Homeಮುಖಪುಟಮಧ್ಯಪ್ರದೇಶ: ಕೊರೊನಾ ರೋಗಿಯನ್ನು ಮೃತ ಎಂದು ಎರಡು ಸಲ ತಪ್ಪಾಗಿ ಘೋಷಿಸಿದ ಆಸ್ಪತ್ರೆ!

ಮಧ್ಯಪ್ರದೇಶ: ಕೊರೊನಾ ರೋಗಿಯನ್ನು ಮೃತ ಎಂದು ಎರಡು ಸಲ ತಪ್ಪಾಗಿ ಘೋಷಿಸಿದ ಆಸ್ಪತ್ರೆ!

- Advertisement -
- Advertisement -

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ 58 ವರ್ಷದ ಕೋವಿಡ್ -19 ರೋಗಿ ಮೃತರಾಗಿದ್ದಾರೆ ಎಂದು ತಪ್ಪಾಗಿ ಘೋಷಿಸಿದ್ದಾರೆ. ಒಂದು ಸಲ ಅಲ್ಲ ಎರಡು ಸಲ ಈ ಪ್ರಮಾದ ನಡೆದಿದೆ. ಎರಡನೇ ಬಾರಿಗೆ ರೋಗಿಯ ಕುಟುಂಬವು ಅಂತ್ಯಕ್ರಿಯೆಯ ವಿಧಿಗಳಿಗೆ ಸಿದ್ಧವಾಯಿತು. ಆಗ ಇಲ್ಲ ಇಲ್ಲ ಅವರು ವೆಂಟಿಲೇಟರ್ ಮೇಲೆ ಜೀವಂತವಾಗಿದ್ದಾರೆ ಎಂದು ಆಸ್ಪತ್ರೆ ತಿಳಿಸಿತು. ಇದು ಗೊಂದಲದಿಂದ ಸಂಭವಿಸಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಿದ್ದಾರೆ.

ಕೋವಿಡ್ ಅನುಮಾನದ ಕಾರಣ ಗೋರೆಲಾಲ್ ಕೋರಿಯವರನ್ನು ಗಂಭೀರ ಸ್ಥಿತಿಯಲ್ಲಿ ವಿದಿಶಾ ಅಟಲ್ ಬಿಹಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿದೆ. ಅವರನ್ನು ಬುಧವಾರ ವೆಂಟಿಲೇಟರ್‌ನಲ್ಲಿ ಇರಿಸಲಾಯಿತು.

“ಮರುದಿನ ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ನನ್ನನ್ನು ಆಸ್ಪತ್ರೆಗೆ ಕರೆದರು. ನಾನು ತಲುಪಿದ ನಂತರ ಉಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ನಂತರ ಅವರು ಮತ್ತೆ ಉಸಿರಾಡುತ್ತಿದ್ದಾರೆ ಎಂದು ನರ್ಸ್ ಹೇಳಿದರು” ಎಂದು ರೋಗಿಯ ಮಗ ಕೈಲಾಶ್ ಕೋರಿ ಹೇಳಿದ್ದಾರೆ.

ಆಗ ಆಸ್ಪತ್ರೆಯ ವೈದ್ಯರು ಕುಟುಂಬಕ್ಕೆ ಮಾಹಿತಿ ನೀಡಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗಿದೆ ಎಂದರು. ಕುಟುಂಬವು ಅದೇ ದಿನ ಶಸ್ತ್ರಚಿಕಿತ್ಸೆಗೆ ಅನುಮತಿ ನೀಡಿತು.

ಎರಡನೇ ‘ಸಾವು’!

“ಅವರು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನಿಧನರಾದರು ಎಂದು ಅವರು ನಮಗೆ ಮಾಹಿತಿ ನೀಡಿದರು. ರಾತ್ರಿ 8.30 ರ ಸುಮಾರಿಗೆ ಅವರು ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಕೊರೋನಾ ದೃಢಪಟ್ಟ ಕಾರಣ ಈಗಲೇ ನೀವು ಅವರ ಮೃತ ದೇಹವನ್ನು ಪಡೆಯಲಾಗುವುದಿಲ್ಲ ಎಂದು ಅವರು ಹೇಳಿದರು” ಎಂದು ಕೋರಿಯ ಮಗ ಸುದ್ದಿಗಾರರಿಗೆ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ, ಅವರ ಕುಟುಂಬವು ಶವಸಂಸ್ಕಾರಕ್ಕೆ ತಯಾರಿ ನಡೆಸುತ್ತಿದ್ದಾಗ ಆಸ್ಪತ್ರೆಯ ಸಿಬ್ಬಂದಿ ಗೋರೆಲಾಲ್ ಕೋರಿ ಇನ್ನೂ ಜೀವಂತವಾಗಿದ್ದಾರೆ ಎಂದು ತಿಳಿಸಿದರು. ಆದರೆ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ಇನ್ನೂ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ ಎಂದರು’ ಎಂದು ಪುತ್ರ ತಿಳಿಸಿದರು.

“ಅವರು ಎರಡು ಬಾರಿ ಸತ್ತರು ಎಂದು ಘೋಷಿಸಿದರು. ಇದು ಬೇಜವಾಬ್ದಾರಿತನ” ಎಂದು ಕೈಲಾಶ್ ಕೋರಿ ಹೇಳಿದರು. ಆಸ್ಪತ್ರೆಯ ಅಧಿಕಾರಿಗಳು ಇಡೀ ಪ್ರಸಂಗವನ್ನು “ಗೊಂದಲ” ಎಂದು ಹೇಳಿದ್ದಾರೆ.

“ಗೋರೆಲಾಲ್ ಕೋರಿ ವೆಂಟಿಲೇಟರ್‌ನಲ್ಲಿದ್ದರು. ಇದ್ದಕ್ಕಿದ್ದಂತೆ ಅವರ ಹೃದಯ ನಿಂತುಹೋಯಿತು. ಒಬ್ಬ ನರ್ಸ್ ಮೃತರಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯವಾಗಿ, ವೈದ್ಯರು ಅಂತಹ ಪ್ರಕರಣಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಾರೆ. ಕೆಲವೊಮ್ಮೆ ಇದು 1-2 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ನಮ್ಮ ವೈದ್ಯರು ಅವರನ್ನು ಪುನಶ್ಚೇತನಗೊಳಿಸಿದರು… ಇದೆಲ್ಲವೂ ಗೊಂದಲಕ್ಕೆ ಕಾರಣವಾಯಿತು” ಎಂದು ಆಸ್ಪತ್ರೆಯ ಡೀನ್ ಡಾ.ಸುನೀಲ್ ನಂದೇಶ್ವರ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಟೆಸ್ಟ್ ತಪ್ಪಿಸಿಕೊಳ್ಳಲು ರೈಲು ನಿಲ್ದಾಣಗಳಿಂದ ಎದ್ದು ಬಿದ್ದು ಓಡಿದ ಪ್ರಯಾಣಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...