Homeಮುಖಪುಟಮಧ್ಯಪ್ರದೇಶ: ವಕ್ಫ್ ತಿದ್ದುಪಡಿ ಕಾಯ್ದೆಯಡಿ ಮದರಸಾ ಕೆಡವಿ ಹಾಕಿದ ಆಡಳಿತ ಮಂಡಳಿ; ವೀಡಿಯೋ ವೈರಲ್

ಮಧ್ಯಪ್ರದೇಶ: ವಕ್ಫ್ ತಿದ್ದುಪಡಿ ಕಾಯ್ದೆಯಡಿ ಮದರಸಾ ಕೆಡವಿ ಹಾಕಿದ ಆಡಳಿತ ಮಂಡಳಿ; ವೀಡಿಯೋ ವೈರಲ್

- Advertisement -
- Advertisement -

ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ 30 ವರ್ಷ ಹಳೆಯ ಮದರಸಾವೊಂದನ್ನು ಶನಿವಾರದಂದು ಕೆಡವಿಹಾಕಲಾಗಿದೆ. ಬಿಡಿ ಕಾಲೋನಿಯಲ್ಲಿರುವ ಮದರಸಾವನ್ನು ಕಾನೂನು ಅನುಮತಿಯಿಲ್ಲದೆ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಸರಕಾರಿ ಆಡಳಿತಾಂಗವು ಆರೋಪಿಸಿ ಮದರಸಾ ಆಡಳಿತ ಮಂಡಳಿಗೆ ನೋಟಿಸ್ ನೀಡಿದ ನಂತರ ಅದನ್ನು ಕೆಡವಿ ಹಾಕಲಾಯಿತು.

ಇದು ಹೊಸದಾಗಿ ಜಾರಿಗೆ ತರಲಾದ ವಕ್ಫ್ ತಿದ್ದುಪಡಿ ಕಾಯ್ದೆಯಡಿಯಲ್ಲಿ ಪರಿಶೀಲನೆಗೆ ಒಳಪಟ್ಟ ಮೊದಲ ಮುಸ್ಲಿಂ ಒಡೆತನದ ನಿರ್ಮಾಣವಾಗಿದೆ.

ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಬಿಜೆಪಿ ಅಧ್ಯಕ್ಷ ವಿ.ಡಿ. ಶರ್ಮಾ ಅವರಿಗೆ ದೂರು ನೀಡಿದ ನಂತರ ಆಡಳಿತ ಅಧಿಕಾರಿಗಳು ನೋಟಿಸ್ ನೀಡಿದ್ದರು ಎಂದು ಭಾನುವಾರ ಇಲ್ಲಿಗೆ ಬಂದ ವರದಿಗಳು ತಿಳಿಸಿವೆ. ಶರ್ಮಾ ಅವರು ಅಧಿಕೃತ ದೂರು ದಾಖಲಿಸಿದವರಾಗಿದ್ದಾರೆ.

ಮದರಸಾ ನಿರ್ಮಿಸಿದವರು ಈ ಹಿಂದೆ ನೀಡಿದ ಸೂಚನೆಗಳನ್ನು ಪಾಲಿಸಿರಲಿಲ್ಲ; ಆದಾಗ್ಯೂ, ಕಟ್ಟುನಿಟ್ಟಿನ ಜಾರಿಯ ಎಚ್ಚರಿಕೆ ನೀಡಿದಾಗ ಮದರಸಾವನ್ನು ಸ್ವಯಂಪ್ರೇರಣೆಯಿಂದ ಕೆಡವಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಿರ್ಮಾಣಕ್ಕೆ ಸ್ಥಳೀಯ ನಿವಾಸಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಬಹಳ ಹಿಂದಿನಿಂದಲೂ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಈ ದೂರುಗಳ ಹೊರತಾಗಿಯೂ, ಇತ್ತೀಚಿನವರೆಗೂ ಯಾವುದೇ ನಿರ್ಣಾಯಕ ಕ್ರಮಕೈಗೊಂಡಿರಲಿಲ್ಲ ಎನ್ನಲಾಗಿದೆ.

ಈ ನಿರ್ಮಾಣಕ್ಕೆ ಸ್ಥಳೀಯ ಗ್ರಾಮ ಪಂಚಾಯತ್ ಆರಂಭದಲ್ಲಿ ಅನುಮತಿ ನೀಡಿತ್ತು, ಆದರೆ ಈಗ ಈ ಪ್ರದೇಶವು ಪುರಸಭೆಯ ವ್ಯಾಪ್ತಿಗೆ ಬರುತ್ತಿರುವುದರಿಂದ ಇದನ್ನು ಅನಧಿಕೃತವೆಂದು ಪರಿಗಣಿಸಲಾಗುತ್ತಿದೆ. ಇದು ದೀರ್ಘ ನ್ಯಾಯಾಲಯದ ಪ್ರಕರಣವಾಗಿರುವುದರಿಂದಾಗಿ ಈ ಹಿಂದೆ ಆಡಳಿತಾತ್ಮಕ ಕ್ರಮಕ್ಕೆ ನಿರ್ಬಂಧಿಸಿತ್ತು, ಆದರೆ ಇತ್ತೀಚಿನ ಕಾನೂನು ತಿದ್ದುಪಡಿಗಳು ಅಧಿಕಾರಿಗಳಿಗೆ ಅಂತಿಮ ಸೂಚನೆಯನ್ನು ಹೊರಡಿಸಲು ಅವಕಾಶ ಮಾಡಿಕೊಟ್ಟವು, ಇದು ಕೆಡವಲು ಕಾರಣವಾಯಿತು ಎಂದು ವರದಿಗಳು ತಿಳಿಸಿವೆ.

ವಕ್ಫ್ ತಿದ್ದುಪಡಿ ಕಾಯ್ದೆಯು ವಕ್ಫ್ ಆಸ್ತಿಗಳ ದುರುಪಯೋಗವನ್ನು ಕಡಿಮೆ ಮಾಡಲು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಹಣವನ್ನು ಬಳಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಬಿಜೆಪಿ ಅಧ್ಯಕ್ಷ ಶರ್ಮಾ ಹೇಳಿದ್ದಾರೆ.

ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಅನುಮತಿ ಪಡೆಯಲಾಗಿದೆ ಎಂದು ಮದರಸಾ ಮಾಲೀಕರು ಹೇಳಿಕೊಂಡಿದ್ದಾರೆ. ಹೊಸದಾಗಿ ಅಂಗೀಕರಿಸಲಾದ ಕಾನೂನಿನ ಅಡಿಯಲ್ಲಿ ನೇರ ಆಡಳಿತಾತ್ಮಕ ಹಸ್ತಕ್ಷೇಪವನ್ನು ತಪ್ಪಿಸುವುದಕ್ಕಾಗಿ ಮದರಸಾ ಕಟ್ಟಡವನ್ನು ತಾವೇ ಸ್ವತಃ ಬುಲ್ಡೋಜರ್ ಬಳಸಿ ಸಂಪೂರ್ಣ  ಕೆಡವಿಹಾಕಲು ನಿರ್ಧರಿಸಿದ್ದಾರೆ.

ಹುಬ್ಬಳ್ಳಿ ಬಾಲಕಿ ಅಪಹರಣ, ಕೊಲೆ ಪ್ರಕರಣ | ಆರೋಪಿ ಬಿಹಾರದ ವಲಸೆ ಕಾರ್ಮಿಕ ‘ಎನ್‌ಕೌಂಟರ್’ನಲ್ಲಿ ಹತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hello Team
    Just a request, the title for this article and the matter inside are contradicting. To catch readers attention please don’t use these short cuts..
    Thanks for understanding…

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...