Homeಮುಖಪುಟಮಧ್ಯ ಪ್ರದೇಶ : 15 ನಿಮಿಷದಲ್ಲಿ ಎರಡು ಬಾರಿ ಸಚಿವರಾದ ಶಾಸಕ!

ಮಧ್ಯ ಪ್ರದೇಶ : 15 ನಿಮಿಷದಲ್ಲಿ ಎರಡು ಬಾರಿ ಸಚಿವರಾದ ಶಾಸಕ!

- Advertisement -
- Advertisement -

ಮಧ್ಯ ಪ್ರದೇಶದಲ್ಲಿ ನಡೆದ ವಿಚಿತ್ರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಾಸಕರೊಬ್ಬರು 15 ನಿಮಿಷದಲ್ಲಿ ಎರಡು ಬಾರಿ ಸಚಿವರಾಗಿದ್ದಾರೆ.

ಆರು ಬಾರಿ ವಿಜಯಪುರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಿದ್ದ ರಾಮ್‌ ನಿವಾಸ್ ರಾವತ್ ಅವರು, ಕಳೆದ ಏಪ್ರಿಲ್‌ನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ನಿನ್ನೆ (ಜುಲೈ 8) ಬಿಜೆಪಿ ಸರ್ಕಾದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆದರೆ, ಪ್ರಮಾಣ ವಚನ ಸ್ವೀಕಾರ ಸಮಾರಂಭವು ಅಸಾಮಾನ್ಯ ಘಟನೆಗೆ ಸಾಕ್ಷಿಯಾಗಿ ಸುದ್ದಿಯಾಗಿದೆ. ಬೆಳಿಗ್ಗೆ 9 ಗಂಟೆಗೆ ರಾಜಭವನದಲ್ಲಿ ಮುಖ್ಯಮಂತ್ರಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ರಾಜ್ಯಪಾಲ ಮಂಗುಭಾಯ್ ಸಿ ಪಟೇಲ್ ಅವರು ರಾವತ್ ಅವರಿಗೆ ಸಚಿವರಾಗಿ ಪ್ರಮಾಣ ವಚನ ಬೋಧಿಸಲು ನಿರ್ಧರಿಸಲಾಗಿತ್ತು. ಬೆಳಿಗ್ಗೆ 9.03ರ ಹೊತ್ತಿಗೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದಾಗಿ 15 ನಿಮಿಷಗಳ ನಂತರ ರಾವತ್ ಅವರಿಗೆ ಸಂಪುಟ ಸಚಿವರಾಗಿ ಎರಡನೇ ಪ್ರಮಾಣ ವಚನ ಬೋಧಿಸಲಾಗಿದೆ. ಎರಡು ಬಾರಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕಾರ್ಯವಿಧಾನದ ಲೋಪಗಳ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಕಾಂಗ್ರೆಸ್‌ ಶಾಸಕರಾಗಿರುವಾಗಲೇ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ ಮೊದಲ ವ್ಯಕ್ತಿ ರಾಮ್ ನಿವಾಸ್ ರಾವತ್ ಆಗಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗಿರುವ ರಾಮ್ ನಿವಾಸ್ ರಾವತ್, ಇನ್ನೂ ಕೂಡ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ. ಇಂದಿಗೂ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಮತ್ತು ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಆದರೆ ಬಿಜೆಪಿ ಸೇರಿ ಸಚಿವರಾಗಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಮಾಡುವಾಗ ರಾವತ್ ‘ಸಂಪುಟ ಸಚಿವ’ ಎಂದು ಹೇಳುವ ಬದಲಾಗಿ ತಪ್ಪಿ ‘ರಾಜ್ಯ ಸಚಿವ’ ರೆಂದು ಹೇಳಿದ್ದಾರೆ. ಇದರಿಂದಾಗಿ ಎರಡು ಬಾರಿ ಪ್ರಮಾಣ ವಚನ ಸ್ವೀಕಾರ ಮಾಡಬೇಕಾಯಿತು ಎಂದು ವರದಿಗಳು ಹೇಳಿವೆ.

ಆದರೆ, ಮೊದಲು ತಪ್ಪಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸ್ಥಾನಕ್ಕೆ ರಾವತ್ ರಾಜೀನಾಮೆ ನೀಡದ ಕಾರಣ ಈಗ ರಾವತ್ ಸಂಪುಟ ಸಚಿವರೂ ಆಗಿದ್ದಾರೆ, ರಾಜ್ಯ ಸಚಿವರೂ ಆಗಿದ್ದಾರೆ. ಸಾಂಪ್ರಾದಾಯಿಕವಾಗಿ ಅವರು ಸಂಪುಟ ಸಚಿವ ಪ್ರಮಾಣ ವಚನ ಸ್ವೀಕಾರ ಮಾಡುವ ಮೊದಲು ತಾನು ತಪ್ಪಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯ ಸಚಿವ ಸ್ಥಾನಕ್ಕೆ ಔಪಚಾರಿಕವಾಗಿ ರಾಜೀನಾಮೆ ನೀಡಬೇಕಾಗುತ್ತದೆ.

ಅತ್ತ ಕಾಂಗ್ರೆಸ್‌ಗೆ ರಾಜೀನಾಮೆ ನೀಡದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ರಾವತ್, ಇತ್ತ ಪ್ರಮಾಣ ವಚನದಲ್ಲಿ ಪ್ರಮಾದವೆಸಗಿ ಎರಡು ಸಚಿವರಾಗಿದ್ದಾರೆ. ಒಟ್ಟಿನಲ್ಲಿ ರಾವತ್ ರಾಜಕೀಯ ಗೊಂದಲಮಯವಾಗಿದೆ.

ಇದನ್ನೂ ಓದಿ : ಬೀಫ್ ಕಳ್ಳಸಾಗಣೆದಾರರಿಗೆ ಕೇಂದ್ರ ಸಚಿವ ಪಾಸ್ ನೀಡಿದ ಆರೋಪ: ಸಾಮಾನ್ಯ ಪ್ರಕ್ರಿಯೆ ಎಂದ ಬಿಎಸ್‌ಎಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...