Homeಮುಖಪುಟಮಧ್ಯಪ್ರದೇಶ: ಕೆಜಿಎಫ್ ಸಿನಿಮಾದಿಂದ ಪ್ರೇರಿತನಾಗಿ ಐವರನ್ನು ಕೊಂದ ವ್ಯಕ್ತಿ -ಸಿಸಿಟಿವಿಯಲ್ಲಿ ದಾಖಲು

ಮಧ್ಯಪ್ರದೇಶ: ಕೆಜಿಎಫ್ ಸಿನಿಮಾದಿಂದ ಪ್ರೇರಿತನಾಗಿ ಐವರನ್ನು ಕೊಂದ ವ್ಯಕ್ತಿ -ಸಿಸಿಟಿವಿಯಲ್ಲಿ ದಾಖಲು

- Advertisement -
- Advertisement -

ಕೆಜಿಎಫ್ ಸಿನಿಮಾದಿಂದ ಪ್ರೇರಿತನಾದ 19 ವರ್ಷದ ಯುವಕನೊಬ್ಬ ಐದು ಜನರನ್ನು ಸರಣಿಯಾಗಿ ಕೊಂದು ಹಾಕಿರುವ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ಜರುಗಿದೆ. ಶಿವಪ್ರಸಾದ್ ಹೆಸರಿನ ಆ ಸರಣಿ ಕೊಲೆಗಾರ ನಾಲ್ಕು ಜನ ಸೆಕ್ಯುರಿಟಿ ಗಾರ್ಡ್‌ಗಳನ್ನು ಸೇರಿ ಐವರನ್ನು ಕೊಂದು ಹಾಕಿದ್ದು, ಅದರ ಸಿಸಿಟಿವಿ ವಿಡಿಯೋವೊಂದು ವೈರಲ್ ಆಗಿದೆ.

ಒಬ್ಬ ವ್ಯಕ್ತಿಯನ್ನು ಕೊಂದ ಬಳಿಕ ಆತನ ಮೊಬೈಲ್‌ ಅನ್ನು ತೆಗೆದುಕೊಂಡು ಹೋಗಿದ್ದರಿಂದ ಕೊಲೆಗಾರನನ್ನು ಪತ್ತೆ ಹಚ್ಚಿ ಭೋಪಾಲ್ ಪೊಲೀಸರು ಶುಕ್ರವಾರ ಬೆಳಿಗ್ಗೆ ಬಂಧಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವೈರಲ್ ಸಿಸಿಟಿವಿ ದೃಶ್ಯವೊಂದರಲ್ಲಿ ಮಂಚದ ಮೇಲೆ ಮಲಗಿರುವ ವ್ಯಕ್ತಿಯ ಮೇಲೆ ಕಲ್ಲಿನಿಂದ ಹೊಡೆದು ಸಾಯಿಸುವುದನ್ನು ನೋಡಬಹುದು. ಆನಂತರ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು 19 ವರ್ಷದ ಸರಣಿ ಕೊಲೆಗಾರ ತಪ್ಪಿಸಿಕೊಳ್ಳುವುದು ವಿಡಿಯೋದಲ್ಲಿ ದಾಖಲಾಗಿದೆ.

ಆತ ಮೂರು ರಾತ್ರಿಗಳಲ್ಲಿ ಮೂವರು ಸೆಕ್ಯುರಿಟಿ ಗಾರ್ಡ್‌ಗಳನ್ನು ಕೊಂದಿದ್ದಾನೆ ಎನ್ನಲಾಗಿದೆ. ಎಲ್ಲರನ್ನು ಕಲ್ಲಿನಿಂದ ಹೊಡೆದು ಕೊಲ್ಲಲಾಗಿದೆ. ಮಲಗಿದ ಸೆಕ್ಯುರಿಟಿ ಗಾರ್ಡ್‌ಗಳ ಆತನ ಟಾರ್ಗೆಟ್‌ಗಳಾಗಿದ್ದರು ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕೆಜಿಎಫ್ ಸಿನಿಮಾದಿಂದ ಸ್ಪೂರ್ತಿ ಪಡೆದು ಕೊಲೆಗಳನ್ನು ಮಾಡುತ್ತಿದ್ದ. ದಿಢೀರ್ ಪ್ರಚಾರಕ್ಕಾಗಿ ಆತ ಈ ಕೆಲಸಗಳನ್ನು ಮಾಡಿದ್ದಾನೆ. ಆತನ ಮುಂದಿನ ಟಾರ್ಗೆಟ್ ಪೊಲೀಸರಾಗಿದ್ದರು ಎನ್ನಲಾಗಿದೆ.

ಮೇ ತಿಂಗಳಿನಿಂದ ಆತ ಕೊಲೆ ಮಾಡಲು ಆರಂಭಿಸಿದ್ದ. ಬ್ರಿಡ್ಜ್ ಕಾಮಗಾರಿ ನೋಡಿಕೊಳ್ಳುತ್ತಿದ್ದ ಸೆಕ್ಯುರಿಟಿಯನ್ನು ಕೊಂದಿದ್ದ. ಆನಂತರ ಮಾರ್ಬಲ್ ಶಾಪ್‌ನಲ್ಲಿ ಸೆಕ್ಯುರಿಟಿಯಾಗಿದ್ದ ಸೋನು ವರ್ಮಾ ಎಂಬಾತನನ್ನು ಸಹ ಕೊಂದಿದ್ದ. ಆಗಸ್ಟ್ 28 ರಂದು ಕಾಲೇಜಿನಲ್ಲಿ ಸೆಕ್ಯುರಿಟಿಯಗಿದ್ದ 60 ವರ್ಷದ ಶಂಭು ನಾರಾಯಣ್ ದುಬೆ ಎಂಬುವವರನ್ನು ಸಹ ಕೊಲ್ಲಲಾಗಿದೆ. ಎಲ್ಲರನ್ನು ಕಲ್ಲಿನಿಂದ ಕೊಲ್ಲುತ್ತಿದ್ದ ಈತನನ್ನು ಜನರು ಸ್ಟೋನ್ ಕಿಲ್ಲರ್ ಎಂದು ಕರೆಯುತ್ತಿದ್ದರು ಎನ್ನಲಾಗಿದೆ.

ಮುಂಚಿನ ಪ್ರಕರಣಗಳಲ್ಲಿ ಈತ ಕೊಂದ ನಂತರ ತಪ್ಪಿಸಿಕೊಳ್ಳುತ್ತಿದ್ದನೆ ಹೊರತು ಕಳ್ಳತನ ಮಾಡುತ್ತಿರಲಿಲ್ಲ. ಆದರೆ ಇತ್ತೀಚೆಗೆ ಕೊಂದ ನಂತರ ಮೊಬೈಲ್ ತೆಗೆದುಕೊಂಡು ಹೋಗಿದ್ದ. ಅದರ ಲೊಕೇಶನ್ ಆಧರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ತಾನು ರಾತ್ರೋ ರಾತ್ರಿ ಫೇಮಸ್ ಆಗಬೇಕೆಂಬ ಏಕೈಕ ಕಾರಣದಿಂದ ಕೊಲ್ಲುತ್ತಿದ್ದೆ, ಇತ್ತೀಚಿಗೆ ಬಿಡುಗಡೆಯಾಗಿದ್ದ ಕೆಜಿಎಫ್ ಚಿತ್ರದಿಂದ ಪ್ರೇರಣೆ ಪಡೆದಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತರುಣ್ ನಾಯಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...