Homeಮುಖಪುಟಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಗೋಶಾಲೆಯ ಮುಖ್ಯಸ್ಥರ ಮೇಲೆ ಹಸುಗಳನ್ನು ಕೊಂದು, ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ಆರೋಪ ಕೇಳಿಬಂದಿದೆ.

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಬಳಿಯ ಬೆರಾಸಿಯಾ ಪಟ್ಟಣದಲ್ಲಿ ಬಿಜೆಪಿ ನಾಯಕಿ ನಡೆಸುತ್ತಿರುವ ಗೋಶಾಲೆಯಲ್ಲಿ ಸಾವಿಗೀಡಾದ 100 ಕ್ಕೂ ಹೆಚ್ಚು ಹಸುಗಳ ಸಾವಿನ ಸಂಖ್ಯೆ ಜನರಲ್ಲಿ ಆತಂಕ ಮೂಡಿಸಿದೆ. ಆದರೂ, ಗೋವುಗಳ ವಿಷಯವಿಟ್ಟುಕೊಂಡು ರಾಜಕೀಯ ಮಾಡುವ ಬಿಜೆಪಿಯವರು ಮತ್ತು ಇಲ್ಲಿನ ಸರ್ಕಾರ ಈ ಬಗ್ಗೆ ಮೌನವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೋಪಾಲ್ ಬಳಿಯ ಬೆರಾಸಿಯಾದಲ್ಲಿ ಬಿಜೆಪಿ ನಾಯಕಿ ನಿರ್ಮಲಾ ದೇವಿ ಶಾಂಡಿಲ್ಯ ಅವರ ಗೋಶಾಲೆಯಲ್ಲಿ ಈ ಸಾವುಗಳು ಸಂಭವಿಸಿವೆ. ಭಾನುವಾರ (ಜ.30) ಗೋಶಾಲೆಯ ಬಾವಿಯಲ್ಲಿ 20 ಹಸುಗಳ ಶವ ಪತ್ತೆಯಾಗಿದ್ದವು. ಬಳಿಕ ಗೋಶಾಲೆಯ ಪಕ್ಕದ ಖಾಲಿ ಜಾಗದಲ್ಲಿ  80ಕ್ಕೂ ಹೆಚ್ಚು ಹಸುಗಳ ಶವ ಹಾಗೂ ಅಸ್ಥಿಪಂಜರಗಳು ಪತ್ತೆಯಾಗಿವೆ.

ಇಚ್ಟೊಂದು ಹಸುಗಳು ಸಾವನ್ನಪ್ಪಿರುವ ಕುರಿತು ಗೋಶಾಲೆಯ ಹೊರಗೆ ಸ್ಥಳೀಯ ನಿವಾಸಿಗಳು ಮತ್ತು ಗೋರಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಗೋಶಾಲೆಯನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗೋಶಾಲೆಯ ಬಾವಿಯಲ್ಲಿನ ಹಸುಗಳ ಮೃತದೇಹಗಳು ಮತ್ತು ಗೋಶಾಲೆ ಪಕ್ಕದ ಖಾಲಿ ಸ್ಥಳದಲ್ಲಿ ಬಿದ್ದಿರುವ ಮೃತದೇಹಗಳು, ಅಸ್ಥಿಪಂಜರಗಳ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಹಸುಗಳ ಈ ದಾರುಣ ಸ್ಥಿತಿಯನ್ನು ಕಂಡು ಜನ ಆಕ್ರೋಶಗೊಂಡು, ಗೋಶಾಲೆ ಮುಖ್ಯಸ್ಥೆ ನಿರ್ಮಲಾದೇವಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಿಜೆಪಿ ನಾಯಕಿ ನಿರ್ಮಲಾ ದೇವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಭೋಪಾಲ್ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಬೆರಸಿಯಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 269 (ನಿರ್ಲಕ್ಷ್ಯದ ಕ್ರಿಯೆಯಿಂದ ಜೀವಕ್ಕೆ ಅಪಾಯಕಾರಿ ರೋಗವನ್ನು ಹರಡುವ ಸಾಧ್ಯತೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕಿ ನಿರ್ಮಲಾ ದೇವಿ ಕಳೆದ 18 ವರ್ಷಗಳಿಂದಲೂ ಗೋಶಾಲೆ ನಡೆಸುತ್ತಿದ್ದಾರೆ.

ಹಸುಗಳ ಸಾವು ಪ್ರಕರಣದಲ್ಲಿ  ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತಿದ್ದಾರೆ.

ಮತ್ತೊಂದೆಡೆ, ಘಟನೆಯ ಗಂಭೀರತೆಯನ್ನು ಅರಿತು ಜಿಲ್ಲಾಧಿಕಾರಿ ಅವಿನಾಶ್ ಲಾವಾನಿಯಾ ಮತ್ತು ಹಲವಾರು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಜನರ ಪ್ರತಿಭಟನೆ, ಆಕ್ರೋಶದಿಂದಾಗಿ ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಹಸುಗಳ ಸಾವಿನ ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದು, ಹಸುಗಳ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಆದೇಶಿಸಿದ್ದಾರೆ. ಸಂಬಂಧಪಟ್ಟ ಗೋಶಾಲೆಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಬೆರಸಿಯಾ ಅಭಿವೃದ್ಧಿ ಬ್ಲಾಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸ್ಥಳೀಯ ನಿವಾಸಿ ಘನಶ್ಯಾಮ್ ಗುಪ್ತಾ ಅವರು ಗೋಶಾಲೆಯ ಮುಖ್ಯಸ್ಥರು ಹಸುಗಳನ್ನು ಕೊಂದು ನಂತರ ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ದಂಧೆಯನ್ನು ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ.

ಸ್ಥಳೀಯ ವಿಎಚ್‌ಪಿ ನಾಯಕ ಜನಕ್ ಸಿಂಗ್ ರಜಪೂತ್, “ಗೋಶಾಲಾ ಮತ್ತು ಅದರ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೋಶಾಲೆಯಲ್ಲಿ ಹಸುವಿನ ಚರ್ಮ ಮತ್ತು ಮೂಳೆಗಳ ವ್ಯಾಪಾರ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ತನಿಖೆ ನಡೆಸುವಂತೆ  ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

ಆದರೆ, ಗೋಶಾಲೆ ಮುಖ್ಯಸ್ಥೆ ನಿರ್ಮಲಾ ದೇವಿ ಶಾಂಡಿಲ್ಯ, ಸ್ಥಳೀಯ ನಿವಾಸಿಗಳ ಆರೋಪಗಳನ್ನು ನಿರಾಕರಿಸಿದ್ದಾರೆ. “ಜನರು ತಮ್ಮ ಅನಾರೋಗ್ಯದ ಹಸುಗಳನ್ನು ಇಲ್ಲಿ ಬಿಡುತ್ತಾರ. ನೀವು ನೋಡುತ್ತಿರುವ ಶವಗಳು ಅನಾರೋಗ್ಯದಿಂದ ಸತ್ತ ಹಸುಗಳವು. ಈ ಹಸುಗಳು ನಮ್ಮ ಗೋಶಾಲೆಗೆ ಸೇರಿದವುಗಳಲ್ಲ. ನಾನು ಇಲ್ಲಿ ಜೂಜು ಮತ್ತು ಕಳ್ಳತನವನ್ನಿ ನಿಲ್ಲಿಸಿರುವ ಕಾರಣ ಗ್ರಾಮಸ್ಥರು ನನ್ನ ಗೋಶಾಲೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಯಾವುದೇ ತನಿಖೆ, ಪ್ರಕರಣವನ್ನು ಎದುರಿಸಲು ಸಿದ್ಧ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...