Homeಮುಖಪುಟಮಧ್ಯಪ್ರದೇಶ | ಧಾರ್ಮಿಕ ಗುರುತಿನ ಆಧಾರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಗುಂಪು ಹಲ್ಲೆ: ಆರೋಪ

ಮಧ್ಯಪ್ರದೇಶ | ಧಾರ್ಮಿಕ ಗುರುತಿನ ಆಧಾರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಗುಂಪು ಹಲ್ಲೆ: ಆರೋಪ

- Advertisement -
- Advertisement -

ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ ತಮ್ಮ ಧಾರ್ಮಿಕ ಗುರುತಿನ ಆಧಾರದ ಮೇಲೆ ಗುಂಪೊಂದು ತನ್ನನ್ನು ಮತ್ತು ತನ್ನ ಕುಟುಂಬವನ್ನು ಥಳಿಸಿದೆ ಎಂದು ಮುಸ್ಲಿಂ ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಗುಂಪು ಹಲ್ಲೆ ನಡೆದರೂ ಪೊಲೀಸರು ಎಫ್‌ಐಆರ್‌ನಲ್ಲಿ ತಪ್ಪಾಗಿ ಉಲ್ಲೇಖಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಜನರ ಗುಂಪೊಂದು ಹಲ್ಲೆ ನಡೆಸುತ್ತಿರುವ ವಿಡಿಯೊ ಸಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸೆಪ್ಟೆಂಬರ್ 15 ರಂದು ಜಿಲ್ಲೆಯ ಔರಿಯಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ವಾಜಿದ್ ಅಲಿ (23) ಹೇಳಿದ್ದಾರೆ. ಅವರು ತನ್ನ ತಂದೆ ಮತ್ತು ತಾಯಿಯೊಂದಿಗೆ ಸಹೋದರಿಯ ಭೇಟಿಗೆ ತೆರಳುತ್ತಿದ್ದರು. ಈ ವೇಳೆ ಜನರ ಗುಂಪೊಂದು ಅವರ ಹಲ್ಲೆ ನಡೆಸಿತ್ತು. ಆದರೆ, ಪೊಲೀಸರು ಮಧ್ಯ ಪ್ರವೇಶಿಸಿ ಸಂತ್ರಸ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಅವರನ್ನು ಚಿಂದ್ವಾರದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ನನ್ನ ಸಹೋದರಿಯನ್ನು ಭೇಟಿಯಾಗಲು ಹೋಗುತ್ತಿದ್ದಾಗ ಔರಿಯಾ ಗ್ರಾಮದ ಜನರು ನಮ್ಮನ್ನು ತಡೆದು ನನ್ನ ಪೋಷಕರಿಗೆ ಥಳಿಸಲು ಪ್ರಾರಂಭಿಸಿದರು. ನನಗೂ ಥಳಿಸಲಾಗಿದೆ. ಪೊಲೀಸರು ಸಮಯಕ್ಕೆ ಬಾರದಿದ್ದರೆ ಅವರು ನಮ್ಮನ್ನು ಕೊಲ್ಲುತ್ತಿದ್ದರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

‘ಸಂತ್ರಸ್ತರ ಹೇಳಿಕೆ ದಾಖಲಾಗಿದೆ’: ಆರೋಪ ನಿರಾಕರಿಸಿದ ಪೊಲೀಸರು

ಧರ್ಮದ ಆಧಾರದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಕುಟುಂಬಸ್ಥರ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ತಪ್ಪಾಗಿ ಉಲ್ಲೇಖಿಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಆಸ್ಪತ್ರೆಯಲ್ಲಿ ಸಂತ್ರಸ್ತರು ನೀಡಿದ ಹೇಳಿಕೆಯ ದೃಶ್ಯಗಳನ್ನು ತಾವು ದಾಖಲಿಸಿರುವುದಾಗಿ ಅವರು ಹೇಳಿದ್ದಾರೆ.

ವಾಜಿದ್ ತನ್ನ ಗ್ರಾಮದ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದು, ಕೆಲವು ತಿಂಗಳ ಹಿಂದೆ ಆಕೆಯೊಂದಿಗೆ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

“ಈ ಸಂಬಂಧ ಮಹಿಳೆಯ ಮನೆಯವರು ದೂರು ದಾಖಲಿಸಿದ್ದು, ದಂಪತಿಯನ್ನು ಹೈದರಾಬಾದ್‌ನಲ್ಲಿ ಪತ್ತೆ ಹಚ್ಚಿ ವಾಪಸ್ ಕರೆತರಲಾಗಿದೆ. ಇದರ ನಂತರ ಎರಡು ಕುಟುಂಬಗಳ ನಡುವೆ ರಾಜಿ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಲಾಯಿತು. ಮಹಿಳೆಯನ್ನು ಔರಿಯಾ ಗ್ರಾಮದ ತನ್ನ ತಾಯಿಯ ಚಿಕ್ಕಪ್ಪನೊಂದಿಗೆ ವಾಸಿಸಲು ಕಳುಹಿಸಲಾಯಿತು” ಎಂದು ಅವರು ತಿಳಿದಿಸಿದ್ದಾರೆ.

ಇದನ್ನೂ ಓದಿ: ಗುಂಪು ಹಲ್ಲೆ – ಯುಪಿಯಲ್ಲಿ 22 ವರ್ಷದ ಮುಸ್ಲಿಂ ಯುವಕ ಸಾವು

“ಯುವಕ ಮತ್ತು ಅವರ ಪೋಷಕರು ಔರಿಯಾಗೆ ಹೋಗಿದ್ದರು. ಅಲ್ಲಿ ಅವರನ್ನು ಮಹಿಳೆಯ ಕುಟುಂಬದ ಸದಸ್ಯರು ಗುರುತಿಸಿದ್ದಾರೆ” ಎಂದು ಕುಪುರ್ಡಾ ಪೊಲೀಸ್ ಹೊರಠಾಣೆ ಉಸ್ತುವಾರಿ ದ್ವಾರಕಾ ಪ್ರಸಾದ್ ಪಾಲ್ ಹೇಳಿದ್ದಾರೆ. ಈ ವೇಳೆ ಕುಟುಂಬ ಸದಸ್ಯರು ಅವರೊಂದಿಗೆ ತರ್ಕಿಸಲು ಪ್ರಯತ್ನಿಸಿದರು, ಅದರ ನಂತರ ಗಲಾಟೆ ನಡೆದಿದ್ದು, ಯುವಕ ಮತ್ತು ಅವನ ಹೆತ್ತವರನ್ನು ಥಳಿಸಲಾಗಿದೆ ಎಂದು ಅವರ ಹೇಳಿದ್ದಾರೆ.

ಸಂತ್ರಸ್ತ ವಾಜಿದ್ ಅವರು ತನಗೆ ಹುಡುಗಿಯೊಂದಿಗೆ ಪ್ರೇಮ ಸಂಬಂಧ ಇರುವುದು ನಿಜವಾಗಿದ್ದು, ತಾವಿಬ್ಬರೂ ಓಡಿಹೋಗಿ ನಂತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಕಳೆದ ವಾರ ನಡೆದ ಘಟನೆಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ತಮ್ಮ ಮೇಲೆ ಗುಂಪು ಹಲ್ಲೆ ನಡೆದ ಸಂದಂರ್ಭ ಅವರು ಮತ್ತು ಅವರ ಪೋಷಕರು ಆರಿ ಗ್ರಾಮದಲ್ಲಿರುವ ತಮ್ಮ ಸಹೋದರಿಯನ್ನು ಭೇಟಿ ಮಾಡಲು ಹೋಗುತ್ತಿದ್ದದ್ದಾಗಿ ಹೇಳಿದ್ದಾರೆ. ಈ ವೇಳೆ ಗ್ರಾಮಸ್ಥರು ಅವರನ್ನು ತಡೆದು ಗುಂಪು ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ: ‘ನೂರು ಜನರ ಗುಂಪು ಹಲ್ಲೆ ಮಾಡಿತು; ಜೈ ಶ್ರೀರಾಮ್‌ ಎಂದಿತು, ಊರು ಬಿಡುವಂತೆ ಸೂಚಿಸಿತು’

ಈ ಮಧ್ಯೆ ಪೊಲೀಸರು ಕುಟುಂಬದ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 294 (ಸಾರ್ವಜನಿಕವಾಗಿ ಅಶ್ಲೀಲ ಕೃತ್ಯಗಳು) 323 (ಉದ್ದೇಶಪೂರ್ವಕವಾಗಿ ನೋವುಂಟುಮಾಡುವುದು), 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...