Homeಮುಖಪುಟಮಧ್ಯಪ್ರದೇಶ: ಕೆಜಿಎಫ್ ಸಿನಿಮಾದಿಂದ ಪ್ರೇರಿತನಾಗಿ ಐವರನ್ನು ಕೊಂದ ವ್ಯಕ್ತಿ -ಸಿಸಿಟಿವಿಯಲ್ಲಿ ದಾಖಲು

ಮಧ್ಯಪ್ರದೇಶ: ಕೆಜಿಎಫ್ ಸಿನಿಮಾದಿಂದ ಪ್ರೇರಿತನಾಗಿ ಐವರನ್ನು ಕೊಂದ ವ್ಯಕ್ತಿ -ಸಿಸಿಟಿವಿಯಲ್ಲಿ ದಾಖಲು

- Advertisement -
- Advertisement -

ಕೆಜಿಎಫ್ ಸಿನಿಮಾದಿಂದ ಪ್ರೇರಿತನಾದ 19 ವರ್ಷದ ಯುವಕನೊಬ್ಬ ಐದು ಜನರನ್ನು ಸರಣಿಯಾಗಿ ಕೊಂದು ಹಾಕಿರುವ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ಜರುಗಿದೆ. ಶಿವಪ್ರಸಾದ್ ಹೆಸರಿನ ಆ ಸರಣಿ ಕೊಲೆಗಾರ ನಾಲ್ಕು ಜನ ಸೆಕ್ಯುರಿಟಿ ಗಾರ್ಡ್‌ಗಳನ್ನು ಸೇರಿ ಐವರನ್ನು ಕೊಂದು ಹಾಕಿದ್ದು, ಅದರ ಸಿಸಿಟಿವಿ ವಿಡಿಯೋವೊಂದು ವೈರಲ್ ಆಗಿದೆ.

ಒಬ್ಬ ವ್ಯಕ್ತಿಯನ್ನು ಕೊಂದ ಬಳಿಕ ಆತನ ಮೊಬೈಲ್‌ ಅನ್ನು ತೆಗೆದುಕೊಂಡು ಹೋಗಿದ್ದರಿಂದ ಕೊಲೆಗಾರನನ್ನು ಪತ್ತೆ ಹಚ್ಚಿ ಭೋಪಾಲ್ ಪೊಲೀಸರು ಶುಕ್ರವಾರ ಬೆಳಿಗ್ಗೆ ಬಂಧಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವೈರಲ್ ಸಿಸಿಟಿವಿ ದೃಶ್ಯವೊಂದರಲ್ಲಿ ಮಂಚದ ಮೇಲೆ ಮಲಗಿರುವ ವ್ಯಕ್ತಿಯ ಮೇಲೆ ಕಲ್ಲಿನಿಂದ ಹೊಡೆದು ಸಾಯಿಸುವುದನ್ನು ನೋಡಬಹುದು. ಆನಂತರ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು 19 ವರ್ಷದ ಸರಣಿ ಕೊಲೆಗಾರ ತಪ್ಪಿಸಿಕೊಳ್ಳುವುದು ವಿಡಿಯೋದಲ್ಲಿ ದಾಖಲಾಗಿದೆ.

ಆತ ಮೂರು ರಾತ್ರಿಗಳಲ್ಲಿ ಮೂವರು ಸೆಕ್ಯುರಿಟಿ ಗಾರ್ಡ್‌ಗಳನ್ನು ಕೊಂದಿದ್ದಾನೆ ಎನ್ನಲಾಗಿದೆ. ಎಲ್ಲರನ್ನು ಕಲ್ಲಿನಿಂದ ಹೊಡೆದು ಕೊಲ್ಲಲಾಗಿದೆ. ಮಲಗಿದ ಸೆಕ್ಯುರಿಟಿ ಗಾರ್ಡ್‌ಗಳ ಆತನ ಟಾರ್ಗೆಟ್‌ಗಳಾಗಿದ್ದರು ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕೆಜಿಎಫ್ ಸಿನಿಮಾದಿಂದ ಸ್ಪೂರ್ತಿ ಪಡೆದು ಕೊಲೆಗಳನ್ನು ಮಾಡುತ್ತಿದ್ದ. ದಿಢೀರ್ ಪ್ರಚಾರಕ್ಕಾಗಿ ಆತ ಈ ಕೆಲಸಗಳನ್ನು ಮಾಡಿದ್ದಾನೆ. ಆತನ ಮುಂದಿನ ಟಾರ್ಗೆಟ್ ಪೊಲೀಸರಾಗಿದ್ದರು ಎನ್ನಲಾಗಿದೆ.

ಮೇ ತಿಂಗಳಿನಿಂದ ಆತ ಕೊಲೆ ಮಾಡಲು ಆರಂಭಿಸಿದ್ದ. ಬ್ರಿಡ್ಜ್ ಕಾಮಗಾರಿ ನೋಡಿಕೊಳ್ಳುತ್ತಿದ್ದ ಸೆಕ್ಯುರಿಟಿಯನ್ನು ಕೊಂದಿದ್ದ. ಆನಂತರ ಮಾರ್ಬಲ್ ಶಾಪ್‌ನಲ್ಲಿ ಸೆಕ್ಯುರಿಟಿಯಾಗಿದ್ದ ಸೋನು ವರ್ಮಾ ಎಂಬಾತನನ್ನು ಸಹ ಕೊಂದಿದ್ದ. ಆಗಸ್ಟ್ 28 ರಂದು ಕಾಲೇಜಿನಲ್ಲಿ ಸೆಕ್ಯುರಿಟಿಯಗಿದ್ದ 60 ವರ್ಷದ ಶಂಭು ನಾರಾಯಣ್ ದುಬೆ ಎಂಬುವವರನ್ನು ಸಹ ಕೊಲ್ಲಲಾಗಿದೆ. ಎಲ್ಲರನ್ನು ಕಲ್ಲಿನಿಂದ ಕೊಲ್ಲುತ್ತಿದ್ದ ಈತನನ್ನು ಜನರು ಸ್ಟೋನ್ ಕಿಲ್ಲರ್ ಎಂದು ಕರೆಯುತ್ತಿದ್ದರು ಎನ್ನಲಾಗಿದೆ.

ಮುಂಚಿನ ಪ್ರಕರಣಗಳಲ್ಲಿ ಈತ ಕೊಂದ ನಂತರ ತಪ್ಪಿಸಿಕೊಳ್ಳುತ್ತಿದ್ದನೆ ಹೊರತು ಕಳ್ಳತನ ಮಾಡುತ್ತಿರಲಿಲ್ಲ. ಆದರೆ ಇತ್ತೀಚೆಗೆ ಕೊಂದ ನಂತರ ಮೊಬೈಲ್ ತೆಗೆದುಕೊಂಡು ಹೋಗಿದ್ದ. ಅದರ ಲೊಕೇಶನ್ ಆಧರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ತಾನು ರಾತ್ರೋ ರಾತ್ರಿ ಫೇಮಸ್ ಆಗಬೇಕೆಂಬ ಏಕೈಕ ಕಾರಣದಿಂದ ಕೊಲ್ಲುತ್ತಿದ್ದೆ, ಇತ್ತೀಚಿಗೆ ಬಿಡುಗಡೆಯಾಗಿದ್ದ ಕೆಜಿಎಫ್ ಚಿತ್ರದಿಂದ ಪ್ರೇರಣೆ ಪಡೆದಿದ್ದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತರುಣ್ ನಾಯಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರನ್ನು ಬೆಂಗಳೂರು ಆಸ್ಪತ್ರೆಗೆ ರವಾನೆ ವಿಚಾರಕ್ಕೆ ಕಿಡಿಕಾರಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...