HomeUncategorizedಮಧ್ಯಪ್ರದೇಶ ಹೈಕೋರ್ಟ್ | ಮುಸ್ಲಿಮರ ಬಗ್ಗೆ ಸುಳ್ಳು ವರದಿ ತಡೆಯಲು ಮಾರ್ಗಸೂಚಿ ಕೋರಿ ಸಲ್ಲಿಕೆಯಾದ ಅರ್ಜಿ...

ಮಧ್ಯಪ್ರದೇಶ ಹೈಕೋರ್ಟ್ | ಮುಸ್ಲಿಮರ ಬಗ್ಗೆ ಸುಳ್ಳು ವರದಿ ತಡೆಯಲು ಮಾರ್ಗಸೂಚಿ ಕೋರಿ ಸಲ್ಲಿಕೆಯಾದ ಅರ್ಜಿ ವಜಾ!

- Advertisement -
- Advertisement -

ಮುಸ್ಲಿಮರು ಮತ್ತು ಇಸ್ಲಾಂ ಧರ್ಮದ ಬಗ್ಗೆ ಸುಳ್ಳು ಮತ್ತು ತಪ್ಪಾದ ಮಾಹಿತಿಯನ್ನು ಹರಡಿದ ಸುದ್ದಿ ವರದಿಗಳ ವಿರುದ್ಧ ನಿಷೇಧಾಜ್ಞೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ವಜಾಗೊಳಿಸಿದೆ ಎಂದು ಲೈವ್ ಲಾ ಗುರುವಾರ ವರದಿ ಮಾಡಿದೆ. ಎರಡು ಹಿಂದಿ ಪತ್ರಿಕೆಗಳ ಸಂಪಾದಕರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವನ್ನು ರಿಟ್ ಅರ್ಜಿಯಲ್ಲಿ ಕೋರಲಾಗಿತ್ತು. ಮಧ್ಯಪ್ರದೇಶ ಹೈಕೋರ್ಟ್

ಪತ್ರಿಕೆಗಳು ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ನೋಯಿಸಲು ಮತ್ತು ಕೋಮು ದ್ವೇಷವನ್ನು ಹರಡಲು “ಲವ್ ಜಿಹಾದ್” ನಂತಹ ಪದಗಳನ್ನು ಬಳಸಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ ಎಂದು ವರದಿ ಹೇಳಿದೆ. ಮುಸ್ಲಿಮರು ಮತ್ತು ಇಸ್ಲಾಂ ಧರ್ಮದ ವಿರುದ್ಧ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ತಪ್ಪಾದ ಮತ್ತು ಸುಳ್ಳು ಮಾಹಿತಿಯನ್ನು ತಡೆಯಲು ಮಾರ್ಗಸೂಚಿಗಳನ್ನು ಹೊರಡಿಸುವಂತೆಯೂ ಅರ್ಜಿಯಲ್ಲಿ ನ್ಯಾಯಾಲಯವನ್ನು ಕೋರಲಾಗಿದೆ.

“ಲವ್ ಜಿಹಾದ್” ಎಂಬುದು ಬಿಜೆಪಿ ಮತ್ತು ಆರೆಸ್ಸೆಸ್‌ ಪ್ರೇರಿತ ಕಾಲ್ಪನಿಕ ಕಟ್ಟುಕತೆಯಾಗಿದೆ. ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಪ್ರೇಮಿಸಿ ಮೋಸಗೊಳಿಸಿ ಅಂತಿಮವಾಗಿ ಅವರನ್ನು ಇಸ್ಲಾಂಗೆ ಮತಾಂತರಿಸುವ ಸಂಘಟಿತ ಸಂಚು ಮಾಡುತ್ತಿದ್ದಾರೆ ಎಂದು ಇದರಲ್ಲಿ ಆರೋಪಿಸಲಾಗುತ್ತದೆ.

ಅದಾಗ್ಯೂ, ಇಂತಹ ಯಾವುದೇ ಪ್ರಕರಣ ಈ ವರೆಗೆ ದಾಖಲಾಗಿಲ್ಲ ಎಂದು ಕೇಂದ್ರ ಸರ್ಕಾರವೇ ಹೇಳಿದೆ. ಭಾರತೀಯ ಕಾನೂನಿನಲ್ಲಿ ಅಂತಹ ಪದವನ್ನು ವ್ಯಾಖ್ಯಾನಿಸಲು ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಸಂಸತ್ತಿಗೆ ತಿಳಿಸಿದೆ.

ನ್ಯಾಯಮೂರ್ತಿ ವಿಶಾಲ್ ಮಿಶ್ರಾ ಅವರ ನ್ಯಾಯಪೀಠವು, ಅರ್ಜಿಯಲ್ಲಿ ಕೋರಲಾದ ವಿಷಯಗಳು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿ ದಾಖಲಿಸಬೇಕಾಗಿತ್ತು, ಮ್ಯಾಂಡಮಸ್ ಅರ್ಜಿಯಾಗಿ ಅಲ್ಲ ಎಂದು ಹೇಳಿದೆ. ಅರ್ಜಿಯನ್ನು ಅನುಚಿತವಾಗಿ ಸಲ್ಲಿಸಲಾಗಿರುವುದರಿಂದ ಅದನ್ನು ವಜಾಗೊಳಿಸಲಾಯಿತು.

ಮ್ಯಾಂಡಮಸ್ ಎನ್ನುವುದು ಉನ್ನತ ನ್ಯಾಯಾಲಯವು ಹೊರಡಿಸಿದ ನ್ಯಾಯಾಲಯದ ಆದೇಶವಾಗಿದ್ದು, ಕೆಳ ನ್ಯಾಯಾಲಯ ಅಥವಾ ಸಾರ್ವಜನಿಕ ಅಧಿಕಾರಿ ಕಾನೂನುಬದ್ಧವಾಗಿ ಮಾಡಬೇಕಾದ ಕರ್ತವ್ಯವನ್ನು ನಿರ್ವಹಿಸಲು ಆದೇಶಿಸುತ್ತದೆ.

ವಿಚಾರಣೆಯ ಸಮಯದಲ್ಲಿ, ರಾಜ್ಯ ಸರ್ಕಾರದ ವಕೀಲರು ಅರ್ಜಿದಾರರ ಬೇಡಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು, ಮತ್ತು ಇಂತಹ ವಿಶಾಲ ಪರಿಹಾರಗಳನ್ನು ಕೇಳಲು ಅವರಿಗೆ ಯಾವುದೇ ಕಾನೂನು ಸ್ಥಾನಮಾನವಿಲ್ಲ ಎಂದು ವಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರು, ಮುಸ್ಲಿಂ ಸಮುದಾಯದ ಸದಸ್ಯರಾಗಿ ಆಪಾದಿತ ಆಕ್ರಮಣಕಾರಿ ವರದಿಯಿಂದ ಭಾದಿತನಾಗಿದ್ದಾಗಿ ಹೇಳಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪೊಲೀಸರು ಪ್ರತಿಕ್ರಿಯಿಸದಿದ್ದರೆ, ಅರ್ಜಿದಾರರು ಉನ್ನತ ಅಧಿಕಾರಿಗಳಿಗೆ ದೂರು ಸಲ್ಲಿಸುವುದು ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತದ ನಿಬಂಧನೆಗಳ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಅವರನ್ನು ಸಂಪರ್ಕಿಸುವುದು ಸೇರಿದಂತೆ ಇತರ ಕಾನೂನು ಆಯ್ಕೆಗಳನ್ನು ಅನುಸರಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಮಧ್ಯಪ್ರದೇಶ ಹೈಕೋರ್ಟ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...