Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

- Advertisement -
- Advertisement -

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಲಿತ ಮಕ್ಕಳ ಮೇಲೆ ಇತ್ತೀಚಿನ ದಿನಗಳಲ್ಲಿ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಉತ್ತರಪ ಪ್ರದೇಶದ ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಮಾಜಿಕ ನ್ಯಾಯಕ್ಕಾಗಿ :
    ತೊಂದರೆ ಅಂದರೆ, ಜೀವಹಾನಿ, ಮಾನಹಾನಿ, ದೈಹಿಕ ಹಲ್ಲೆ ಮಾಡಿದವರನ್ನು ಒಮ್ಮೆ ಸಾಭಿತಾದರೆ ನಿರ್ಣಯಿಸಿದ ವ್ಯಕ್ತಿ, ಗುಂಪು, ಯಾವುದೇ ಶ್ರೇಣಿಯಲ್ಲಿದ್ದರೂ ಅದೇ ತೆರನಾದ ಶಿಕ್ಷೆಯನ್ನು ಸಾರ್ವಜನಿಕವಾಗಿ ನೀಡದ ಹೊರತು ಈ ವ್ಯವಸ್ಥೆ ಬದಲಾಗದು. ಮಾತ್ರವಲ್ಲ ಯಾವುದೇ ರೀತಿಯ ಹಲ್ಲೆ ನಡೆಸುವ ಮುಂಚೆ ಯೋಚಿಸಲು ಶುರುಮಾಡುತ್ತಾರೆ.

    ಆಗ ಮಾತ್ರ ಬದಲಾವಣೆಗಳನ್ನು ನೋಡಬಹುದೇ ಹೊರತು ಅಲ್ಲಿಯವರೆಗೂ ಇಂತಹ ಅಮಾನವೀಯ ಕೃತ್ಯಗಳು ಜರುಗುತ್ತಲೇ ಇರುತ್ತವೆ.

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...