Homeಮುಖಪುಟಮಧ್ಯಪ್ರದೇಶ: ಕೆಜಿಎಫ್ ಸಿನಿಮಾದಿಂದ ಪ್ರೇರಿತನಾಗಿ ಐವರನ್ನು ಕೊಂದ ವ್ಯಕ್ತಿ -ಸಿಸಿಟಿವಿಯಲ್ಲಿ ದಾಖಲು

ಮಧ್ಯಪ್ರದೇಶ: ಕೆಜಿಎಫ್ ಸಿನಿಮಾದಿಂದ ಪ್ರೇರಿತನಾಗಿ ಐವರನ್ನು ಕೊಂದ ವ್ಯಕ್ತಿ -ಸಿಸಿಟಿವಿಯಲ್ಲಿ ದಾಖಲು

- Advertisement -
- Advertisement -

ಕೆಜಿಎಫ್ ಸಿನಿಮಾದಿಂದ ಪ್ರೇರಿತನಾದ 19 ವರ್ಷದ ಯುವಕನೊಬ್ಬ ಐದು ಜನರನ್ನು ಸರಣಿಯಾಗಿ ಕೊಂದು ಹಾಕಿರುವ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ಜರುಗಿದೆ. ಶಿವಪ್ರಸಾದ್ ಹೆಸರಿನ ಆ ಸರಣಿ ಕೊಲೆಗಾರ ನಾಲ್ಕು ಜನ ಸೆಕ್ಯುರಿಟಿ ಗಾರ್ಡ್‌ಗಳನ್ನು ಸೇರಿ ಐವರನ್ನು ಕೊಂದು ಹಾಕಿದ್ದು, ಅದರ ಸಿಸಿಟಿವಿ ವಿಡಿಯೋವೊಂದು ವೈರಲ್ ಆಗಿದೆ.

ಒಬ್ಬ ವ್ಯಕ್ತಿಯನ್ನು ಕೊಂದ ಬಳಿಕ ಆತನ ಮೊಬೈಲ್‌ ಅನ್ನು ತೆಗೆದುಕೊಂಡು ಹೋಗಿದ್ದರಿಂದ ಕೊಲೆಗಾರನನ್ನು ಪತ್ತೆ ಹಚ್ಚಿ ಭೋಪಾಲ್ ಪೊಲೀಸರು ಶುಕ್ರವಾರ ಬೆಳಿಗ್ಗೆ ಬಂಧಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವೈರಲ್ ಸಿಸಿಟಿವಿ ದೃಶ್ಯವೊಂದರಲ್ಲಿ ಮಂಚದ ಮೇಲೆ ಮಲಗಿರುವ ವ್ಯಕ್ತಿಯ ಮೇಲೆ ಕಲ್ಲಿನಿಂದ ಹೊಡೆದು ಸಾಯಿಸುವುದನ್ನು ನೋಡಬಹುದು. ಆನಂತರ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು 19 ವರ್ಷದ ಸರಣಿ ಕೊಲೆಗಾರ ತಪ್ಪಿಸಿಕೊಳ್ಳುವುದು ವಿಡಿಯೋದಲ್ಲಿ ದಾಖಲಾಗಿದೆ.

ಆತ ಮೂರು ರಾತ್ರಿಗಳಲ್ಲಿ ಮೂವರು ಸೆಕ್ಯುರಿಟಿ ಗಾರ್ಡ್‌ಗಳನ್ನು ಕೊಂದಿದ್ದಾನೆ ಎನ್ನಲಾಗಿದೆ. ಎಲ್ಲರನ್ನು ಕಲ್ಲಿನಿಂದ ಹೊಡೆದು ಕೊಲ್ಲಲಾಗಿದೆ. ಮಲಗಿದ ಸೆಕ್ಯುರಿಟಿ ಗಾರ್ಡ್‌ಗಳ ಆತನ ಟಾರ್ಗೆಟ್‌ಗಳಾಗಿದ್ದರು ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕೆಜಿಎಫ್ ಸಿನಿಮಾದಿಂದ ಸ್ಪೂರ್ತಿ ಪಡೆದು ಕೊಲೆಗಳನ್ನು ಮಾಡುತ್ತಿದ್ದ. ದಿಢೀರ್ ಪ್ರಚಾರಕ್ಕಾಗಿ ಆತ ಈ ಕೆಲಸಗಳನ್ನು ಮಾಡಿದ್ದಾನೆ. ಆತನ ಮುಂದಿನ ಟಾರ್ಗೆಟ್ ಪೊಲೀಸರಾಗಿದ್ದರು ಎನ್ನಲಾಗಿದೆ.

ಮೇ ತಿಂಗಳಿನಿಂದ ಆತ ಕೊಲೆ ಮಾಡಲು ಆರಂಭಿಸಿದ್ದ. ಬ್ರಿಡ್ಜ್ ಕಾಮಗಾರಿ ನೋಡಿಕೊಳ್ಳುತ್ತಿದ್ದ ಸೆಕ್ಯುರಿಟಿಯನ್ನು ಕೊಂದಿದ್ದ. ಆನಂತರ ಮಾರ್ಬಲ್ ಶಾಪ್‌ನಲ್ಲಿ ಸೆಕ್ಯುರಿಟಿಯಾಗಿದ್ದ ಸೋನು ವರ್ಮಾ ಎಂಬಾತನನ್ನು ಸಹ ಕೊಂದಿದ್ದ. ಆಗಸ್ಟ್ 28 ರಂದು ಕಾಲೇಜಿನಲ್ಲಿ ಸೆಕ್ಯುರಿಟಿಯಗಿದ್ದ 60 ವರ್ಷದ ಶಂಭು ನಾರಾಯಣ್ ದುಬೆ ಎಂಬುವವರನ್ನು ಸಹ ಕೊಲ್ಲಲಾಗಿದೆ. ಎಲ್ಲರನ್ನು ಕಲ್ಲಿನಿಂದ ಕೊಲ್ಲುತ್ತಿದ್ದ ಈತನನ್ನು ಜನರು ಸ್ಟೋನ್ ಕಿಲ್ಲರ್ ಎಂದು ಕರೆಯುತ್ತಿದ್ದರು ಎನ್ನಲಾಗಿದೆ.

ಮುಂಚಿನ ಪ್ರಕರಣಗಳಲ್ಲಿ ಈತ ಕೊಂದ ನಂತರ ತಪ್ಪಿಸಿಕೊಳ್ಳುತ್ತಿದ್ದನೆ ಹೊರತು ಕಳ್ಳತನ ಮಾಡುತ್ತಿರಲಿಲ್ಲ. ಆದರೆ ಇತ್ತೀಚೆಗೆ ಕೊಂದ ನಂತರ ಮೊಬೈಲ್ ತೆಗೆದುಕೊಂಡು ಹೋಗಿದ್ದ. ಅದರ ಲೊಕೇಶನ್ ಆಧರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ತಾನು ರಾತ್ರೋ ರಾತ್ರಿ ಫೇಮಸ್ ಆಗಬೇಕೆಂಬ ಏಕೈಕ ಕಾರಣದಿಂದ ಕೊಲ್ಲುತ್ತಿದ್ದೆ, ಇತ್ತೀಚಿಗೆ ಬಿಡುಗಡೆಯಾಗಿದ್ದ ಕೆಜಿಎಫ್ ಚಿತ್ರದಿಂದ ಪ್ರೇರಣೆ ಪಡೆದಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತರುಣ್ ನಾಯಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...