Homeಮುಖಪುಟಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

- Advertisement -
- Advertisement -

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್ ಹೈಕೋರ್ಟ್‌ ಸರ್ಕಾರಕ್ಕೆ ಕಠಿಣ ಛೀಮಾರಿ ಹಾಕಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣವು ಆಗಸ್ಟ್ 29, 2025 ರಂದು ಜೋಧ್‌ಪುರ ನಿವಾಸಿ ಸೋಹನ್‌ಲಾಲ್ ವಿರುದ್ಧ 2.7 ಕೆಜಿ ಅಫೀಮು ಹೊಂದಿದ್ದ ಆರೋಪದ ಮೇಲೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.

ಮಲ್ಹರ್‌ಗಢ ಪೊಲೀಸರು ಸಂಜೆ 5 ಗಂಟೆಗೆ ಆತನ ಬಂಧನ ಮಾಡಿದರು. ಸ್ಥಳೀಯ ಸ್ಮಶಾನದ ಎದುರಿಗಿನ ಮೈದಾನದ ಬಳಿ ಆತನನ್ನು ಬಂಧಿಸಿದ್ದೇವೆ ಎಂದು ಹೇಳಿಕೊಂಡರು. ಆದರೆ, ಸೋಹನ್‌ಲಾಲ್ ಅವರ ಕುಟುಂಬವು ಬಸ್‌ನಿಂದ ಯುವಕ ಇಳಿದ ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರದರ್ಶಿಸಿತು. ಪೊಲೀಸ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಸಮಯಕ್ಕಿಂತ ಐದು ಗಂಟೆಗಳ ಮೊದಲು ಬೆಳಿಗ್ಗೆ 11.39 ಕ್ಕೆ ಸಾಮಾನ್ಯ ಉಡುಪಿನಲ್ಲಿರುವ ವ್ಯಕ್ತಿಗಳು ಆತನನ್ನು ಬಲವಂತವಾಗಿ ಕರೆದುಕೊಂಡು ಹೋಗುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ದೃಶ್ಯಗಳಲ್ಲಿ ತೋರಿಸಲಾದ ಸ್ಥಳವು ಪೊಲೀಸರು ಉಲ್ಲೇಖಿಸಿದ ಸ್ಥಳದಿಂದ ಸುಮಾರು 35 ಕಿ.ಮೀ ದೂರದಲ್ಲಿದೆ.

ಹೈಕೋರ್ಟ್‌ಗೆ ಸಲ್ಲಿಸಿದ ದೃಶ್ಯಗಳಲ್ಲಿ, ಮಲ್ಹರ್‌ಗಢ ಪೊಲೀಸ್ ಕಾನ್‌ಸ್ಟೆಬಲ್‌ಗಳು ಎಂದು ಗುರುತಿಸಲಾದ ಗುಂಪು ಸೋಹನ್‌ಲಾಲ್ ಅವರನ್ನು ಬಸ್‌ನಿಂದ ಕೆಳಗಿಳಿಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.

ಇದರ ಹೊರತಾಗಿಯೂ, ತನಿಖಾಧಿಕಾರಿ ಎಸ್‌ಐ ಸಂಜಯ್ ಪ್ರತಾಪ್ ಈ ಹಿಂದೆ ನ್ಯಾಯಾಲಯಕ್ಕೆ ವಿಡಿಯೋದಲ್ಲಿರುವ ವ್ಯಕ್ತಿಗಳು “ಮಲ್ಹರ್‌ಗಢ ಪೊಲೀಸರಲ್ಲ” ಎಂದು ಹೇಳಿದ್ದರು. ಡಿಸೆಂಬರ್ 9 ರಂದು ಸಮನ್ಸ್ ಜಾರಿಯಾದ ಮಂದ್‌ಸೌರ್ ಎಸ್‌ಪಿ ವಿನೋದ್ ಕುಮಾರ್ ಮೀನಾ, ವೀಡಿಯೊದಲ್ಲಿ ಕಂಡುಬರುವ ಅಧಿಕಾರಿಗಳನ್ನು ವಾಸ್ತವವಾಗಿ ಮಲ್ಹರ್‌ಗಢ ಠಾಣೆಯಲ್ಲಿ ನಿಯೋಜಿಸಲಾಗಿದೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಾಗ ಈ ಹೇಳಿಕೆ ಬಯಲಾಯಿತು.

ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು ಕಾನೂನು ವಿಧಾನಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ಎಸ್‌ಪಿ ಒಪ್ಪಿಕೊಂಡರು. ನಂತರ ಅವರು ಆಗಿನ ಟಿಐ ರಾಜೇಂದ್ರ ಪನ್ವರ್, ಎಸ್‌ಐ ಸಂಜಯ್ ಪ್ರತಾಪ್, ಎಸ್‌ಐ ಸಾಜಿದ್ ಮನ್ಸೂರಿ ಮತ್ತು ಕಾನ್‌ಸ್ಟೆಬಲ್‌ಗಳಾದ ನರೇಂದ್ರ ಸಿಂಗ್, ಜಿತೇಂದ್ರ ಸಿಂಗ್ ಮತ್ತು ದಿಲೀಪ್ ಜಾಟ್ ಸೇರಿದಂತೆ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿ, ಹೆಚ್ಚುವರಿ ಎಸ್‌ಪಿ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶಿಸಿದರು.

ಡಿಸೆಂಬರ್ 5 ರಂದು ಹೈಕೋರ್ಟ್, ಸೋಹನ್‌ಲಾಲ್ ಅವರನ್ನು ನಿರಪರಾಧಿ ಎಂದು ಘೋಷಿಸದಿದ್ದರೂ, ಪೊಲೀಸ್ ಹೇಳಿಕೆಯಲ್ಲಿನ ತೊಂದರೆದಾಯಕ ವ್ಯತ್ಯಾಸಗಳನ್ನು ಗಮನಿಸಿ, ಹೈಕೋರ್ಟ್ ಅವರನ್ನು ಜಾಮೀನು ನೀಡಿತ್ತು. ಆದರೂ ನ್ಯಾಯಾಲಯವು ಅವರನ್ನು ಇನ್ನೂ ನಿರಪರಾಧಿ ಎಂದು ಘೋಷಿಸಿಲ್ಲ, ತನ್ನ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಸೋಹನ್‌ಲಾಲ್ ಅವರ ಸಹೋದರ ಕರ್ತಾರಾಮ್ ವರದಿಗಾರರೊಂದಿಗೆ ಮಾತನಾಡುತ್ತಾ, ಬಸ್ ಮಾಲೀಕರು ಆರಂಭದಲ್ಲಿ ಬಸ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲು ನಿರಾಕರಿಸಿತು. ನಮ್ಮ ಕುಟುಂಬವು ಬಸ್‌ನಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲು ದಿನಗಟ್ಟಲೆ ಕಷ್ಟಪಡಬೇಕಾಯಿತು ಎಂದು ಹೇಳಿದರು. “ಅವರು ಯುವಕನನ್ನು ಬಸ್‌ನಿಂದ ಅಪಹರಿಸಿ ನಂತರ ಅಫೀಮು ಹೊಂದಿದ್ದ ಆರೋಪಿಸಿದರು. ಹೈಕೋರ್ಟ್‌ನ ಹಸ್ತಕ್ಷೇಪವೇ ಸತ್ಯ ಹೊರಬರಲು ಏಕೈಕ ಕಾರಣ ಎಂದು ಹೇಳಿದರು.

ತನಿಖಾ ಅಧಿಕಾರಿಯ ಸಾಕ್ಷ್ಯದಲ್ಲಿನ ವಿರೋಧಾಭಾಸಗಳನ್ನು ಗಮನಿಸಿ, “ಅಸಂವಿಧಾನಿಕ ಮತ್ತು ಕಾನೂನುಬಾಹಿರ ನಡವಳಿಕೆ”ಗಾಗಿ ನ್ಯಾಯಾಲಯ ಪೊಲೀಸರನ್ನು ಖಂಡಿಸಿದೆ ಎಂದು ಡಿಫೆನ್ಸ್‌ ವಕೀಲ ಹಿಮಾಂಶು ಠಾಕೂರ್ ಹೇಳಿದರು. ಅಮಾನತುಗೊಂಡ ಅಧಿಕಾರಿಗಳ ಪಟ್ಟಿಯನ್ನು ಎಸ್‌ಪಿ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇಲಾಖಾ ವಿಚಾರಣೆಗಳು ಪ್ರಾರಂಭವಾಗಿವೆ ಎಂದು ಅವರು ಖಚಿತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...