Homeಮುಖಪುಟಮಧ್ಯಪ್ರದೇಶ| 'ಬುಡಕಟ್ಟು ಜನರು ಹಿಂದೂಗಳಲ್ಲ' ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

ಮಧ್ಯಪ್ರದೇಶ| ‘ಬುಡಕಟ್ಟು ಜನರು ಹಿಂದೂಗಳಲ್ಲ’ ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

- Advertisement -
- Advertisement -

ಬುಡಕಟ್ಟು ಜನಾಂಗದವರು ಹಿಂದೂಗಳಲ್ಲ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಉಮಾಂಗ್ ಸಿಂಘರ್ ಅವರು ನೀಡಿರುವ ಹೇಳಿಕೆ ರಾಜಕೀಯ ಬಿರುಗಾಳಿ ಹುಟ್ಟುಹಾಕಿದೆ. ಅವರ ಮಾತಿಗೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಂದ ವಿರೋಧ ವ್ಯಕ್ತವಾಗಿದೆ.

ಸೆಪ್ಟೆಂಬರ್ 4 ರ ಗುರುವಾರ ಚಿಂದ್ವಾರದಲ್ಲಿ ನಡೆದ ಬುಡಕಟ್ಟು ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, “ನಾವು ಆದಿವಾಸಿಗಳು, ಹಿಂದೂಗಳಲ್ಲ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ. ನಾನು ಇದನ್ನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಉಳಿದಿದ್ದ ಆಹಾರವನ್ನು ಭಗವಾನ್ ರಾಮನಿಗೆ ತಿನ್ನಿಸಿದವರು ಶಬರಿ; ಆಕೆ ಕೂಡ ಆದಿವಾಸಿ” ಎಂದಿದ್ದರು.

ವಿವಾದದ ಬಳಿಕ ಸ್ಪಷ್ಟನೆ ನೀಡಿರುವ ಅವರು, ತಮ್ಮ ಹೇಳಿಕೆಗಳು ಯಾವುದೇ ನಂಬಿಕೆಯನ್ನು ಅವಮಾನಿಸುವ ಗುರಿಯನ್ನು ಹೊಂದಿಲ್ಲ ಎಂದಿದ್ದಾರೆ. ಬುಡಕಟ್ಟು ಸಮುದಾಯದ ಸಂಪ್ರದಾಯಗಳು ಮತ್ತು ಪರಂಪರೆಯು ಮನ್ನಣೆಗೆ ಅರ್ಹವಾಗಿದೆ ಎಂದು ಒತ್ತಿ ಹೇಳಿದರು.

“ನಾವು ಯಾವುದೇ ಧರ್ಮವನ್ನು ಅಗೌರವಿಸುವುದಿಲ್ಲ. ಆದರೆ ನಮ್ಮ ಸಮುದಾಯ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳಬೇಕು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಬುಡಕಟ್ಟು ಜನಾಂಗದವರು ಗೌರವಕ್ಕೆ ಅರ್ಹರು” ಎಂದು ಮಧ್ಯಪ್ರದೇಶದ ಅತಿದೊಡ್ಡ ಬುಡಕಟ್ಟು ಗುಂಪಾದ ಭಿಲ್ ಸಮುದಾಯದ ನಾಲ್ಕು ಬಾರಿ ಶಾಸಕರಾಗಿರುವ ಅವರು ಹೇಳಿದರು.

ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾಂಗ್ರೆಸ್ ಹಿಂದೂ ವಿರೋಧಿ ವಾಕ್ಚಾತುರ್ಯದಲ್ಲಿ ತೊಡಗಿದೆ ಎಂದು ಆರೋಪಿಸಿ ಪ್ರತಿಕ್ರಿಯಿಸಿದರು.

ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಾಂಗ್ರೆಸ್ ಯಾವಾಗಲೂ ಹಿಂದೂಗಳು ಮತ್ತು ಹಿಂದುತ್ವದ ವಿರುದ್ಧ ಕೆಲಸ ಮಾಡುವುದು ದುರದೃಷ್ಟಕರ; ಇದಕ್ಕಾಗಿ ಅವರು ನಾಚಿಕೆಪಡಬೇಕು. ಹಿಂದುತ್ವವನ್ನು ಪ್ರಶ್ನಿಸುವ ನಾಯಕರನ್ನು ಜನರು ಕ್ಷಮಿಸುವುದಿಲ್ಲ, ಕಾಂಗ್ರೆಸ್ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಟೀಕೆಗಳನ್ನು ಎದುರಿಸುತ್ತಿರುವ ಸಿಂಘರ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬುಡಕಟ್ಟು ಗುರುತನ್ನು ಹಿಂದೂ ಧರ್ಮದ ಅಡಿಯಲ್ಲಿ ಮುಳುಗಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. “ಬುಡಕಟ್ಟು ಜನರು ಈ ದೇಶದ ಮೂಲ ನಿವಾಸಿಗಳು. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮನ್ನು ಪ್ರಕೃತಿಯನ್ನು ಪೂಜಿಸುವುದನ್ನು ತಡೆಯಲು ಏಕೆ ಬಯಸುತ್ತವೆ? ನಾನು ಹಿಂದೂ ಧರ್ಮವನ್ನು ಗೌರವಿಸುತ್ತೇನೆ, ಆದರೆ ಬುಡಕಟ್ಟು ಜನಾಂಗದ ವಿಷಯಕ್ಕೆ ಬಂದಾಗ, ಅವರು ತಮ್ಮ ಕಾರ್ಯಸೂಚಿಯನ್ನು ಹೇರಲು ಬಯಸುತ್ತಾರೆ” ಎಂದು ಅವರು ಆರೋಪಿಸಿದರು.

ಬುಡಕಟ್ಟು ಸಬಲೀಕರಣಕ್ಕೆ ಆಡಳಿತ ಪಕ್ಷದ ಬದ್ಧತೆಯನ್ನು ಮತ್ತಷ್ಟು ಪ್ರಶ್ನಿಸಿದ ಅವರು, “ಯಾವುದೇ ಬುಡಕಟ್ಟು ಜನಾಂಗದವರನ್ನು ಆರ್‌ಎಸ್‌ಎಸ್ ಮುಖ್ಯಸ್ಥರನ್ನಾಗಿ ಏಕೆ ಮಾಡಿಲ್ಲ? ಬಿಜೆಪಿ ನಮ್ಮ ಮತಗಳನ್ನು ಬಯಸುತ್ತದೆ. ಆದರೆ ನಮ್ಮ ಧರ್ಮ, ಸಂಸ್ಕೃತಿ ಮತ್ತು ಗುರುತಿನ ವಿಷಯಕ್ಕೆ ಬಂದಾಗ, ಅವರು ಅದನ್ನು ಅಳಿಸಲು ಬಯಸುತ್ತಾರೆ” ಎಂದರು.

ಮಧ್ಯಪ್ರದೇಶ ರಾಜಕೀಯದಲ್ಲಿ ಪ್ರಭಾವಿ ಭಿಲ್ ನಾಯಕರಾದ ಸಿಂಗರ್, ಮಧ್ಯಪ್ರದೇಶದ ಒಟ್ಟು ಬುಡಕಟ್ಟು ಜನಸಂಖ್ಯೆಯ ಶೇಕಡಾ 39 ರಷ್ಟಿರುವ ಸಮುದಾಯದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತಾರೆ. 2011 ರ ಜನಗಣತಿಯ ಪ್ರಕಾರ ರಾಜ್ಯದ ಜನಸಂಖ್ಯೆಯ ಶೇಕಡಾ 21 ಕ್ಕಿಂತ ಹೆಚ್ಚು, ಅಂದರೆ 1.53 ಕೋಟಿ ಬುಡಕಟ್ಟು ಜನಾಂಗದವರೊಂದಿಗೆ, ರಾಜ್ಯವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿದೆ.

ಅದರ 230 ವಿಧಾನಸಭಾ ಸ್ಥಾನಗಳಲ್ಲಿ 47 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ, ಇದು ಬುಡಕಟ್ಟು ಗುರುತಿನ ರಾಜಕೀಯವನ್ನು ಚುನಾವಣೆಗೆ ಮುನ್ನ ಪ್ರಮುಖ ಯುದ್ಧಭೂಮಿಯನ್ನಾಗಿ ಮಾಡುತ್ತದೆ.

ದಲಿತ ಕುಟುಂಬ ಇಸ್ಲಾಂಗೆ ಮತಾಂತರ ಆರೋಪ; ಉದ್ವಿಗ್ನತೆಗೆ ಕಾರಣವಾದ ಹಿಂದುತ್ವ ಸಂಘಟನೆಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...