Homeಮುಖಪುಟಮಧ್ಯಪ್ರದೇಶ | ಧಾರ್ಮಿಕ ಗುರುತಿನ ಆಧಾರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಗುಂಪು ಹಲ್ಲೆ: ಆರೋಪ

ಮಧ್ಯಪ್ರದೇಶ | ಧಾರ್ಮಿಕ ಗುರುತಿನ ಆಧಾರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಗುಂಪು ಹಲ್ಲೆ: ಆರೋಪ

- Advertisement -
- Advertisement -

ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ ತಮ್ಮ ಧಾರ್ಮಿಕ ಗುರುತಿನ ಆಧಾರದ ಮೇಲೆ ಗುಂಪೊಂದು ತನ್ನನ್ನು ಮತ್ತು ತನ್ನ ಕುಟುಂಬವನ್ನು ಥಳಿಸಿದೆ ಎಂದು ಮುಸ್ಲಿಂ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಗುಂಪು ಹಲ್ಲೆ ನಡೆದರೂ ಪೊಲೀಸರು ಎಫ್‌ಐಆರ್‌ನಲ್ಲಿ ತಪ್ಪಾಗಿ ಉಲ್ಲೇಖಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವ ವಿಡಿಯೊ ಸಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸೆಪ್ಟೆಂಬರ್ 15 ರಂದು ಜಿಲ್ಲೆಯ ಔರಿಯಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ವಾಜಿದ್ ಅಲಿ (23) ಹೇಳಿದ್ದಾರೆ. ಅವರು ತನ್ನ ತಂದೆ ಮತ್ತು ತಾಯಿಯೊಂದಿಗೆ ಸಹೋದರಿಯ ಭೇಟಿಗೆ ತೆರಳುತ್ತಿದ್ದರು. ಈ ವೇಳೆ ಜನರ ಗುಂಪೊಂದು ಅವರ ಹಲ್ಲೆ ನಡೆಸಿತ್ತು. ಆದರೆ, ಪೊಲೀಸರು ಮಧ್ಯ ಪ್ರವೇಶಿಸಿ ಸಂತ್ರಸ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಅವರನ್ನು ಚಿಂದ್ವಾರದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ನನ್ನ ಸಹೋದರಿಯನ್ನು ಭೇಟಿಯಾಗಲು ಹೋಗುತ್ತಿದ್ದಾಗ ಔರಿಯಾ ಗ್ರಾಮದ ಜನರು ನಮ್ಮನ್ನು ತಡೆದು ನನ್ನ ಪೋಷಕರಿಗೆ ಥಳಿಸಲು ಪ್ರಾರಂಭಿಸಿದರು. ನನಗೂ ಥಳಿಸಲಾಗಿದೆ. ಪೊಲೀಸರು ಸಮಯಕ್ಕೆ ಬಾರದಿದ್ದರೆ ಅವರು ನಮ್ಮನ್ನು ಕೊಲ್ಲುತ್ತಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

‘ಸಂತ್ರಸ್ತರ ಹೇಳಿಕೆ ದಾಖಲಾಗಿದೆ’: ಆರೋಪ ನಿರಾಕರಿಸಿದ ಪೊಲೀಸರು

ಧರ್ಮದ ಆಧಾರದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಕುಟುಂಬಸ್ಥರ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ತಪ್ಪಾಗಿ ಉಲ್ಲೇಖಿಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಆಸ್ಪತ್ರೆಯಲ್ಲಿ ಸಂತ್ರಸ್ತರು ನೀಡಿದ ಹೇಳಿಕೆಯ ದೃಶ್ಯಗಳನ್ನು ತಾವು ದಾಖಲಿಸಿರುವುದಾಗಿ ಅವರು ಹೇಳಿದ್ದಾರೆ.

ವಾಜಿದ್ ತನ್ನ ಗ್ರಾಮದ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದು, ಕೆಲವು ತಿಂಗಳ ಹಿಂದೆ ಆಕೆಯೊಂದಿಗೆ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

“ಈ ಸಂಬಂಧ ಮಹಿಳೆಯ ಮನೆಯವರು ದೂರು ದಾಖಲಿಸಿದ್ದು, ದಂಪತಿಯನ್ನು ಹೈದರಾಬಾದ್‌ನಲ್ಲಿ ಪತ್ತೆ ಹಚ್ಚಿ ವಾಪಸ್ ಕರೆತರಲಾಗಿದೆ. ಇದರ ನಂತರ ಎರಡು ಕುಟುಂಬಗಳ ನಡುವೆ ರಾಜಿ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಲಾಯಿತು. ಮಹಿಳೆಯನ್ನು ಔರಿಯಾ ಗ್ರಾಮದ ತನ್ನ ತಾಯಿಯ ಚಿಕ್ಕಪ್ಪನೊಂದಿಗೆ ವಾಸಿಸಲು ಕಳುಹಿಸಲಾಯಿತು” ಎಂದು ಅವರು ತಿಳಿದಿಸಿದ್ದಾರೆ.

ಇದನ್ನೂ ಓದಿ: ಗುಂಪು ಹಲ್ಲೆ – ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

“ಯುವಕ ಮತ್ತು ಅವರ ಪೋಷಕರು ಔರಿಯಾಗೆ ಹೋಗಿದ್ದರು. ಅಲ್ಲಿ ಅವರನ್ನು ಮಹಿಳೆಯ ಕುಟುಂಬದ ಸದಸ್ಯರು ಗುರುತಿಸಿದ್ದಾರೆ” ಎಂದು ಕುಪುರ್ಡಾ ಪೊಲೀಸ್ ಹೊರಠಾಣೆ ಉಸ್ತುವಾರಿ ದ್ವಾರಕಾ ಪ್ರಸಾದ್ ಪಾಲ್ ಹೇಳಿದ್ದಾರೆ. ಈ ವೇಳೆ ಕುಟುಂಬ ಸದಸ್ಯರು ಅವರೊಂದಿಗೆ ತರ್ಕಿಸಲು ಪ್ರಯತ್ನಿಸಿದರು, ಅದರ ನಂತರ ಗಲಾಟೆ ನಡೆದಿದ್ದು, ಯುವಕ ಮತ್ತು ಅವನ ಹೆತ್ತವರನ್ನು ಥಳಿಸಲಾಗಿದೆ ಎಂದು ಅವರ ಹೇಳಿದ್ದಾರೆ.

ಸಂತ್ರಸ್ತ ವಾಜಿದ್ ಅವರು ತನಗೆ ಹುಡುಗಿಯೊಂದಿಗೆ ಪ್ರೇಮ ಸಂಬಂಧ ಇರುವುದು ನಿಜವಾಗಿದ್ದು, ತಾವಿಬ್ಬರೂ ಓಡಿಹೋಗಿ ನಂತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಕಳೆದ ವಾರ ನಡೆದ ಘಟನೆಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ತಮ್ಮ ಮೇಲೆ ಗುಂಪು ಹಲ್ಲೆ ನಡೆದ ಸಂದಂರ್ಭ ಅವರು ಮತ್ತು ಅವರ ಪೋಷಕರು ಆರಿ ಗ್ರಾಮದಲ್ಲಿರುವ ತಮ್ಮ ಸಹೋದರಿಯನ್ನು ಭೇಟಿ ಮಾಡಲು ಹೋಗುತ್ತಿದ್ದದ್ದಾಗಿ ಹೇಳಿದ್ದಾರೆ. ಈ ವೇಳೆ ಗ್ರಾಮಸ್ಥರು ಅವರನ್ನು ತಡೆದು ಗುಂಪು ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ: ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

ಈ ಮಧ್ಯೆ ಪೊಲೀಸರು ಕುಟುಂಬದ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 294 (ಸಾರ್ವಜನಿಕವಾಗಿ ಅಶ್ಲೀಲ ಕೃತ್ಯಗಳು) 323 (ಉದ್ದೇಶಪೂರ್ವಕವಾಗಿ ನೋವುಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...