77ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಸ್ಪೀಕರ್ ಮತ್ತು ಸಚಿವರು ವೇದಿಕೆಯಿಂದ ಕುಸಿದು ಬಿದ್ದಿದ್ದಾರೆ.
ವೇದಿಕೆಯಲ್ಲಿ ಕುಳಿತು ಗೌರವ ವಂದನೆ ಸ್ವೀಕರಿಸುವಾಗ ಆರೋಗ್ಯ ಸಚಿವ ಪ್ರಭುರಾಮ್ ಚೌದರ್ ವೇದಿಕೆಯಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಮಧ್ಯಪ್ರದೇಶದ ಸ್ಪೀಕರ್ ಗಿರೀಶ್ ಗೌತಮ್ ಧ್ವಜಾರೋಹಣ ಮಾಡಿ ಸಾರ್ವ ಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ದಿಢೀರ್ ಅಸ್ವಸ್ಥರಾಗಿದ್ದಾರೆ. ವೈದ್ಯರು ತಕ್ಷಣ ಅವರಿಗೆ ಚಿಕಿತ್ಸೆ ನೀಡಿದ್ದು ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನದ ಹಿನ್ನೆಲೆ ನಿನ್ನೆ ಹರ್ ಘರ್ ತಿರಂಗ ರ್ಯಾಲಿಯನ್ನು ಆಯೋಜಿಸಲಾಗಿತ್ತು. ರ್ಯಾಲಿಯಲ್ಲಿ ಮಕ್ಕಳು, ಪೊಲೀಸರು ಅಧಿಕಾರಿಗಳು ಸಾರ್ವಜನಿಕರು ಭಾಗಿಯಾಗಿದ್ದರು.
ಚೌದರಿಯ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ತಿರಂಗ ಯಾತ್ರೆಯನ್ನು ಕೂಡ ಆಯೋಜಿಸಲಾಗಿತ್ತು.
ಇದನ್ನು ಓದಿ; ಏಕನಾಥ್ ಶಿಂಧೆಯನ್ನು ಆಸ್ಪತ್ರೆಗೆ ದಾಖಲಿಸಿ ಅಜಿತ್ ಪವಾರನ್ನು ಸಿಎಂ ಮಾಡುವ ಹುನ್ನಾರ ನಡೆಯುತ್ತಿದೆ: ವಿಜಯ್ ವಾಡೆತ್ತಿವಾರ್