Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

- Advertisement -
- Advertisement -

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಲಿತ ಮಕ್ಕಳ ಮೇಲೆ ಇತ್ತೀಚಿನ ದಿನಗಳಲ್ಲಿ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಉತ್ತರಪ ಪ್ರದೇಶದ ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಮಾಜಿಕ ನ್ಯಾಯಕ್ಕಾಗಿ :
    ತೊಂದರೆ ಅಂದರೆ, ಜೀವಹಾನಿ, ಮಾನಹಾನಿ, ದೈಹಿಕ ಹಲ್ಲೆ ಮಾಡಿದವರನ್ನು ಒಮ್ಮೆ ಸಾಭಿತಾದರೆ ನಿರ್ಣಯಿಸಿದ ವ್ಯಕ್ತಿ, ಗುಂಪು, ಯಾವುದೇ ಶ್ರೇಣಿಯಲ್ಲಿದ್ದರೂ ಅದೇ ತೆರನಾದ ಶಿಕ್ಷೆಯನ್ನು ಸಾರ್ವಜನಿಕವಾಗಿ ನೀಡದ ಹೊರತು ಈ ವ್ಯವಸ್ಥೆ ಬದಲಾಗದು. ಮಾತ್ರವಲ್ಲ ಯಾವುದೇ ರೀತಿಯ ಹಲ್ಲೆ ನಡೆಸುವ ಮುಂಚೆ ಯೋಚಿಸಲು ಶುರುಮಾಡುತ್ತಾರೆ.

    ಆಗ ಮಾತ್ರ ಬದಲಾವಣೆಗಳನ್ನು ನೋಡಬಹುದೇ ಹೊರತು ಅಲ್ಲಿಯವರೆಗೂ ಇಂತಹ ಅಮಾನವೀಯ ಕೃತ್ಯಗಳು ಜರುಗುತ್ತಲೇ ಇರುತ್ತವೆ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...