Homeಮುಖಪುಟಮಧ್ಯಪ್ರದೇಶ| 'ಬುಡಕಟ್ಟು ಜನರು ಹಿಂದೂಗಳಲ್ಲ' ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

ಮಧ್ಯಪ್ರದೇಶ| ‘ಬುಡಕಟ್ಟು ಜನರು ಹಿಂದೂಗಳಲ್ಲ’ ಎಂದ ವಿಪಕ್ಷ ನಾಯಕ; ಟೀಕಿಸಿದ ಬಿಜೆಪಿ

- Advertisement -
- Advertisement -

ಬುಡಕಟ್ಟು ಜನಾಂಗದವರು ಹಿಂದೂಗಳಲ್ಲ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಉಮಾಂಗ್ ಸಿಂಘರ್ ಅವರು ನೀಡಿರುವ ಹೇಳಿಕೆ ರಾಜಕೀಯ ಬಿರುಗಾಳಿ ಹುಟ್ಟುಹಾಕಿದೆ. ಅವರ ಮಾತಿಗೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಂದ ವಿರೋಧ ವ್ಯಕ್ತವಾಗಿದೆ.

ಸೆಪ್ಟೆಂಬರ್ 4 ರ ಗುರುವಾರ ಚಿಂದ್ವಾರದಲ್ಲಿ ನಡೆದ ಬುಡಕಟ್ಟು ಅಭಿವೃದ್ಧಿ ಮಂಡಳಿಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, “ನಾವು ಆದಿವಾಸಿಗಳು, ಹಿಂದೂಗಳಲ್ಲ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ. ನಾನು ಇದನ್ನು ಹಲವು ವರ್ಷಗಳಿಂದ ಹೇಳುತ್ತಿದ್ದೇನೆ. ಉಳಿದಿದ್ದ ಆಹಾರವನ್ನು ಭಗವಾನ್ ರಾಮನಿಗೆ ತಿನ್ನಿಸಿದವರು ಶಬರಿ; ಆಕೆ ಕೂಡ ಆದಿವಾಸಿ” ಎಂದಿದ್ದರು.

ವಿವಾದದ ಬಳಿಕ ಸ್ಪಷ್ಟನೆ ನೀಡಿರುವ ಅವರು, ತಮ್ಮ ಹೇಳಿಕೆಗಳು ಯಾವುದೇ ನಂಬಿಕೆಯನ್ನು ಅವಮಾನಿಸುವ ಗುರಿಯನ್ನು ಹೊಂದಿಲ್ಲ ಎಂದಿದ್ದಾರೆ. ಬುಡಕಟ್ಟು ಸಮುದಾಯದ ಸಂಪ್ರದಾಯಗಳು ಮತ್ತು ಪರಂಪರೆಯು ಮನ್ನಣೆಗೆ ಅರ್ಹವಾಗಿದೆ ಎಂದು ಒತ್ತಿ ಹೇಳಿದರು.

“ನಾವು ಯಾವುದೇ ಧರ್ಮವನ್ನು ಅಗೌರವಿಸುವುದಿಲ್ಲ. ಆದರೆ ನಮ್ಮ ಸಮುದಾಯ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆಯನ್ನು ಒಪ್ಪಿಕೊಳ್ಳಬೇಕು. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಬುಡಕಟ್ಟು ಜನಾಂಗದವರು ಗೌರವಕ್ಕೆ ಅರ್ಹರು” ಎಂದು ಮಧ್ಯಪ್ರದೇಶದ ಅತಿದೊಡ್ಡ ಬುಡಕಟ್ಟು ಗುಂಪಾದ ಭಿಲ್ ಸಮುದಾಯದ ನಾಲ್ಕು ಬಾರಿ ಶಾಸಕರಾಗಿರುವ ಅವರು ಹೇಳಿದರು.

ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾಂಗ್ರೆಸ್ ಹಿಂದೂ ವಿರೋಧಿ ವಾಕ್ಚಾತುರ್ಯದಲ್ಲಿ ತೊಡಗಿದೆ ಎಂದು ಆರೋಪಿಸಿ ಪ್ರತಿಕ್ರಿಯಿಸಿದರು.

ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕಾಂಗ್ರೆಸ್ ಯಾವಾಗಲೂ ಹಿಂದೂಗಳು ಮತ್ತು ಹಿಂದುತ್ವದ ವಿರುದ್ಧ ಕೆಲಸ ಮಾಡುವುದು ದುರದೃಷ್ಟಕರ; ಇದಕ್ಕಾಗಿ ಅವರು ನಾಚಿಕೆಪಡಬೇಕು. ಹಿಂದುತ್ವವನ್ನು ಪ್ರಶ್ನಿಸುವ ನಾಯಕರನ್ನು ಜನರು ಕ್ಷಮಿಸುವುದಿಲ್ಲ, ಕಾಂಗ್ರೆಸ್ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಟೀಕೆಗಳನ್ನು ಎದುರಿಸುತ್ತಿರುವ ಸಿಂಘರ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬುಡಕಟ್ಟು ಗುರುತನ್ನು ಹಿಂದೂ ಧರ್ಮದ ಅಡಿಯಲ್ಲಿ ಮುಳುಗಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು. “ಬುಡಕಟ್ಟು ಜನರು ಈ ದೇಶದ ಮೂಲ ನಿವಾಸಿಗಳು. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮನ್ನು ಪ್ರಕೃತಿಯನ್ನು ಪೂಜಿಸುವುದನ್ನು ತಡೆಯಲು ಏಕೆ ಬಯಸುತ್ತವೆ? ನಾನು ಹಿಂದೂ ಧರ್ಮವನ್ನು ಗೌರವಿಸುತ್ತೇನೆ, ಆದರೆ ಬುಡಕಟ್ಟು ಜನಾಂಗದ ವಿಷಯಕ್ಕೆ ಬಂದಾಗ, ಅವರು ತಮ್ಮ ಕಾರ್ಯಸೂಚಿಯನ್ನು ಹೇರಲು ಬಯಸುತ್ತಾರೆ” ಎಂದು ಅವರು ಆರೋಪಿಸಿದರು.

ಬುಡಕಟ್ಟು ಸಬಲೀಕರಣಕ್ಕೆ ಆಡಳಿತ ಪಕ್ಷದ ಬದ್ಧತೆಯನ್ನು ಮತ್ತಷ್ಟು ಪ್ರಶ್ನಿಸಿದ ಅವರು, “ಯಾವುದೇ ಬುಡಕಟ್ಟು ಜನಾಂಗದವರನ್ನು ಆರ್‌ಎಸ್‌ಎಸ್ ಮುಖ್ಯಸ್ಥರನ್ನಾಗಿ ಏಕೆ ಮಾಡಿಲ್ಲ? ಬಿಜೆಪಿ ನಮ್ಮ ಮತಗಳನ್ನು ಬಯಸುತ್ತದೆ. ಆದರೆ ನಮ್ಮ ಧರ್ಮ, ಸಂಸ್ಕೃತಿ ಮತ್ತು ಗುರುತಿನ ವಿಷಯಕ್ಕೆ ಬಂದಾಗ, ಅವರು ಅದನ್ನು ಅಳಿಸಲು ಬಯಸುತ್ತಾರೆ” ಎಂದರು.

ಮಧ್ಯಪ್ರದೇಶ ರಾಜಕೀಯದಲ್ಲಿ ಪ್ರಭಾವಿ ಭಿಲ್ ನಾಯಕರಾದ ಸಿಂಗರ್, ಮಧ್ಯಪ್ರದೇಶದ ಒಟ್ಟು ಬುಡಕಟ್ಟು ಜನಸಂಖ್ಯೆಯ ಶೇಕಡಾ 39 ರಷ್ಟಿರುವ ಸಮುದಾಯದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತಾರೆ. 2011 ರ ಜನಗಣತಿಯ ಪ್ರಕಾರ ರಾಜ್ಯದ ಜನಸಂಖ್ಯೆಯ ಶೇಕಡಾ 21 ಕ್ಕಿಂತ ಹೆಚ್ಚು, ಅಂದರೆ 1.53 ಕೋಟಿ ಬುಡಕಟ್ಟು ಜನಾಂಗದವರೊಂದಿಗೆ, ರಾಜ್ಯವು ಭಾರತದಲ್ಲಿ ಅತಿ ಹೆಚ್ಚು ಬುಡಕಟ್ಟು ಜನಸಂಖ್ಯೆಯನ್ನು ಹೊಂದಿದೆ.

ಅದರ 230 ವಿಧಾನಸಭಾ ಸ್ಥಾನಗಳಲ್ಲಿ 47 ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿವೆ, ಇದು ಬುಡಕಟ್ಟು ಗುರುತಿನ ರಾಜಕೀಯವನ್ನು ಚುನಾವಣೆಗೆ ಮುನ್ನ ಪ್ರಮುಖ ಯುದ್ಧಭೂಮಿಯನ್ನಾಗಿ ಮಾಡುತ್ತದೆ.

ದಲಿತ ಕುಟುಂಬ ಇಸ್ಲಾಂಗೆ ಮತಾಂತರ ಆರೋಪ; ಉದ್ವಿಗ್ನತೆಗೆ ಕಾರಣವಾದ ಹಿಂದುತ್ವ ಸಂಘಟನೆಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...