Homeಮುಖಪುಟಬಿಜೆಪಿ ಸಚಿವನ ಪುತ್ರನಿಂದ ಮೂವರ ಮೇಲೆ ಹಲ್ಲೆ: ಆರೋಪಿ ಜೊತೆ ದುರ್ವರ್ತನೆ ನೆಪದಲ್ಲಿ ನಾಲ್ವರು ಪೊಲೀಸರು...

ಬಿಜೆಪಿ ಸಚಿವನ ಪುತ್ರನಿಂದ ಮೂವರ ಮೇಲೆ ಹಲ್ಲೆ: ಆರೋಪಿ ಜೊತೆ ದುರ್ವರ್ತನೆ ನೆಪದಲ್ಲಿ ನಾಲ್ವರು ಪೊಲೀಸರು ಅಮಾನತು

- Advertisement -
- Advertisement -

ಮಧ್ಯಪ್ರದೇಶದ ಬಿಜೆಪಿ ಸಚಿವ ನರೇಂದ್ರ ಶಿವಾಜಿ ಪಟೇಲ್ ಪುತ್ರ ಮತ್ತು ಬೆಂಬಲಿಗರು ಬೈಕ್ ಸವಾರ ಸೇರಿ ಮೂವರ ಮೇಲೆ ಹಲ್ಲೆ ನಡೆಸಿದ್ದು, ಇದೀಗ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಭೋಪಾಲ್‌ನಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ನಗರದ ರೆಸ್ಟೋರೆಂಟ್‌ವೊಂದರ ಬಳಿ ಬಿಜೆಪಿ ಸಚಿವರ ಪುತ್ರ ಅಭಿಜ್ಞಾನ್ ಪಟೇಲ್ ಮತ್ತು ಅವರ ಸ್ನೇಹಿತರು ಬೈಕ್ ಸವಾರನೋರ್ವನ ಮೋಟಾರ್ ಸೈಕಲ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದು ಬಳಿಕ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ರೆಸ್ಟೋರೆಂಟ್ ಮಾಲಕರು ನೀಡಿದ ದೂರಿನ ಪ್ರಕಾರ, ಅಭಿಜ್ಞಾನ್ ಪಟೇಲ್ ಮತ್ತು ಅವರ ಸ್ನೇಹಿತರು ತಮ್ಮ ಕಾರಿನಿಂದ ಇಳಿದು ಮೋಟಾರ್ ಸೈಕಲ್ ಸವಾರನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ರೆಸ್ಟೋರೆಂಟ್ ಮಾಲಕರು ಮತ್ತು ಅವರ ಪತ್ನಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ದಾಳಿಕೋರರು ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ದಾಳಿಕೋರರು ಇಟ್ಟಿಗೆ ಮತ್ತು ರಾಡ್‌ಗಳಿಂದ ಹೊಡೆದಿದ್ದರಿಂದ ರೆಸ್ಟೋರೆಂಟ್ ಮಾಲೀಕರ ತಲೆಗೆ ತೀವ್ರ ಗಾಯವಾಗಿದೆ.

ಈ ಕುರಿತು ಮೂರು ಎಫ್‌ಐಆರ್‌ಗಳು ದಾಖಲಾಗಿದೆ.  ಅಭಿಜ್ಞಾನ್ ಪಟೇಲ್ ನೀಡಿದ  ಪ್ರತಿ ದೂರಿನ ಆಧಾರದ ಮೇಲೆ ಕೂಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶಹಾಪುರ ಠಾಣೆಗೆ ದೂರು ನೀಡಲು ತೆರಳಿದ ನಾಲ್ವರು ಸಂತ್ರಸ್ತರನ್ನು ವೈದ್ಯಕೀಯ ತಪಾಸಣೆಗಾಗಿ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಅಭಿಜ್ಞಾನ್ ಮತ್ತು ಆತನ ಬೆಂಬಲಿಗರು ಮತ್ತೆ ದಾಳಿ ಮಾಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ ಮತ್ತು ದಾಳಿ ಹಿನ್ನೆಲೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಭಿಜ್ಞಾನ್ ಮತ್ತು ಬೆಂಬಲಿಗರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.

ತಡರಾತ್ರಿ ಸಚಿವ ನರೇಂದ್ರ ಶಿವಾಜಿ ಪಟೇಲ್ ತಮ್ಮ ಬೆಂಬಲಿಗರೊಂದಿಗೆ ಶಹಾಪುರ ಪೊಲೀಸ್ ಠಾಣೆಗೆ ಆಗಮಿಸಿ, ಪೊಲೀಸರು ತಮ್ಮ ಪುತ್ರ ಹಾಗೂ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಒಂದು ಗಂಟೆಯ ನಂತರ ಸಚಿವರು ತಮ್ಮ ಪುತ್ರನೊಂದಿಗೆ ಠಾಣೆಯಿಂದ ಹೊರಟಿದ್ದರು. ಸಚಿವರ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಕಂಡು ಬಂದಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಯೂರ್ ಖಂಡೇಲ್ವಾಲ್, ಪೊಲೀಸ್ ಸಿಬ್ಬಂದಿ  ದುರ್ವರ್ತನೆ ತೋರಿದ್ದಾರೆ ಎನ್ನುವುದನ್ನು ದೃಢಪಡಿಸಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಭಾನುವಾರ ಮಧ್ಯಾಹ್ನ ಸಂತ್ರಸ್ತರೊಂದಿಗೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ದಾಳಿಯ ವೇಳೆ ರೆಸ್ಟೋರೆಂಟ್ ಮಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದರೆ ಕೊಲೆ ಯತ್ನ ಪ್ರಕರಣವನ್ನು ಏಕೆ ದಾಖಲಿಸಿಲ್ಲ ಎಂದು ಪಟ್ವಾರಿ ಪ್ರಶ್ನಿಸಿದ್ದಾರೆ. ಪೊಲೀಸರನ್ನು ಅಮಾನತುಗೊಳಿಸಿರುವ ಬಗ್ಗೆ ಆಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸಿದ ‘ಲೋಕತಂತ್ರ ಬಚಾವೋ’ ರ್‍ಯಾಲಿ: ಯಾವ್ಯಾವ ನಾಯಕರು ಏನೇನು ಹೇಳಿದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...