Homeಮುಖಪುಟಮಧ್ಯಪ್ರದೇಶ| 'ಬುಡಕಟ್ಟು ಜನರು ಹಿಂದೂಗಳಲ್ಲ' ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

ಮಧ್ಯಪ್ರದೇಶ| ‘ಬುಡಕಟ್ಟು ಜನರು ಹಿಂದೂಗಳಲ್ಲ’ ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

- Advertisement -
- Advertisement -

ಬುಡಕಟ್ಟು ಜನಾಂಗದವರು ಹಿಂದೂಗಳಲ್ಲ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಉಮಾಂಗ್ ಸಿಂಘರ್ ಅವರು ನೀಡಿರುವ ಹೇಳಿಕೆ ರಾಜಕೀಯ ಬಿರುಗಾಳಿ ಹುಟ್ಟುಹಾಕಿದೆ. ಅವರ ಮಾತಿಗೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಂದ ವಿರೋಧ ವ್ಯಕ್ತವಾಗಿದೆ.

ಸೆಪ್ಟೆಂಬರ್ 4 ರ ಗುರುವಾರ ಚಿಂದ್ವಾರದಲ್ಲಿ ನಡೆದ ಬುಡಕಟ್ಟು ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, “ನಾವು ಆದಿವಾಸಿಗಳು, ಹಿಂದೂಗಳಲ್ಲ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ. ನಾನು ಇದನ್ನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಉಳಿದಿದ್ದ ಆಹಾರವನ್ನು ಭಗವಾನ್ ರಾಮನಿಗೆ ತಿನ್ನಿಸಿದವರು ಶಬರಿ; ಆಕೆ ಕೂಡ ಆದಿವಾಸಿ” ಎಂದಿದ್ದರು.

ವಿವಾದದ ಬಳಿಕ ಸ್ಪಷ್ಟನೆ ನೀಡಿರುವ ಅವರು, ತಮ್ಮ ಹೇಳಿಕೆಗಳು ಯಾವುದೇ ನಂಬಿಕೆಯನ್ನು ಅವಮಾನಿಸುವ ಗುರಿಯನ್ನು ಹೊಂದಿಲ್ಲ ಎಂದಿದ್ದಾರೆ. ಬುಡಕಟ್ಟು ಸಮುದಾಯದ ಸಂಪ್ರದಾಯಗಳು ಮತ್ತು ಪರಂಪರೆಯು ಮನ್ನಣೆಗೆ ಅರ್ಹವಾಗಿದೆ ಎಂದು ಒತ್ತಿ ಹೇಳಿದರು.

“ನಾವು ಯಾವುದೇ ಧರ್ಮವನ್ನು ಅಗೌರವಿಸುವುದಿಲ್ಲ. ಆದರೆ ನಮ್ಮ ಸಮುದಾಯ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳಬೇಕು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಬುಡಕಟ್ಟು ಜನಾಂಗದವರು ಗೌರವಕ್ಕೆ ಅರ್ಹರು” ಎಂದು ಮಧ್ಯಪ್ರದೇಶದ ಅತಿದೊಡ್ಡ ಬುಡಕಟ್ಟು ಗುಂಪಾದ ಭಿಲ್ ಸಮುದಾಯದ ನಾಲ್ಕು ಬಾರಿ ಶಾಸಕರಾಗಿರುವ ಅವರು ಹೇಳಿದರು.

ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾಂಗ್ರೆಸ್ ಹಿಂದೂ ವಿರೋಧಿ ವಾಕ್ಚಾತುರ್ಯದಲ್ಲಿ ತೊಡಗಿದೆ ಎಂದು ಆರೋಪಿಸಿ ಪ್ರತಿಕ್ರಿಯಿಸಿದರು.

ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಾಂಗ್ರೆಸ್ ಯಾವಾಗಲೂ ಹಿಂದೂಗಳು ಮತ್ತು ಹಿಂದುತ್ವದ ವಿರುದ್ಧ ಕೆಲಸ ಮಾಡುವುದು ದುರದೃಷ್ಟಕರ; ಇದಕ್ಕಾಗಿ ಅವರು ನಾಚಿಕೆಪಡಬೇಕು. ಹಿಂದುತ್ವವನ್ನು ಪ್ರಶ್ನಿಸುವ ನಾಯಕರನ್ನು ಜನರು ಕ್ಷಮಿಸುವುದಿಲ್ಲ, ಕಾಂಗ್ರೆಸ್ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಟೀಕೆಗಳನ್ನು ಎದುರಿಸುತ್ತಿರುವ ಸಿಂಘರ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬುಡಕಟ್ಟು ಗುರುತನ್ನು ಹಿಂದೂ ಧರ್ಮದ ಅಡಿಯಲ್ಲಿ ಮುಳುಗಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. “ಬುಡಕಟ್ಟು ಜನರು ಈ ದೇಶದ ಮೂಲ ನಿವಾಸಿಗಳು. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮನ್ನು ಪ್ರಕೃತಿಯನ್ನು ಪೂಜಿಸುವುದನ್ನು ತಡೆಯಲು ಏಕೆ ಬಯಸುತ್ತವೆ? ನಾನು ಹಿಂದೂ ಧರ್ಮವನ್ನು ಗೌರವಿಸುತ್ತೇನೆ, ಆದರೆ ಬುಡಕಟ್ಟು ಜನಾಂಗದ ವಿಷಯಕ್ಕೆ ಬಂದಾಗ, ಅವರು ತಮ್ಮ ಕಾರ್ಯಸೂಚಿಯನ್ನು ಹೇರಲು ಬಯಸುತ್ತಾರೆ” ಎಂದು ಅವರು ಆರೋಪಿಸಿದರು.

ಬುಡಕಟ್ಟು ಸಬಲೀಕರಣಕ್ಕೆ ಆಡಳಿತ ಪಕ್ಷದ ಬದ್ಧತೆಯನ್ನು ಮತ್ತಷ್ಟು ಪ್ರಶ್ನಿಸಿದ ಅವರು, “ಯಾವುದೇ ಬುಡಕಟ್ಟು ಜನಾಂಗದವರನ್ನು ಆರ್‌ಎಸ್‌ಎಸ್ ಮುಖ್ಯಸ್ಥರನ್ನಾಗಿ ಏಕೆ ಮಾಡಿಲ್ಲ? ಬಿಜೆಪಿ ನಮ್ಮ ಮತಗಳನ್ನು ಬಯಸುತ್ತದೆ. ಆದರೆ ನಮ್ಮ ಧರ್ಮ, ಸಂಸ್ಕೃತಿ ಮತ್ತು ಗುರುತಿನ ವಿಷಯಕ್ಕೆ ಬಂದಾಗ, ಅವರು ಅದನ್ನು ಅಳಿಸಲು ಬಯಸುತ್ತಾರೆ” ಎಂದರು.

ಮಧ್ಯಪ್ರದೇಶ ರಾಜಕೀಯದಲ್ಲಿ ಪ್ರಭಾವಿ ಭಿಲ್ ನಾಯಕರಾದ ಸಿಂಗರ್, ಮಧ್ಯಪ್ರದೇಶದ ಒಟ್ಟು ಬುಡಕಟ್ಟು ಜನಸಂಖ್ಯೆಯ ಶೇಕಡಾ 39 ರಷ್ಟಿರುವ ಸಮುದಾಯದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತಾರೆ. 2011 ರ ಜನಗಣತಿಯ ಪ್ರಕಾರ ರಾಜ್ಯದ ಜನಸಂಖ್ಯೆಯ ಶೇಕಡಾ 21 ಕ್ಕಿಂತ ಹೆಚ್ಚು, ಅಂದರೆ 1.53 ಕೋಟಿ ಬುಡಕಟ್ಟು ಜನಾಂಗದವರೊಂದಿಗೆ, ರಾಜ್ಯವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿದೆ.

ಅದರ 230 ವಿಧಾನಸಭಾ ಸ್ಥಾನಗಳಲ್ಲಿ 47 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ, ಇದು ಬುಡಕಟ್ಟು ಗುರುತಿನ ರಾಜಕೀಯವನ್ನು ಚುನಾವಣೆಗೆ ಮುನ್ನ ಪ್ರಮುಖ ಯುದ್ಧಭೂಮಿಯನ್ನಾಗಿ ಮಾಡುತ್ತದೆ.

ದಲಿತ ಕುಟುಂಬ ಇಸ್ಲಾಂಗೆ ಮತಾಂತರ ಆರೋಪ; ಉದ್ವಿಗ್ನತೆಗೆ ಕಾರಣವಾದ ಹಿಂದುತ್ವ ಸಂಘಟನೆಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...