HomeUncategorizedಮಧ್ಯಪ್ರದೇಶ ಹೈಕೋರ್ಟ್ | ಮುಸ್ಲಿಮರ ಬಗ್ಗೆ ಸುಳ್ಳು ವರದಿ ತಡೆಯಲು ಮಾರ್ಗಸೂಚಿ ಕೋರಿ ಸಲ್ಲಿಕೆಯಾದ ಅರ್ಜಿ...

ಮಧ್ಯಪ್ರದೇಶ ಹೈಕೋರ್ಟ್ | ಮುಸ್ಲಿಮರ ಬಗ್ಗೆ ಸುಳ್ಳು ವರದಿ ತಡೆಯಲು ಮಾರ್ಗಸೂಚಿ ಕೋರಿ ಸಲ್ಲಿಕೆಯಾದ ಅರ್ಜಿ ವಜಾ!

- Advertisement -
- Advertisement -

ಮುಸ್ಲಿಮರು ಮತ್ತು ಇಸ್ಲಾಂ ಧರ್ಮದ ಬಗ್ಗೆ ಸುಳ್ಳು ಮತ್ತು ತಪ್ಪಾದ ಮಾಹಿತಿಯನ್ನು ಹರಡಿದ ಸುದ್ದಿ ವರದಿಗಳ ವಿರುದ್ಧ ನಿಷೇಧಾಜ್ಞೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ಎರಡು ಹಿಂದಿ ಪತ್ರಿಕೆಗಳ ಸಂಪಾದಕರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವನ್ನು ರಿಟ್ ಅರ್ಜಿಯಲ್ಲಿ ಕೋರಲಾಗಿತ್ತು. ಮಧ್ಯಪ್ರದೇಶ ಹೈಕೋರ್ಟ್

ಪತ್ರಿಕೆಗಳು ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ನೋಯಿಸಲು ಮತ್ತು ಕೋಮು ದ್ವೇಷವನ್ನು ಹರಡಲು “ಲವ್ ಜಿಹಾದ್” ನಂತಹ ಪದಗಳನ್ನು ಬಳಸಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ ಎಂದು ವರದಿ ಹೇಳಿದೆ. ಮುಸ್ಲಿಮರು ಮತ್ತು ಇಸ್ಲಾಂ ಧರ್ಮದ ವಿರುದ್ಧ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ತಪ್ಪಾದ ಮತ್ತು ಸುಳ್ಳು ಮಾಹಿತಿಯನ್ನು ತಡೆಯಲು ಮಾರ್ಗಸೂಚಿಗಳನ್ನು ಹೊರಡಿಸುವಂತೆಯೂ ಅರ್ಜಿಯಲ್ಲಿ ನ್ಯಾಯಾಲಯವನ್ನು ಕೋರಲಾಗಿದೆ.

“ಲವ್ ಜಿಹಾದ್” ಎಂಬುದು ಬಿಜೆಪಿ ಮತ್ತು ಆರೆಸ್ಸೆಸ್‌ ಪ್ರೇರಿತ ಕಾಲ್ಪನಿಕ ಕಟ್ಟುಕತೆಯಾಗಿದೆ. ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಪ್ರೇಮಿಸಿ ಮೋಸಗೊಳಿಸಿ ಅಂತಿಮವಾಗಿ ಅವರನ್ನು ಇಸ್ಲಾಂಗೆ ಮತಾಂತರಿಸುವ ಸಂಘಟಿತ ಸಂಚು ಮಾಡುತ್ತಿದ್ದಾರೆ ಎಂದು ಇದರಲ್ಲಿ ಆರೋಪಿಸಲಾಗುತ್ತದೆ.

ಅದಾಗ್ಯೂ, ಇಂತಹ ಯಾವುದೇ ಪ್ರಕರಣ ಈ ವರೆಗೆ ದಾಖಲಾಗಿಲ್ಲ ಎಂದು ಕೇಂದ್ರ ಸರ್ಕಾರವೇ ಹೇಳಿದೆ. ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸಲು ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸಂಸತ್ತಿಗೆ ತಿಳಿಸಿದೆ.

ನ್ಯಾಯಮೂರ್ತಿ ವಿಶಾಲ್ ಮಿಶ್ರಾ ಅವರ ನ್ಯಾಯಪೀಠವು, ಅರ್ಜಿಯಲ್ಲಿ ಕೋರಲಾದ ವಿಷಯಗಳು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿ ದಾಖಲಿಸಬೇಕಾಗಿತ್ತು, ಮ್ಯಾಂಡಮಸ್ ಅರ್ಜಿಯಾಗಿ ಅಲ್ಲ ಎಂದು ಹೇಳಿದೆ. ಅರ್ಜಿಯನ್ನು ಅನುಚಿತವಾಗಿ ಸಲ್ಲಿಸಲಾಗಿರುವುದರಿಂದ ಅದನ್ನು ವಜಾಗೊಳಿಸಲಾಯಿತು.

ಮ್ಯಾಂಡಮಸ್ ಎನ್ನುವುದು ಉನ್ನತ ನ್ಯಾಯಾಲಯವು ಹೊರಡಿಸಿದ ನ್ಯಾಯಾಲಯದ ಆದೇಶವಾಗಿದ್ದು, ಕೆಳ ನ್ಯಾಯಾಲಯ ಅಥವಾ ಸಾರ್ವಜನಿಕ ಅಧಿಕಾರಿ ಕಾನೂನುಬದ್ಧವಾಗಿ ಮಾಡಬೇಕಾದ ಕರ್ತವ್ಯವನ್ನು ನಿರ್ವಹಿಸಲು ಆದೇಶಿಸುತ್ತದೆ.

ವಿಚಾರಣೆಯ ಸಮಯದಲ್ಲಿ, ರಾಜ್ಯ ಸರ್ಕಾರದ ವಕೀಲರು ಅರ್ಜಿದಾರರ ಬೇಡಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು, ಮತ್ತು ಇಂತಹ ವಿಶಾಲ ಪರಿಹಾರಗಳನ್ನು ಕೇಳಲು ಅವರಿಗೆ ಯಾವುದೇ ಕಾನೂನು ಸ್ಥಾನಮಾನವಿಲ್ಲ ಎಂದು ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರು, ಮುಸ್ಲಿಂ ಸಮುದಾಯದ ಸದಸ್ಯರಾಗಿ ಆಪಾದಿತ ಆಕ್ರಮಣಕಾರಿ ವರದಿಯಿಂದ ಭಾದಿತನಾಗಿದ್ದಾಗಿ ಹೇಳಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪೊಲೀಸರು ಪ್ರತಿಕ್ರಿಯಿಸದಿದ್ದರೆ, ಅರ್ಜಿದಾರರು ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸುವುದು ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತದ ನಿಬಂಧನೆಗಳ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಅವರನ್ನು ಸಂಪರ್ಕಿಸುವುದು ಸೇರಿದಂತೆ ಇತರ ಕಾನೂನು ಆಯ್ಕೆಗಳನ್ನು ಅನುಸರಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಮಧ್ಯಪ್ರದೇಶ ಹೈಕೋರ್ಟ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...