Homeಮುಖಪುಟಮಧ್ಯಪ್ರದೇಶ: ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಮೂವರ ಬಂಧನ

ಮಧ್ಯಪ್ರದೇಶ: ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಮೂವರ ಬಂಧನ

- Advertisement -
- Advertisement -

ಭಾನುವಾರ ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಶನಿವಾರ ರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಘಟನೆಯ ವಿಡಿಯೋ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವೈರಲ್‌ ಆಗಿರುವ ವಿಡಿಯೊದಲ್ಲಿ ಇಬ್ಬರು ಹೆಣ್ಣುಮಕ್ಕಳಿಗೆ ಯುವಕರ ಗುಂಪು ಕಿರುಕುಳ ನೀಡುತ್ತಿರುವುದನ್ನು ಕಾಣಬಹುದು. ವಾಹನ ಮರೆಯಲ್ಲಿರುವ ಯುವತಿಗೆ ಕಿರುಕುಳ ನೀಡುತ್ತಿರುವುದನ್ನು ಒಂದೆಡೆಯಾದರೆ, ಮತ್ತೊಬ್ಬ ಬಾಲಕಿಯನ್ನು ನಡುಬೀದಿಯಲ್ಲಿ ಎಳೆದಾಡಿ ಕಿರುಕುಳ ನೀಡುವುದನ್ನು ಕಾಣಬಹುದು. ಜೊತೆಗೆ ಮತ್ತೊಂದು ಗುಂಪಿನ ಆರೋಪಿಗಳು ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕುರುಗಾಹಿ ಮಹಿಳೆಯ ಮೇಲಿನ ಅತ್ಯಾಚಾರ ಖಂಡಿಸಿ ಮಾರ್ಚ್ 22ರಂದು ವಿಧಾನಸೌಧ ಚಲೋ

ಭಾನುವಾರ, ಬುಡಕಟ್ಟು ಸಮುದಾಯಕ್ಕೆ ಸೇರಿರುವ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಎ) (ಹೆಣ್ಣಿನ ಘನತೆಯ ಮೇಲೆ ಹಲ್ಲೆ) ಮತ್ತು 34 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಅಲಿರಾಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್, “ವೀಡಿಯೊ ವೈರಲ್ ಆದ ನಂತರ ನಾವು ಸ್ವಯಂ ಪ್ರೇರಿತ ಕ್ರಮ ಕೈಗೊಂಡಿದ್ದೇವೆ. ಸಂತ್ರಸ್ತೆ ದೂರು ನೀಡಲು ಮುಂದೆ ಬಂದಿಲ್ಲ. ವೀಡಿಯೋ ಆಧಾರದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗಳನ್ನು ಗುರುತಿಸಿದ್ದೇವೆ. ನಾವು ಅವರಲ್ಲಿ ಮೂವರನ್ನು ಬಂಧಿಸಿದ್ದೇವೆ. ಇತರ ಐವರು ವಿಡಿಯೋ ಚಿತ್ರೀಕರಣ ಮತ್ತು ಆರೋಪಿಗಳಿಗೆ ಪ್ರಚೋದನೆ ನೀಡುತ್ತಿದ್ದವರು ತಲೆಮರೆಸಿಕೊಂಡಿದ್ದಾರೆ. ಅವರನ್ನು ಹಿಡಿಯಲು ಪೊಲೀಸ್ ತಂಡಗಳು ಪ್ರಯತ್ನಿಸುತ್ತಿವೆ” ಎಂದು ತಿಳಿಸಿದ್ದಾರೆ.

ಟ್ರೈಬಲ್‌ ಆರ್ಮಿ ಟ್ವಿಟರ್‌ ಖಾತೆಯಲ್ಲಿ ಘಟನೆಯ ಕುರಿತು ಟ್ವೀಟ್ ಮಾಡಲಾಗಿದ್ದು, “ಇದು ಭೀಕರ ದೃಶ್ಯ. ಬುಡಕಟ್ಟು ಮಹಿಳೆಯರ ಮೇಲಾಗಿರುವ ಇಂತಹ ಘಟನೆಗಳು ನಿತ್ಯವೂ ಘಟಿಸುತ್ತವೆ. ಯಾಕೆಂದರೆ ಬುಡಕಟ್ಟು ಮಹಿಳೆಯರು ಅಲಕ್ಷಿತ ಸಮುದಾಯಕ್ಕೆ ಸೇರಿರುವುದರಿಂದ ಇಂತಹ ಘಟನೆಗಳಾಗುತ್ತವೆ” ಎಂದು ಅಭಿಪ್ರಾಯ ಪಟ್ಟಿದೆ.

ಮಧ್ಯಪ್ರದೇಶದಲ್ಲಿ ಬುಡಕಟ್ಟು ಸಮುದಾಯಗಳು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಭಗೋರಿಯಾವನ್ನು ಆಯೋಜಿಸಲಾಗುತ್ತದೆ. ಇದು ಆದಿವಾಸಿಗಳ ದೊಡ್ಡ ಹಬ್ಬವೆಂದು ಪರಿಗಣಿಸಲ್ಪಟ್ಟಿದೆ. ಪ್ರತಿ ವರ್ಷ ಗಂಗಾ ಮಹಾದೇವನ ದೇವಸ್ಥಾನದಲ್ಲಿ ಜಾತ್ರೆಯನ್ನು ಆಯೋಜಿಸುವುದರೊಂದಿಗೆ ಹಬ್ಬ ಪ್ರಾರಂಭವಾಗುತ್ತದೆ. ಅಲಿರಾಜಪುರದ ವಾಲ್ಪುರ್‌ನ ಭಗೋರಿಯಾ ಹಬ್ಬ ಬಹಳ ಜನಪ್ರಿಯವಾಗಿದೆ.

ಇದನ್ನೂ ಓದಿ: ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...