Homeಮುಖಪುಟಮಧ್ಯಪ್ರದೇಶ: ಕೊರೊನಾ ರೋಗಿಯನ್ನು ಮೃತ ಎಂದು ಎರಡು ಸಲ ತಪ್ಪಾಗಿ ಘೋಷಿಸಿದ ಆಸ್ಪತ್ರೆ!

ಮಧ್ಯಪ್ರದೇಶ: ಕೊರೊನಾ ರೋಗಿಯನ್ನು ಮೃತ ಎಂದು ಎರಡು ಸಲ ತಪ್ಪಾಗಿ ಘೋಷಿಸಿದ ಆಸ್ಪತ್ರೆ!

- Advertisement -
- Advertisement -

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ 58 ವರ್ಷದ ಕೋವಿಡ್ -19 ರೋಗಿ ಮೃತರಾಗಿದ್ದಾರೆ ಎಂದು ತಪ್ಪಾಗಿ ಘೋಷಿಸಿದ್ದಾರೆ. ಒಂದು ಸಲ ಅಲ್ಲ ಎರಡು ಸಲ ಈ ಪ್ರಮಾದ ನಡೆದಿದೆ. ಎರಡನೇ ಬಾರಿಗೆ ರೋಗಿಯ ಕುಟುಂಬವು ಅಂತ್ಯಕ್ರಿಯೆಯ ವಿಧಿಗಳಿಗೆ ಸಿದ್ಧವಾಯಿತು. ಆಗ ಇಲ್ಲ ಇಲ್ಲ ಅವರು ವೆಂಟಿಲೇಟರ್ ಮೇಲೆ ಜೀವಂತವಾಗಿದ್ದಾರೆ ಎಂದು ಆಸ್ಪತ್ರೆ ತಿಳಿಸಿತು. ಇದು ಗೊಂದಲದಿಂದ ಸಂಭವಿಸಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಕೋವಿಡ್ ಅನುಮಾನದ ಕಾರಣ ಗೋರೆಲಾಲ್ ಕೋರಿಯವರನ್ನು ಗಂಭೀರ ಸ್ಥಿತಿಯಲ್ಲಿ ವಿದಿಶಾ ಅಟಲ್ ಬಿಹಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿದೆ. ಅವರನ್ನು ಬುಧವಾರ ವೆಂಟಿಲೇಟರ್‌ನಲ್ಲಿ ಇರಿಸಲಾಯಿತು.

“ಮರುದಿನ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ನನ್ನನ್ನು ಆಸ್ಪತ್ರೆಗೆ ಕರೆದರು. ನಾನು ತಲುಪಿದ ನಂತರ ಉಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ನಂತರ ಅವರು ಮತ್ತೆ ಉಸಿರಾಡುತ್ತಿದ್ದಾರೆ ಎಂದು ನರ್ಸ್ ಹೇಳಿದರು” ಎಂದು ರೋಗಿಯ ಮಗ ಕೈಲಾಶ್ ಕೋರಿ ಹೇಳಿದ್ದಾರೆ.

ಆಗ ಆಸ್ಪತ್ರೆಯ ವೈದ್ಯರು ಕುಟುಂಬಕ್ಕೆ ಮಾಹಿತಿ ನೀಡಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿದೆ ಎಂದರು. ಕುಟುಂಬವು ಅದೇ ದಿನ ಶಸ್ತ್ರಚಿಕಿತ್ಸೆಗೆ ಅನುಮತಿ ನೀಡಿತು.

ಎರಡನೇ ‘ಸಾವು’!

“ಅವರು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಅವರು ನಮಗೆ ಮಾಹಿತಿ ನೀಡಿದರು. ರಾತ್ರಿ 8.30 ರ ಸುಮಾರಿಗೆ ಅವರು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಕೊರೋನಾ ದೃಢಪಟ್ಟ ಕಾರಣ ಈಗಲೇ ನೀವು ಅವರ ಮೃತ ದೇಹವನ್ನು ಪಡೆಯಲಾಗುವುದಿಲ್ಲ ಎಂದು ಅವರು ಹೇಳಿದರು” ಎಂದು ಕೋರಿಯ ಮಗ ಸುದ್ದಿಗಾರರಿಗೆ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ, ಅವರ ಕುಟುಂಬವು ಶವಸಂಸ್ಕಾರಕ್ಕೆ ತಯಾರಿ ನಡೆಸುತ್ತಿದ್ದಾಗ ಆಸ್ಪತ್ರೆಯ ಸಿಬ್ಬಂದಿ ಗೋರೆಲಾಲ್ ಕೋರಿ ಇನ್ನೂ ಜೀವಂತವಾಗಿದ್ದಾರೆ ಎಂದು ತಿಳಿಸಿದರು. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಇನ್ನೂ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದರು’ ಎಂದು ಪುತ್ರ ತಿಳಿಸಿದರು.

“ಅವರು ಎರಡು ಬಾರಿ ಸತ್ತರು ಎಂದು ಘೋಷಿಸಿದರು. ಇದು ಬೇಜವಾಬ್ದಾರಿತನ” ಎಂದು ಕೈಲಾಶ್ ಕೋರಿ ಹೇಳಿದರು. ಆಸ್ಪತ್ರೆಯ ಅಧಿಕಾರಿಗಳು ಇಡೀ ಪ್ರಸಂಗವನ್ನು “ಗೊಂದಲ” ಎಂದು ಹೇಳಿದ್ದಾರೆ.

“ಗೋರೆಲಾಲ್ ಕೋರಿ ವೆಂಟಿಲೇಟರ್‌ನಲ್ಲಿದ್ದರು. ಇದ್ದಕ್ಕಿದ್ದಂತೆ ಅವರ ಹೃದಯ ನಿಂತುಹೋಯಿತು. ಒಬ್ಬ ನರ್ಸ್ ಮೃತರಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯವಾಗಿ, ವೈದ್ಯರು ಅಂತಹ ಪ್ರಕರಣಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ಇದು 1-2 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ನಮ್ಮ ವೈದ್ಯರು ಅವರನ್ನು ಪುನಶ್ಚೇತನಗೊಳಿಸಿದರು… ಇದೆಲ್ಲವೂ ಗೊಂದಲಕ್ಕೆ ಕಾರಣವಾಯಿತು” ಎಂದು ಆಸ್ಪತ್ರೆಯ ಡೀನ್ ಡಾ.ಸುನೀಲ್ ನಂದೇಶ್ವರ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಟೆಸ್ಟ್ ತಪ್ಪಿಸಿಕೊಳ್ಳಲು ರೈಲು ನಿಲ್ದಾಣಗಳಿಂದ ಎದ್ದು ಬಿದ್ದು ಓಡಿದ ಪ್ರಯಾಣಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...