Homeಮುಖಪುಟಮಧ್ಯಪ್ರದೇಶ| 'ಬುಡಕಟ್ಟು ಜನರು ಹಿಂದೂಗಳಲ್ಲ' ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

ಮಧ್ಯಪ್ರದೇಶ| ‘ಬುಡಕಟ್ಟು ಜನರು ಹಿಂದೂಗಳಲ್ಲ’ ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

- Advertisement -
- Advertisement -

ಬುಡಕಟ್ಟು ಜನಾಂಗದವರು ಹಿಂದೂಗಳಲ್ಲ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಉಮಾಂಗ್ ಸಿಂಘರ್ ಅವರು ನೀಡಿರುವ ಹೇಳಿಕೆ ರಾಜಕೀಯ ಬಿರುಗಾಳಿ ಹುಟ್ಟುಹಾಕಿದೆ. ಅವರ ಮಾತಿಗೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಂದ ವಿರೋಧ ವ್ಯಕ್ತವಾಗಿದೆ.

ಸೆಪ್ಟೆಂಬರ್ 4 ರ ಗುರುವಾರ ಚಿಂದ್ವಾರದಲ್ಲಿ ನಡೆದ ಬುಡಕಟ್ಟು ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, “ನಾವು ಆದಿವಾಸಿಗಳು, ಹಿಂದೂಗಳಲ್ಲ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ. ನಾನು ಇದನ್ನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಉಳಿದಿದ್ದ ಆಹಾರವನ್ನು ಭಗವಾನ್ ರಾಮನಿಗೆ ತಿನ್ನಿಸಿದವರು ಶಬರಿ; ಆಕೆ ಕೂಡ ಆದಿವಾಸಿ” ಎಂದಿದ್ದರು.

ವಿವಾದದ ಬಳಿಕ ಸ್ಪಷ್ಟನೆ ನೀಡಿರುವ ಅವರು, ತಮ್ಮ ಹೇಳಿಕೆಗಳು ಯಾವುದೇ ನಂಬಿಕೆಯನ್ನು ಅವಮಾನಿಸುವ ಗುರಿಯನ್ನು ಹೊಂದಿಲ್ಲ ಎಂದಿದ್ದಾರೆ. ಬುಡಕಟ್ಟು ಸಮುದಾಯದ ಸಂಪ್ರದಾಯಗಳು ಮತ್ತು ಪರಂಪರೆಯು ಮನ್ನಣೆಗೆ ಅರ್ಹವಾಗಿದೆ ಎಂದು ಒತ್ತಿ ಹೇಳಿದರು.

“ನಾವು ಯಾವುದೇ ಧರ್ಮವನ್ನು ಅಗೌರವಿಸುವುದಿಲ್ಲ. ಆದರೆ ನಮ್ಮ ಸಮುದಾಯ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳಬೇಕು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಬುಡಕಟ್ಟು ಜನಾಂಗದವರು ಗೌರವಕ್ಕೆ ಅರ್ಹರು” ಎಂದು ಮಧ್ಯಪ್ರದೇಶದ ಅತಿದೊಡ್ಡ ಬುಡಕಟ್ಟು ಗುಂಪಾದ ಭಿಲ್ ಸಮುದಾಯದ ನಾಲ್ಕು ಬಾರಿ ಶಾಸಕರಾಗಿರುವ ಅವರು ಹೇಳಿದರು.

ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾಂಗ್ರೆಸ್ ಹಿಂದೂ ವಿರೋಧಿ ವಾಕ್ಚಾತುರ್ಯದಲ್ಲಿ ತೊಡಗಿದೆ ಎಂದು ಆರೋಪಿಸಿ ಪ್ರತಿಕ್ರಿಯಿಸಿದರು.

ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಾಂಗ್ರೆಸ್ ಯಾವಾಗಲೂ ಹಿಂದೂಗಳು ಮತ್ತು ಹಿಂದುತ್ವದ ವಿರುದ್ಧ ಕೆಲಸ ಮಾಡುವುದು ದುರದೃಷ್ಟಕರ; ಇದಕ್ಕಾಗಿ ಅವರು ನಾಚಿಕೆಪಡಬೇಕು. ಹಿಂದುತ್ವವನ್ನು ಪ್ರಶ್ನಿಸುವ ನಾಯಕರನ್ನು ಜನರು ಕ್ಷಮಿಸುವುದಿಲ್ಲ, ಕಾಂಗ್ರೆಸ್ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಟೀಕೆಗಳನ್ನು ಎದುರಿಸುತ್ತಿರುವ ಸಿಂಘರ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬುಡಕಟ್ಟು ಗುರುತನ್ನು ಹಿಂದೂ ಧರ್ಮದ ಅಡಿಯಲ್ಲಿ ಮುಳುಗಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. “ಬುಡಕಟ್ಟು ಜನರು ಈ ದೇಶದ ಮೂಲ ನಿವಾಸಿಗಳು. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮನ್ನು ಪ್ರಕೃತಿಯನ್ನು ಪೂಜಿಸುವುದನ್ನು ತಡೆಯಲು ಏಕೆ ಬಯಸುತ್ತವೆ? ನಾನು ಹಿಂದೂ ಧರ್ಮವನ್ನು ಗೌರವಿಸುತ್ತೇನೆ, ಆದರೆ ಬುಡಕಟ್ಟು ಜನಾಂಗದ ವಿಷಯಕ್ಕೆ ಬಂದಾಗ, ಅವರು ತಮ್ಮ ಕಾರ್ಯಸೂಚಿಯನ್ನು ಹೇರಲು ಬಯಸುತ್ತಾರೆ” ಎಂದು ಅವರು ಆರೋಪಿಸಿದರು.

ಬುಡಕಟ್ಟು ಸಬಲೀಕರಣಕ್ಕೆ ಆಡಳಿತ ಪಕ್ಷದ ಬದ್ಧತೆಯನ್ನು ಮತ್ತಷ್ಟು ಪ್ರಶ್ನಿಸಿದ ಅವರು, “ಯಾವುದೇ ಬುಡಕಟ್ಟು ಜನಾಂಗದವರನ್ನು ಆರ್‌ಎಸ್‌ಎಸ್ ಮುಖ್ಯಸ್ಥರನ್ನಾಗಿ ಏಕೆ ಮಾಡಿಲ್ಲ? ಬಿಜೆಪಿ ನಮ್ಮ ಮತಗಳನ್ನು ಬಯಸುತ್ತದೆ. ಆದರೆ ನಮ್ಮ ಧರ್ಮ, ಸಂಸ್ಕೃತಿ ಮತ್ತು ಗುರುತಿನ ವಿಷಯಕ್ಕೆ ಬಂದಾಗ, ಅವರು ಅದನ್ನು ಅಳಿಸಲು ಬಯಸುತ್ತಾರೆ” ಎಂದರು.

ಮಧ್ಯಪ್ರದೇಶ ರಾಜಕೀಯದಲ್ಲಿ ಪ್ರಭಾವಿ ಭಿಲ್ ನಾಯಕರಾದ ಸಿಂಗರ್, ಮಧ್ಯಪ್ರದೇಶದ ಒಟ್ಟು ಬುಡಕಟ್ಟು ಜನಸಂಖ್ಯೆಯ ಶೇಕಡಾ 39 ರಷ್ಟಿರುವ ಸಮುದಾಯದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತಾರೆ. 2011 ರ ಜನಗಣತಿಯ ಪ್ರಕಾರ ರಾಜ್ಯದ ಜನಸಂಖ್ಯೆಯ ಶೇಕಡಾ 21 ಕ್ಕಿಂತ ಹೆಚ್ಚು, ಅಂದರೆ 1.53 ಕೋಟಿ ಬುಡಕಟ್ಟು ಜನಾಂಗದವರೊಂದಿಗೆ, ರಾಜ್ಯವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿದೆ.

ಅದರ 230 ವಿಧಾನಸಭಾ ಸ್ಥಾನಗಳಲ್ಲಿ 47 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ, ಇದು ಬುಡಕಟ್ಟು ಗುರುತಿನ ರಾಜಕೀಯವನ್ನು ಚುನಾವಣೆಗೆ ಮುನ್ನ ಪ್ರಮುಖ ಯುದ್ಧಭೂಮಿಯನ್ನಾಗಿ ಮಾಡುತ್ತದೆ.

ದಲಿತ ಕುಟುಂಬ ಇಸ್ಲಾಂಗೆ ಮತಾಂತರ ಆರೋಪ; ಉದ್ವಿಗ್ನತೆಗೆ ಕಾರಣವಾದ ಹಿಂದುತ್ವ ಸಂಘಟನೆಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...