Homeಮುಖಪುಟಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಗೋಶಾಲೆಯ ಮುಖ್ಯಸ್ಥರ ಮೇಲೆ ಹಸುಗಳನ್ನು ಕೊಂದು, ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ಆರೋಪ ಕೇಳಿಬಂದಿದೆ.

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಬಳಿಯ ಬೆರಾಸಿಯಾ ಪಟ್ಟಣದಲ್ಲಿ ಬಿಜೆಪಿ ನಾಯಕಿ ನಡೆಸುತ್ತಿರುವ ಗೋಶಾಲೆಯಲ್ಲಿ ಸಾವಿಗೀಡಾದ 100 ಕ್ಕೂ ಹೆಚ್ಚು ಹಸುಗಳ ಸಾವಿನ ಸಂಖ್ಯೆ ಜನರಲ್ಲಿ ಆತಂಕ ಮೂಡಿಸಿದೆ. ಆದರೂ, ಗೋವುಗಳ ವಿಷಯವಿಟ್ಟುಕೊಂಡು ರಾಜಕೀಯ ಮಾಡುವ ಬಿಜೆಪಿಯವರು ಮತ್ತು ಇಲ್ಲಿನ ಸರ್ಕಾರ ಈ ಬಗ್ಗೆ ಮೌನವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೋಪಾಲ್ ಬಳಿಯ ಬೆರಾಸಿಯಾದಲ್ಲಿ ಬಿಜೆಪಿ ನಾಯಕಿ ನಿರ್ಮಲಾ ದೇವಿ ಶಾಂಡಿಲ್ಯ ಅವರ ಗೋಶಾಲೆಯಲ್ಲಿ ಈ ಸಾವುಗಳು ಸಂಭವಿಸಿವೆ. ಭಾನುವಾರ (ಜ.30) ಗೋಶಾಲೆಯ ಬಾವಿಯಲ್ಲಿ 20 ಹಸುಗಳ ಶವ ಪತ್ತೆಯಾಗಿದ್ದವು. ಬಳಿಕ ಗೋಶಾಲೆಯ ಪಕ್ಕದ ಖಾಲಿ ಜಾಗದಲ್ಲಿ  80ಕ್ಕೂ ಹೆಚ್ಚು ಹಸುಗಳ ಶವ ಹಾಗೂ ಅಸ್ಥಿಪಂಜರಗಳು ಪತ್ತೆಯಾಗಿವೆ.

ಇಚ್ಟೊಂದು ಹಸುಗಳು ಸಾವನ್ನಪ್ಪಿರುವ ಕುರಿತು ಗೋಶಾಲೆಯ ಹೊರಗೆ ಸ್ಥಳೀಯ ನಿವಾಸಿಗಳು ಮತ್ತು ಗೋರಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಗೋಶಾಲೆಯನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗೋಶಾಲೆಯ ಬಾವಿಯಲ್ಲಿನ ಹಸುಗಳ ಮೃತದೇಹಗಳು ಮತ್ತು ಗೋಶಾಲೆ ಪಕ್ಕದ ಖಾಲಿ ಸ್ಥಳದಲ್ಲಿ ಬಿದ್ದಿರುವ ಮೃತದೇಹಗಳು, ಅಸ್ಥಿಪಂಜರಗಳ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಹಸುಗಳ ಈ ದಾರುಣ ಸ್ಥಿತಿಯನ್ನು ಕಂಡು ಜನ ಆಕ್ರೋಶಗೊಂಡು, ಗೋಶಾಲೆ ಮುಖ್ಯಸ್ಥೆ ನಿರ್ಮಲಾದೇವಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಿಜೆಪಿ ನಾಯಕಿ ನಿರ್ಮಲಾ ದೇವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಭೋಪಾಲ್ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಬೆರಸಿಯಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 269 (ನಿರ್ಲಕ್ಷ್ಯದ ಕ್ರಿಯೆಯಿಂದ ಜೀವಕ್ಕೆ ಅಪಾಯಕಾರಿ ರೋಗವನ್ನು ಹರಡುವ ಸಾಧ್ಯತೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕಿ ನಿರ್ಮಲಾ ದೇವಿ ಕಳೆದ 18 ವರ್ಷಗಳಿಂದಲೂ ಗೋಶಾಲೆ ನಡೆಸುತ್ತಿದ್ದಾರೆ.

ಹಸುಗಳ ಸಾವು ಪ್ರಕರಣದಲ್ಲಿ  ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತಿದ್ದಾರೆ.

ಮತ್ತೊಂದೆಡೆ, ಘಟನೆಯ ಗಂಭೀರತೆಯನ್ನು ಅರಿತು ಜಿಲ್ಲಾಧಿಕಾರಿ ಅವಿನಾಶ್ ಲಾವಾನಿಯಾ ಮತ್ತು ಹಲವಾರು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಜನರ ಪ್ರತಿಭಟನೆ, ಆಕ್ರೋಶದಿಂದಾಗಿ ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಹಸುಗಳ ಸಾವಿನ ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದು, ಹಸುಗಳ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಆದೇಶಿಸಿದ್ದಾರೆ. ಸಂಬಂಧಪಟ್ಟ ಗೋಶಾಲೆಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಬೆರಸಿಯಾ ಅಭಿವೃದ್ಧಿ ಬ್ಲಾಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸ್ಥಳೀಯ ನಿವಾಸಿ ಘನಶ್ಯಾಮ್ ಗುಪ್ತಾ ಅವರು ಗೋಶಾಲೆಯ ಮುಖ್ಯಸ್ಥರು ಹಸುಗಳನ್ನು ಕೊಂದು ನಂತರ ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ದಂಧೆಯನ್ನು ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ.

ಸ್ಥಳೀಯ ವಿಎಚ್‌ಪಿ ನಾಯಕ ಜನಕ್ ಸಿಂಗ್ ರಜಪೂತ್, “ಗೋಶಾಲಾ ಮತ್ತು ಅದರ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೋಶಾಲೆಯಲ್ಲಿ ಹಸುವಿನ ಚರ್ಮ ಮತ್ತು ಮೂಳೆಗಳ ವ್ಯಾಪಾರ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ತನಿಖೆ ನಡೆಸುವಂತೆ  ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

ಆದರೆ, ಗೋಶಾಲೆ ಮುಖ್ಯಸ್ಥೆ ನಿರ್ಮಲಾ ದೇವಿ ಶಾಂಡಿಲ್ಯ, ಸ್ಥಳೀಯ ನಿವಾಸಿಗಳ ಆರೋಪಗಳನ್ನು ನಿರಾಕರಿಸಿದ್ದಾರೆ. “ಜನರು ತಮ್ಮ ಅನಾರೋಗ್ಯದ ಹಸುಗಳನ್ನು ಇಲ್ಲಿ ಬಿಡುತ್ತಾರ. ನೀವು ನೋಡುತ್ತಿರುವ ಶವಗಳು ಅನಾರೋಗ್ಯದಿಂದ ಸತ್ತ ಹಸುಗಳವು. ಈ ಹಸುಗಳು ನಮ್ಮ ಗೋಶಾಲೆಗೆ ಸೇರಿದವುಗಳಲ್ಲ. ನಾನು ಇಲ್ಲಿ ಜೂಜು ಮತ್ತು ಕಳ್ಳತನವನ್ನಿ ನಿಲ್ಲಿಸಿರುವ ಕಾರಣ ಗ್ರಾಮಸ್ಥರು ನನ್ನ ಗೋಶಾಲೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಯಾವುದೇ ತನಿಖೆ, ಪ್ರಕರಣವನ್ನು ಎದುರಿಸಲು ಸಿದ್ಧ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...