Homeಮುಖಪುಟಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

‘ಲವ್ ಜಿಹಾದ್’ ಎಂಬ ಪದವನ್ನು ಈಗಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು.

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಲವ್ ಜಿಹಾದ್ ಎನ್ನುವ ಪದಬಳಕೆ ವ್ಯಾಪಕವಾಗುತ್ತಿದ್ದು, ಆದರೆ ಈ ಪದವನ್ನು ಬಳಸುತ್ತಿರುವವರು ಕೇವಲ ಬಿಜೆಪಿ ನಾಯಕರು ಮಾತ್ರ. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಇದರ ಕುರಿತು ಅಧಿಕೃತವಾಗಿ ನೀಡಿರುವ ಹೇಳಿಕೆಗೂ, ಈಗ ರಾಜ್ಯ ಸರ್ಕಾರಗಳು ಇದರ ಕುರಿತು ತೆಗೆದುಕೊಳ್ಳುತ್ತಿರುವ ನಿಲುವುಗಳು ದ್ವಂದ್ವವನ್ನು ಸೃಷ್ಟಿಸುತ್ತಿವೆ.

ಇದಕ್ಕೆ ಇನ್ನಷ್ಟು ಪುಷ್ಟಿ ನಿಡುವಂತೆ ಇದೀಗ ಮಧ್ಯಪ್ರದೇಶ ಸರ್ಕಾರ ಲವ್ ಜಿಹಾದ್ ನಿಯಂತ್ರಿಸಲು ಶೀಘ್ರವೇ ಶಾಸನ ರೂಪಿಸುವುದಾಗಿ ಹೇಳಿದೆ. ಆದರೆ ಕೇಂದ್ರ ಸರ್ಕಾರದ ಹೇಳಿಕೆಯ ಪ್ರಕಾರ ಇದುವರೆಗೂ ಯಾವುದೇ ಲವ್ ಜಿಹಾದ್ ಪ್ರಕರಣಗಳು ದಾಖಲಾಗಿಲ್ಲ ಎಂಬುದೇ ವಿಪರ್ಯಾಸ. ಈ ಮೊದಲು ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಬಿಜೆಪಿ ನೇತೃತ್ವದ ಕರ್ನಾಟಕ ಮತ್ತು ಹರಿಯಾಣ ಸರ್ಕಾರಗಳು ಹೇಳಿದ್ದವು.

ಈ ಕುರಿತು ಮಾತನಾಡಿದ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, “ಲವ್ ಜಿಹಾದ್ ಸಮಸ್ಯೆಯನ್ನು ಎದುರಿಸಲು ರಾಜ್ಯ ಸರ್ಕಾರ ಮುಂದಿನ ಅಧಿವೇಶನದಲ್ಲಿಯೇ ಕಾನೂನನ್ನು ಜಾರಿಗೆ ತರಲಿದ್ದು, ಇದನ್ನು ಉಲ್ಲಂಘಿಸಿದವರಿಗೆ 5 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’- ಸಿದ್ದರಾಮಯ್ಯ

ಆದರೆ ಫೆಬ್ರವರಿ 4 ರಂದು, ಮೋದಿ ಸರ್ಕಾರವು ಸಂಸತ್ತಿನಲ್ಲಿ ಲವ್‌ ಜಿಹಾದ್‌ ವಿಷಯದ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಅವರು ‘ಲವ್ ಜಿಹಾದ್ ’ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಲೋಕಸಭೆಗೆ ತಿಳಿಸಿದ್ದರು.

ಇದನ್ನೂ ಓದಿ: ’ಲವ್ ಜಿಹಾದ್’ ಸಾಮಾಜಿಕ ಪಿಡುಗು, ಇದರ ವಿರುದ್ದ ಕಠಿಣ ಕಾನೂನು: ಗೃಹ ಸಚಿವ

ಲೋಕಸಭೆಯಲ್ಲಿ ಲವ್‌ ಜಿಹಾದ್‌ ಬಗ್ಗೆ ಮೋದಿ ಸರ್ಕಾರ ಏನು ಹೇಳಿದೆ?

ಕೇರಳದ ಕಾಂಗ್ರೆಸ್ ಸಂಸದ ಬೆನ್ನಿ ಬೆಹಾನನ್ ಅವರು ಲೋಕಸಭೆಯಲ್ಲಿ ಮೋದಿ ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳು ಇಲ್ಲಿವೆ.

(ಎ) ಕೇರಳದಲ್ಲಿ ಲವ್ ಜಿಹಾದ್ ಪ್ರಕರಣವಿಲ್ಲ ಎಂದು ಕೇರಳ ಹೈಕೋರ್ಟ್‌ನ ವೀಕ್ಷಣೆಯ ಬಗ್ಗೆ ಸರ್ಕಾರಕ್ಕೆ ತಿಳಿದಿದೆಯೇ?

(ಬಿ) ಹಾಗಿದ್ದರೆ, ಅದರ ವಿವರಗಳೇನು? ಮತ್ತು

(ಸಿ) ಕಳೆದ ಎರಡು ವರ್ಷಗಳಲ್ಲಿ ಯಾವುದೇ ಕೇಂದ್ರ ಏಜೆನ್ಸಿಗಳು ಕೇರಳದಿಂದ ಲವ್ ಜಿಹಾದ್ ಪ್ರಕರಣವನ್ನು ವರದಿ ಮಾಡಿವೆಯೇ? ಹಾಗಿದ್ದಲ್ಲಿ, ಅದರ ವಿವರಗಳನ್ನು ನೀಡಿ.

ಈ ಪ್ರಶ್ನೆಗಳಿಗೆ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಅವರ ಸಂಪೂರ್ಣ ಪ್ರತಿಕ್ರಿಯೆ ಇಲ್ಲಿದೆ.

“ಸಂವಿಧಾನದ 25 ನೇ ವಿಧಿಯು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಧರ್ಮವನ್ನು ಅಭ್ಯಾಸ ಮಾಡಲು ಮತ್ತು ಪ್ರಚಾರ ಮಾಡಲು ಸ್ವಾತಂತ್ರ್ಯವನ್ನು ಒದಗಿಸುತ್ತದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ಅಭಿಪ್ರಾಯವನ್ನು ಎತ್ತಿಹಿಡಿದಿವೆ.”

ಇದನ್ನೂ ಓದಿ: ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

 

ಕೇರಳದಿಂದ ಅಂತರ್ ಧರ್ಮ -ನಂಬಿಕೆಯ ವಿವಾಹಗಳನ್ನು ಒಳಗೊಂಡ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ಮಾಡಿದೆ. ‘ಲವ್ ಜಿಹಾದ್’ ಎಂಬ ಪದವನ್ನು ಈಗಿರುವ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಇದು ಲವ್ ಜಿಹಾದ್ ಅಲ್ಲವಂತೆ

ಆದರೆ ಕೇಂದ್ರದ ಬಿಜೆಪಿ ಸರ್ಕಾರವೇ ಇಷ್ಟೆಲ್ಲಾ ಹೇಳಿದ್ದರೂ ಸಹ, ನವೆಂಬರ್ 6 ರಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ “ಲವ್ ಜಿಹಾದ್” ಹೆಸರಿನಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಇಂತಹ ಕಾನೂನು ತರಲು ತಮ್ಮ ಸರ್ಕಾರ ಉತ್ಸುಕವಾಗಿದೆ ಎಂದು ಹೇಳಿದ್ದರು.

ವಿವಾಹದ ಉದ್ದೇಶಕ್ಕಾಗಿ ಮಾತ್ರ ಧಾರ್ಮಿಕ ಮತಾಂತರಗೊಳ್ಳುವುದು ಸ್ವೀಕಾರಾರ್ಹವಲ್ಲ ಎಂದು ಸೆಪ್ಟೆಂಬರ್‌ನಲ್ಲಿ ಅಲಹಾಬಾದ್ ಹೈಕೋರ್ಟ್ ಹೇಳಿತ್ತು.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...