Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

ಮಧ್ಯಪ್ರದೇಶ: ದಲಿತ ಬಾಲಕನನ್ನು ಥಳಿಸಿದ ಜೈನ ಪಂಡಿತ

- Advertisement -
- Advertisement -

ಮಧ್ಯಪ್ರದೇಶದ ಸಾಗರ್‌ನಲ್ಲಿ ಜೈನ ದೇವಾಲಯದ ಪಂಡಿತರೊಬ್ಬರು 11 ವರ್ಷದ ದಲಿತ ಬಾಲಕನನ್ನು ಥಳಿಸಿರುವ ಘಟನೆ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟ್ವಿಟ್ಟರ್ ಬಳಕೆದಾರರು ಈ ಘಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ದಲಿತ ಬಾಲಕ ಸಾಗರದ ಜೈನ ದೇವಾಲಯದ ಹೊರಗೆ ನಿಂತಿದ್ದಾಗ ಕಳ್ಳತನದ ಆರೋಪ ಹೊರಿಸಲಾಗಿದೆ. ಪಂಡಿತ್ ರಾಜೇಶ್ ಜೈನ್ ಬಾಲಕನನ್ನು ಥಳಿಸಿ, ನಂತರ ಕಟ್ಟಿಹಾಕಿದ್ದಾರೆ. ಪೂಜೆಯ ತಟ್ಟೆಯಲ್ಲಿದ್ದ ಬಾದಾಮಿಯನ್ನು ತೆಗೆದು ಜೇಬಿನಲ್ಲಿ ಇಟ್ಟುಕೊಂಡಿದ್ದಾಗಿ ರಾಜೇಶ್ ಜೈನ್‌ ಆರೋಪಿಸಿದ್ದಾರೆ.

ನಗರದ ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಲಿತ ಮಕ್ಕಳ ಮೇಲೆ ಇತ್ತೀಚಿನ ದಿನಗಳಲ್ಲಿ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಉತ್ತರಪ ಪ್ರದೇಶದ ಬಾರಾಬಂಕಿಯ ಟಿಕೈಟ್‌ನಗರದ ಇಚೋಲಿ ಗ್ರಾಮದಲ್ಲಿ 2ನೇ ತರಗತಿಯ ದಲಿತ ವಿದ್ಯಾರ್ಥಿನಿಯ ಮೇಲೆ ಬಿಸಿಯೂಟವನ್ನು ಶಾಲೆಯ ಪ್ರಾಂಶುಪಾಲ ಎಸೆದಿರುವ ಘಟನೆ ನಡೆದಿದೆ.

ಮಗುವಿನ ಮಣಿಕಟ್ಟು ಮತ್ತು ಕೈಗೆ ತೀವ್ರ ಸುಟ್ಟ ಗಾಯಗಳಾಗಿವೆ ಎಂಬ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಬಾರಾಬಂಕಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದರ್ಶ್ ಸಿಂಗ್ ಅವರು ತನಿಖೆಗೆ ಆದೇಶಿಸಿದ್ದಾರೆ. ವಿಕಲಚೇತನ ಬಾಲಕಿ ಈ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದ್ದು, ನಂತರ ಜಿಲ್ಲಾಧಿಕಾರಿಯವರು ಬಾರಾಬಂಕಿಯ ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ಸಂತೋಷ್ ಪಾಂಡೆ ಅವರಿಗೆ ಸೂಚನೆ ನೀಡಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಬಾರಾಬಂಕಿಯ ಹೆಚ್ಚುವರಿ ಎಸ್ಪಿ ಪೂರ್ಣೇಂದು ಸಿಂಗ್ ಪ್ರತಿಕ್ರಿಯಿಸಿದ್ದು, ಬಿಎಸ್ಎ ಸಿದ್ಧಪಡಿಸಿದ ವರದಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯನಿರ್ವಹಿಸುತ್ತಾರೆ ಎಂದಿದ್ದಾರೆ.

ಆಗಸ್ಟ್ 29 ರಂದು ಈ ಘಟನೆ ನಡೆದಿದೆ ಎಂದು ತನಿಖೆ ನಡೆಸುತ್ತಿರುವ ಬಿಎಸ್‌ಎ ಸಂತೋಷ್ ಪಾಂಡೆ ತಿಳಿಸಿದ್ದಾರೆ.

“ನಾವು ಊಟದ ಸಮಯದಲ್ಲಿದ್ದ 800 ವಿದ್ಯಾರ್ಥಿಗಳ ಹೇಳಿಕೆಗಳನ್ನು ತೆಗೆದುಕೊಂಡಿದ್ದೇವೆ. ಅದರ ವಿವರವಾದ ವರದಿಯನ್ನು ಮ್ಯಾಜಿಸ್ಟ್ರೇಟ್‌ಗೆ ಹಸ್ತಾಂತರಿಸಲಾಗುವುದು” ಎಂದು ಪಾಂಡೆ ಹೇಳಿದರು.

ಸೆಪ್ಟೆಂಬರ್ 3 ರಂದು ಮಹಿಳೆಯೊಬ್ಬರು ದೂರು ನೀಡಿದ್ದು, “ಮಧ್ಯಾಹ್ನದ ಊಟವನ್ನು ಬಡಿಸುವಾಗ ಸರ್ಕಾರಿ ಶಾಲೆಯ ಪ್ರಾಂಶುಪಾಲರು ನನ್ನ ಮಗಳ ಕೈಗಳನ್ನು ಸುಟ್ಟುಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜಸ್ಥಾನ: ದಲಿತ ಬಾಲಕನ ಶವ ಗಣಿಗಾರಿಕೆಯ ಹೊಂಡದಲ್ಲಿ ಪತ್ತೆ

17 ವರ್ಷದ ದಲಿತ ಬಾಲಕ ನಾಪತ್ತೆಯಾದ ಒಂದು ದಿನದ ನಂತರ ಶವವಾಗಿ ಸಿಕ್ಕಿದ್ದಾನೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಳೆ ನೀರಿನಿಂದ ತುಂಬಿದ ಗಣಿಗಾರಿಕೆಯ ಹೊಂಡದಲ್ಲಿ ಆತನ ಶವ ಸೆಪ್ಟೆಂಬರ್ 9ರಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವವಾಗಿ ಪತ್ತೆಯಾಗಿರುವ ಬಾಲಕನ ಸಹಪಾಠಿಯ ತಂದೆ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ತಿಳಿದುಬಂದಿದೆ. ತನ್ನ ಮಗಳಿಗೆ ಈ ಹುಡುಗ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಶಾಲೆಗೆ ದೂರು ನೀಡಿದ ಬಳಿಕ ಈ ಘಟನೆಯಾಗಿದೆ.

ಶುಕ್ರವಾರ ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಆತನ ಶವವನ್ನು ಶಾಲೆಯ ಹೊರಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ಬಾಲಕನಿಗೆ ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಸರ್ಕಲ್ ಆಫೀಸರ್, ಬೀವರ್ ಸುಮಿತ್ ಮೆಹ್ರೇದಾ ತಿಳಿಸಿದ್ದಾರೆ.

ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಬಾಲಕನ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾಮಾಜಿಕ ನ್ಯಾಯಕ್ಕಾಗಿ :
    ತೊಂದರೆ ಅಂದರೆ, ಜೀವಹಾನಿ, ಮಾನಹಾನಿ, ದೈಹಿಕ ಹಲ್ಲೆ ಮಾಡಿದವರನ್ನು ಒಮ್ಮೆ ಸಾಭಿತಾದರೆ ನಿರ್ಣಯಿಸಿದ ವ್ಯಕ್ತಿ, ಗುಂಪು, ಯಾವುದೇ ಶ್ರೇಣಿಯಲ್ಲಿದ್ದರೂ ಅದೇ ತೆರನಾದ ಶಿಕ್ಷೆಯನ್ನು ಸಾರ್ವಜನಿಕವಾಗಿ ನೀಡದ ಹೊರತು ಈ ವ್ಯವಸ್ಥೆ ಬದಲಾಗದು. ಮಾತ್ರವಲ್ಲ ಯಾವುದೇ ರೀತಿಯ ಹಲ್ಲೆ ನಡೆಸುವ ಮುಂಚೆ ಯೋಚಿಸಲು ಶುರುಮಾಡುತ್ತಾರೆ.

    ಆಗ ಮಾತ್ರ ಬದಲಾವಣೆಗಳನ್ನು ನೋಡಬಹುದೇ ಹೊರತು ಅಲ್ಲಿಯವರೆಗೂ ಇಂತಹ ಅಮಾನವೀಯ ಕೃತ್ಯಗಳು ಜರುಗುತ್ತಲೇ ಇರುತ್ತವೆ.

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...