Homeರಾಜಕೀಯಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಮಲ್ ನಾಥ್ ರಾಜೀನಾಮೆ

ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಮಲ್ ನಾಥ್ ರಾಜೀನಾಮೆ

- Advertisement -
- Advertisement -

ಸುಮಾರು ಎರಡು ವರ್ಷಗಳ ನಂತರ ಮಧ್ಯಪ್ರದೇಶ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಗುರುವಾರದಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕತ್ವದಿಂದ ರಾಜೀನಾಮೆ ನೀಡಿದ್ದಾರೆ. ಅವರ ಬದಲಿಯಾಗಿ ಏಳು ಬಾರಿ ಶಾಸಕರಾಗಿದ್ದ ಗೋವಿಂದ್ ಸಿಂಗ್ ಅವರನ್ನು ಪಕ್ಷವು ಆಯ್ಕೆ ಮಾಡಿದೆ.

2018 ರಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದ ಕಮಲ್‌ ನಾಥ್‌‌ ಅವರು, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ 25 ನಿಷ್ಠಾವಂತ ಶಾಸಕರ ನಿರ್ಗಮನದಿಂದಾಗಿ ಮಾರ್ಚ್ 20, 2020 ರಂದು ತಮ್ಮ 15 ತಿಂಗಳ ಅವಧಿಯ ಸರ್ಕಾರ ಪತನದ ನಂತರ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಂಗ್ರೆಸ್ ಅಧ್ಯಕ್ಷರು ತಕ್ಷಣವೇ ಜಾರಿಗೆ ಬರುವಂತೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ನಿಮ್ಮ ರಾಜೀನಾಮೆಯನ್ನು ಅಂಗೀಕರಿಸಿದೆ. ಸಿಎಲ್‌ಪಿ ನಾಯಕರಾಗಿ ನಿಮ್ಮ ಕೊಡುಗೆಯನ್ನು ಪಕ್ಷವು ಹೃತ್ಪೂರ್ವಕವಾಗಿ ಶ್ಲಾಘಿಸುತ್ತದೆ” ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರದಲ್ಲಿ ಕಮಲ್‌ನಾಥ್‌ಗೆ ತಿಳಿಸಿದ್ದು, 71 ವರ್ಷದ ಗೋವಿಂದ್ ಸಿಂಗ್‌ ಅವರನ್ನು ಮುಂದಿನ CLP ನಾಯಕ ಎಂದು ಅದರಲ್ಲಿ ಹೆಸರಿಸಲಾಗಿದೆ.

ಇದನ್ನೂ ಓದಿ: Explainer: ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಗೆ ಯಾರು ಕಾರಣ? 10 ಅಂಶಗಳು

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವತ್ತ ಗಮನವನ್ನು ಕೇಂದ್ರೀಕರಿಸಿದ್ದಾಗಿ ಕಮಲ್ ನಾಥ್ ಅವರು ಮಾಧ್ಯಮಗಳೊಂದಿಗೆ ಸಂವಾದದ ಸಮಯದಲ್ಲಿ ಹೇಳಿದ್ದಾರೆ.

ಪಕ್ಷವು ತಮ್ಮನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದ ಪತ್ರ ಸ್ವೀಕರಿಸಿದ ಕೂಡಲೇ ಗೋವಿಂದ್‌ ಸಿಂಗ್ ಅವರು ಇತರ ನಾಯಕರೊಂದಿಗೆ ಕಮಲ್ ನಾಥ್ ಅವರ ನಿವಾಸಕ್ಕೆ ಒಗ್ಗಟ್ಟಿನ ಪ್ರದರ್ಶನ ತೋರಿಸಿದ್ದು, ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಜನರ ಸಮಸ್ಯೆಗಳು, ವಿಶೇಷವಾಗಿ ಅಕ್ರಮ ಬುಲ್ಡೋಜರ್ ಕ್ರಮ, ನಿರುದ್ಯೋಗ, ರೈತರ ಸಮಸ್ಯೆ, ಬೆಲೆ ಏರಿಕೆ ಎಲ್ಲವನ್ನೂ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ – ಕಣ್ಮುಚ್ಚಿ ಕುಳಿತ ತಾಲ್ಲೂಕು ಆಡಳಿತ

ಭಿಂಡ್ ಜಿಲ್ಲೆಯ ಲಾಹರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಠಾಕೂರ್ ಸಮುದಾಯದ ನಾಯಕರಾಗಿರುವ ಗೋವಿಂದ್ ಸಿಂಗ್‌ 1998 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದಾಗಿನಿಂದ ರಾಜ್ಯದ ವಿವಿಧ ಸಚಿವ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಈ ಹಿಂದಿನ ಕಮಲ್ ನಾಥ್ ಸರ್ಕಾರದಲ್ಲಿ ಸಹಕಾರಿ, ಸಂಸದೀಯ ವ್ಯವಹಾರಗಳು ಮತ್ತು ಸಾಮಾನ್ಯ ಆಡಳಿತದ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಗೋವಿಂದ್ ಸಿಂಗ್ ಅವರು 2018 ರಲ್ಲಿ ಮಧ್ಯಪ್ರದೇಶದ 15 ನೇ ವಿಧಾನಸಭೆಗೆ ಸತತ ಏಳನೇ ಬಾರಿಗೆ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...