Homeಮುಖಪುಟಮಧ್ಯಪ್ರದೇಶ: RSSನ ಮಾಜಿ ಸ್ವಯಂಸೇವಕರಿಂದ ಹೊಸ ಪಕ್ಷ ಘೋಷಣೆ

ಮಧ್ಯಪ್ರದೇಶ: RSSನ ಮಾಜಿ ಸ್ವಯಂಸೇವಕರಿಂದ ಹೊಸ ಪಕ್ಷ ಘೋಷಣೆ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮಾಜಿ ಸ್ವಯಂಸೇವಕರ ಗುಂಪು ಮಧ್ಯಪ್ರದೇಶದಲ್ಲಿ ವರ್ಷಾಂತ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷ ಜನಹಿತ್ ಪಾರ್ಟಿಯನ್ನು ರಚಿಸುವ ನಿರ್ಧಾರವನ್ನು ರವಿವಾರ ಪ್ರಕಟಿಸಿದೆ. ಈ ಕ್ರಮವು ಆಡಳಿತವನ್ನು ಸುಧಾರಿಸಲು ರಾಜಕೀಯ ಪಕ್ಷಗಳನ್ನು ಉತ್ತೇಜಿಸುತ್ತದೆ ಎಂದು ಹೇಳಿದೆ.

ಆರ್‌ಎಸ್‌ಎಸ್‌ನ ಮಾಜಿ ಪ್ರಚಾರಕ ಅಭಯ್ ಜೈನ್ ಅವರು ಭೋಪಾಲ್ ಬಳಿಯ ಮಿಸ್ರೋಡ್‌ನಲ್ಲಿ ತಮ್ಮ ಮಾಜಿ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, ”ಎಲ್ಲಾ ರಾಜಕೀಯ ಪಕ್ಷಗಳ ಸಂಸ್ಕೃತಿಯು ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೆ ವಿರುದ್ಧವಾಗಿರುವುದರಿಂದ ನಾವು ಜನಹಿತ್ ಪಾರ್ಟಿಯನ್ನು ರಚಿಸಿದ್ದೇವೆ. ಎಲ್ಲ ರಾಜಕೀಯ ಪಕ್ಷಗಳು ವಿಫಲವಾಗಿವೆ” ಎಂದು ತಿಳಿಸಿದರು.

”ಎಲ್ಲಾ ರಾಜಕೀಯ ಪಕ್ಷಗಳ ಸಂಸ್ಕೃತಿ ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೆ ವಿರುದ್ಧವಾಗಿರುವುದರಿಂದ ನಾವು ಜನಹಿತ್ ಪಕ್ಷವನ್ನು ರಚಿಸಿದ್ದೇವೆ. ಎಲ್ಲರೂ ವಿಫಲರಾಗಿದ್ದಾರೆ” ಎಂದು ತಿಳಿಸಿದರು.

”ತಮ್ಮ ಇನ್ನೂ ನೋಂದಣಿಯಾಗದ ಪಕ್ಷವು ಆಡಳಿತಾರೂಢ ಬಿಜೆಪಿಯ ಮತಗಳನ್ನು ಪಡೆಯುತ್ತದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ” ಎಂದು ಅವರು ಹೇಳಿದರು.

”2018ರಲ್ಲಿ ಬಿಜೆಪಿ ಸೋತಾಗ ಕಳೆದ ಸಂಸದೀಯ ಚುನಾವಣೆಯಲ್ಲಿ ನಾವು ಇರಲಿಲ್ಲ. ನಂತರ ಬಿಜೆಪಿ ಮತಗಳು ಕಾಂಗ್ರೆಸ್‌ಗೆ ಬದಲಾದವು, ಅದು ಉತ್ತಮ ಸ್ಥಿತಿಯಲ್ಲಿಲ್ಲ” ಎಂದು ಅವರು ಹೇಳಿದರು.

”ಬಿಜೆಪಿ ಸರ್ಕಾರದ ಕಾರ್ಯವೈಖರಿಯಿಂದ ಜನರು ತೃಪ್ತರಾಗಿಲ್ಲ” ಎಂದು ಜೈನ್ ಹೇಳಿದ್ದಾರೆ.

”ನಾವು ರಾಜಕೀಯ ವೇದಿಕೆಯಲ್ಲಿ ಕಾಣಿಸಿಕೊಂಡರೆ ಏನಾಗುತ್ತದೆ? ಬಿಜೆಪಿಯ ಬಗ್ಗೆ ಅಸಮಾಧಾನ ಹೊಂದಿರುವ, ಆದರೆ ಹಿಂದೂ ಮನಸ್ಥಿತಿ ಹೊಂದಿರುವವರು ನಮಗೆ ಆದ್ಯತೆ ನೀಡುತ್ತಾರೆ. ಬಿಜೆಪಿ ಐದು ಮತಗಳನ್ನು ಕಳೆದುಕೊಂಡರೆ, ರಾಜಕೀಯ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಅವುಗಳನ್ನು ಗಳಿಸುವುದಿಲ್ಲ. ನಮ್ಮ ಈ ಕ್ರಮವು ತಮ್ಮ ಆಡಳಿತವನ್ನು ಸುಧಾರಿಸಲು ರಾಜಕೀಯ ಪಕ್ಷಗಳ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ ಎಂದು ನಮಗೆ ಗೊತ್ತಿದೆ” ಎಂದು ಹೇಳಿದರು.

”ಮಧ್ಯಪ್ರದೇಶದ ಎಲ್ಲಾ 230 ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿದ್ದೀರಾ? ಎಂಬ ಪ್ರಶ್ನೆಗೆ ಜೈನ್, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಬಗ್ಗೆ ಯೋಚಿಸುತ್ತಿದ್ದೇವೆ. ನಮ್ಮ ರಾಜಕೀಯ ಗುರಿ ದೂರದೃಷ್ಟಿಯಿಂದ ಕೂಡಿದೆ” ಎಂದು ಅವರು ಹೇಳಿದರು.

ಜಾರ್ಖಂಡ್‌ನ ಐವರು ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರು ಒಳಗೊಂಡಂತೆ 200ಕ್ಕೂ ಹೆಚ್ಚು ಜನರು ಮಿಸ್ರೋಡ್‌ನಲ್ಲಿ ತಮ್ಮ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಜೈನ್ ಪಿಟಿಐಗೆ ದೂರವಾಣಿಯಲ್ಲಿ ತಿಳಿಸಿದರು.

ಸಂಘ ಪರಿವಾರದ ಸಂಘಟನೆಯಾದ ಭಾರತೀಯ ಕಿಸಾನ್ ಸಂಘದೊಂದಿಗೆ ಒಮ್ಮೆ ಸಂಬಂಧ ಹೊಂದಿದ್ದ ರವಿ ದತ್ ಸಿಂಗ್ ಅವರ ಪ್ರಕಾರ, ಅವರು ಸಭೆಯಲ್ಲಿ ಭಾಗವಹಿಸಿದ್ದರು. ಭಾಗವಹಿಸಿದವರು 2007-2008ರಲ್ಲಿ ಆರ್‌ಎಸ್‌ಎಸ್ ತೊರೆದವರು ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...