್ ಪ್ಯಾಕೆಟ್‌ಗಳನ್ನು ನೀಡಲಾಗಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಹ ಕಷಾಯದ ಸಿರಪ್ ನೀಡಲಾಗುತ್ತಿದೆ. ಆಯುರ್ವೇದ ಔಷಧಿಗಳ ಬಳಕೆ ಮತ್ತು ಪ್ರಾಣಾಯಾಮವು ರೋಗದ ವಿರುದ್ಧದ ಯುದ್ಧವನ್ನು ಗೆಲ್ಲುವಲ್ಲಿ ಬಹಳ ಸಹಾಯ ಮಾಡುತ್ತದೆ ಎಂದು ರಾಜ್ಯದಲ್ಲಿ ಆಯುರ್ವೇದ ಔಷಧಿಗಳ ವಿತರಣೆಯ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿವರಿಸಿದ್ದಾರೆ.

“ಏಳು ಆಯುರ್ವೇದ ತಜ್ಞರ ತಂಡವು ಕೊರೊನಾಗೆ ಚಿಕಿತ್ಸೆ ನೀಡುವಲ್ಲಿ ಆಯುರ್ವೇದ ಔಷಧಿಗಳ ಕುರಿತು 19 ಜಿಲ್ಲೆಗಳಲ್ಲಿ ಕ್ಲಿನಿಕಲ್ ಪ್ರಯೋಗವನ್ನು ನಡೆಸುತ್ತಿದೆ. ನಾವು ಸಂಶೋಧನಾ ಪ್ರಬಂಧವನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ ಮತ್ತು ಈಗಾಗಲೇ ಅದಕ್ಕೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದೇವೆ ”ಎಂದು ಆಯುಷ್ ಇಲಾಖೆ ಕಾರ್ಯದರ್ಶಿ ಎಂ.ಕೆ ಡಾ.ಅಗ್ರಾವಾಲ್ ತಿಳಿಸಿದ್ದಾರೆ.

ಅಲೋಪಥಿ ಚಿಕಿತ್ಸೆಯ ಕುರಿತು ಬಾಬಾ ರಾಮ್‌ದೇವ್‌ ಹೇಳಿಕೆ ದೇಶಾದ್ಯಂತ ವೈದ್ಯ ಸಮೂಹದಲ್ಲಿ ಆಕ್ರೋಶವನ್ನು ಹುಟ್ಟಿಸಿತ್ತು. ಬಾಬಾ ರಾಮ್‌ ದೇವ್‌ ಅವರ ಇಂಗ್ಲೀಷ್‌ ಮೆಡಿಸಿನ್‌ ಎಂಬ ಆಧುನಿಕ ವೈದ್ಯ ಪದ್ಧತಿ ಬೋಗಸ್‌ ಹೇಳಿಕೆಗೆ ದೇಶಾದ್ಯಂತ ನೂರಾರು ಸಂಖ್ಯೆಯ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ನಡೆಸಿದ್ದರು. ಭಾರತೀಯ ವೈದ್ಯಕೀಯ ಸಂಘ ರಾಮ್‌ದೇವ್ ವಿರುದ್ಧ 1,000 ಕೋಟಿಯ ಮಾನನಷ್ಟ ಮೊಕದ್ದಮೆ ಹೂಡಿದೆ.


ಇದನ್ನೂ ಓದಿ: ಬಾಬಾ ರಾಮದೇವ್ ವಿರುದ್ಧ 1,000 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...