Homeಮುಖಪುಟಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಗೋಶಾಲೆಯ ಮುಖ್ಯಸ್ಥರ ಮೇಲೆ ಹಸುಗಳನ್ನು ಕೊಂದು, ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ಆರೋಪ ಕೇಳಿಬಂದಿದೆ.

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಬಳಿಯ ಬೆರಾಸಿಯಾ ಪಟ್ಟಣದಲ್ಲಿ ಬಿಜೆಪಿ ನಾಯಕಿ ನಡೆಸುತ್ತಿರುವ ಗೋಶಾಲೆಯಲ್ಲಿ ಸಾವಿಗೀಡಾದ 100 ಕ್ಕೂ ಹೆಚ್ಚು ಹಸುಗಳ ಸಾವಿನ ಸಂಖ್ಯೆ ಜನರಲ್ಲಿ ಆತಂಕ ಮೂಡಿಸಿದೆ. ಆದರೂ, ಗೋವುಗಳ ವಿಷಯವಿಟ್ಟುಕೊಂಡು ರಾಜಕೀಯ ಮಾಡುವ ಬಿಜೆಪಿಯವರು ಮತ್ತು ಇಲ್ಲಿನ ಸರ್ಕಾರ ಈ ಬಗ್ಗೆ ಮೌನವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೋಪಾಲ್ ಬಳಿಯ ಬೆರಾಸಿಯಾದಲ್ಲಿ ಬಿಜೆಪಿ ನಾಯಕಿ ನಿರ್ಮಲಾ ದೇವಿ ಶಾಂಡಿಲ್ಯ ಅವರ ಗೋಶಾಲೆಯಲ್ಲಿ ಈ ಸಾವುಗಳು ಸಂಭವಿಸಿವೆ. ಭಾನುವಾರ (ಜ.30) ಗೋಶಾಲೆಯ ಬಾವಿಯಲ್ಲಿ 20 ಹಸುಗಳ ಶವ ಪತ್ತೆಯಾಗಿದ್ದವು. ಬಳಿಕ ಗೋಶಾಲೆಯ ಪಕ್ಕದ ಖಾಲಿ ಜಾಗದಲ್ಲಿ  80ಕ್ಕೂ ಹೆಚ್ಚು ಹಸುಗಳ ಶವ ಹಾಗೂ ಅಸ್ಥಿಪಂಜರಗಳು ಪತ್ತೆಯಾಗಿವೆ.

ಇಚ್ಟೊಂದು ಹಸುಗಳು ಸಾವನ್ನಪ್ಪಿರುವ ಕುರಿತು ಗೋಶಾಲೆಯ ಹೊರಗೆ ಸ್ಥಳೀಯ ನಿವಾಸಿಗಳು ಮತ್ತು ಗೋರಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಗೋಶಾಲೆಯನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗೋಶಾಲೆಯ ಬಾವಿಯಲ್ಲಿನ ಹಸುಗಳ ಮೃತದೇಹಗಳು ಮತ್ತು ಗೋಶಾಲೆ ಪಕ್ಕದ ಖಾಲಿ ಸ್ಥಳದಲ್ಲಿ ಬಿದ್ದಿರುವ ಮೃತದೇಹಗಳು, ಅಸ್ಥಿಪಂಜರಗಳ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಹಸುಗಳ ಈ ದಾರುಣ ಸ್ಥಿತಿಯನ್ನು ಕಂಡು ಜನ ಆಕ್ರೋಶಗೊಂಡು, ಗೋಶಾಲೆ ಮುಖ್ಯಸ್ಥೆ ನಿರ್ಮಲಾದೇವಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಿಜೆಪಿ ನಾಯಕಿ ನಿರ್ಮಲಾ ದೇವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಭೋಪಾಲ್ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಬೆರಸಿಯಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 269 (ನಿರ್ಲಕ್ಷ್ಯದ ಕ್ರಿಯೆಯಿಂದ ಜೀವಕ್ಕೆ ಅಪಾಯಕಾರಿ ರೋಗವನ್ನು ಹರಡುವ ಸಾಧ್ಯತೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕಿ ನಿರ್ಮಲಾ ದೇವಿ ಕಳೆದ 18 ವರ್ಷಗಳಿಂದಲೂ ಗೋಶಾಲೆ ನಡೆಸುತ್ತಿದ್ದಾರೆ.

ಹಸುಗಳ ಸಾವು ಪ್ರಕರಣದಲ್ಲಿ  ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತಿದ್ದಾರೆ.

ಮತ್ತೊಂದೆಡೆ, ಘಟನೆಯ ಗಂಭೀರತೆಯನ್ನು ಅರಿತು ಜಿಲ್ಲಾಧಿಕಾರಿ ಅವಿನಾಶ್ ಲಾವಾನಿಯಾ ಮತ್ತು ಹಲವಾರು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಜನರ ಪ್ರತಿಭಟನೆ, ಆಕ್ರೋಶದಿಂದಾಗಿ ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಹಸುಗಳ ಸಾವಿನ ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದು, ಹಸುಗಳ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಆದೇಶಿಸಿದ್ದಾರೆ. ಸಂಬಂಧಪಟ್ಟ ಗೋಶಾಲೆಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಬೆರಸಿಯಾ ಅಭಿವೃದ್ಧಿ ಬ್ಲಾಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸ್ಥಳೀಯ ನಿವಾಸಿ ಘನಶ್ಯಾಮ್ ಗುಪ್ತಾ ಅವರು ಗೋಶಾಲೆಯ ಮುಖ್ಯಸ್ಥರು ಹಸುಗಳನ್ನು ಕೊಂದು ನಂತರ ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ದಂಧೆಯನ್ನು ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ.

ಸ್ಥಳೀಯ ವಿಎಚ್‌ಪಿ ನಾಯಕ ಜನಕ್ ಸಿಂಗ್ ರಜಪೂತ್, “ಗೋಶಾಲಾ ಮತ್ತು ಅದರ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೋಶಾಲೆಯಲ್ಲಿ ಹಸುವಿನ ಚರ್ಮ ಮತ್ತು ಮೂಳೆಗಳ ವ್ಯಾಪಾರ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ತನಿಖೆ ನಡೆಸುವಂತೆ  ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

ಆದರೆ, ಗೋಶಾಲೆ ಮುಖ್ಯಸ್ಥೆ ನಿರ್ಮಲಾ ದೇವಿ ಶಾಂಡಿಲ್ಯ, ಸ್ಥಳೀಯ ನಿವಾಸಿಗಳ ಆರೋಪಗಳನ್ನು ನಿರಾಕರಿಸಿದ್ದಾರೆ. “ಜನರು ತಮ್ಮ ಅನಾರೋಗ್ಯದ ಹಸುಗಳನ್ನು ಇಲ್ಲಿ ಬಿಡುತ್ತಾರ. ನೀವು ನೋಡುತ್ತಿರುವ ಶವಗಳು ಅನಾರೋಗ್ಯದಿಂದ ಸತ್ತ ಹಸುಗಳವು. ಈ ಹಸುಗಳು ನಮ್ಮ ಗೋಶಾಲೆಗೆ ಸೇರಿದವುಗಳಲ್ಲ. ನಾನು ಇಲ್ಲಿ ಜೂಜು ಮತ್ತು ಕಳ್ಳತನವನ್ನಿ ನಿಲ್ಲಿಸಿರುವ ಕಾರಣ ಗ್ರಾಮಸ್ಥರು ನನ್ನ ಗೋಶಾಲೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಯಾವುದೇ ತನಿಖೆ, ಪ್ರಕರಣವನ್ನು ಎದುರಿಸಲು ಸಿದ್ಧ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...