Homeಮುಖಪುಟಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

- Advertisement -
- Advertisement -

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್ ಹೈಕೋರ್ಟ್‌ ಸರ್ಕಾರಕ್ಕೆ ಕಠಿಣ ಛೀಮಾರಿ ಹಾಕಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣವು ಆಗಸ್ಟ್ 29, 2025 ರಂದು ಜೋಧ್‌ಪುರ ನಿವಾಸಿ ಸೋಹನ್‌ಲಾಲ್ ವಿರುದ್ಧ 2.7 ಕೆಜಿ ಅಫೀಮು ಹೊಂದಿದ್ದ ಆರೋಪದ ಮೇಲೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.

ಮಲ್ಹರ್‌ಗಢ ಪೊಲೀಸರು ಸಂಜೆ 5 ಗಂಟೆಗೆ ಆತನ ಬಂಧನ ಮಾಡಿದರು. ಸ್ಥಳೀಯ ಸ್ಮಶಾನದ ಎದುರಿಗಿನ ಮೈದಾನದ ಬಳಿ ಆತನನ್ನು ಬಂಧಿಸಿದ್ದೇವೆ ಎಂದು ಹೇಳಿಕೊಂಡರು. ಆದರೆ, ಸೋಹನ್‌ಲಾಲ್ ಅವರ ಕುಟುಂಬವು ಬಸ್‌ನಿಂದ ಯುವಕ ಇಳಿದ ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರದರ್ಶಿಸಿತು. ಪೊಲೀಸ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಸಮಯಕ್ಕಿಂತ ಐದು ಗಂಟೆಗಳ ಮೊದಲು ಬೆಳಿಗ್ಗೆ 11.39 ಕ್ಕೆ ಸಾಮಾನ್ಯ ಉಡುಪಿನಲ್ಲಿರುವ ವ್ಯಕ್ತಿಗಳು ಆತನನ್ನು ಬಲವಂತವಾಗಿ ಕರೆದುಕೊಂಡು ಹೋಗುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ದೃಶ್ಯಗಳಲ್ಲಿ ತೋರಿಸಲಾದ ಸ್ಥಳವು ಪೊಲೀಸರು ಉಲ್ಲೇಖಿಸಿದ ಸ್ಥಳದಿಂದ ಸುಮಾರು 35 ಕಿ.ಮೀ ದೂರದಲ್ಲಿದೆ.

ಹೈಕೋರ್ಟ್‌ಗೆ ಸಲ್ಲಿಸಿದ ದೃಶ್ಯಗಳಲ್ಲಿ, ಮಲ್ಹರ್‌ಗಢ ಪೊಲೀಸ್ ಕಾನ್‌ಸ್ಟೆಬಲ್‌ಗಳು ಎಂದು ಗುರುತಿಸಲಾದ ಗುಂಪು ಸೋಹನ್‌ಲಾಲ್ ಅವರನ್ನು ಬಸ್‌ನಿಂದ ಕೆಳಗಿಳಿಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.

ಇದರ ಹೊರತಾಗಿಯೂ, ತನಿಖಾಧಿಕಾರಿ ಎಸ್‌ಐ ಸಂಜಯ್ ಪ್ರತಾಪ್ ಈ ಹಿಂದೆ ನ್ಯಾಯಾಲಯಕ್ಕೆ ವಿಡಿಯೋದಲ್ಲಿರುವ ವ್ಯಕ್ತಿಗಳು “ಮಲ್ಹರ್‌ಗಢ ಪೊಲೀಸರಲ್ಲ” ಎಂದು ಹೇಳಿದ್ದರು. ಡಿಸೆಂಬರ್ 9 ರಂದು ಸಮನ್ಸ್ ಜಾರಿಯಾದ ಮಂದ್‌ಸೌರ್ ಎಸ್‌ಪಿ ವಿನೋದ್ ಕುಮಾರ್ ಮೀನಾ, ವೀಡಿಯೊದಲ್ಲಿ ಕಂಡುಬರುವ ಅಧಿಕಾರಿಗಳನ್ನು ವಾಸ್ತವವಾಗಿ ಮಲ್ಹರ್‌ಗಢ ಠಾಣೆಯಲ್ಲಿ ನಿಯೋಜಿಸಲಾಗಿದೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಾಗ ಈ ಹೇಳಿಕೆ ಬಯಲಾಯಿತು.

ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು ಕಾನೂನು ವಿಧಾನಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ಎಸ್‌ಪಿ ಒಪ್ಪಿಕೊಂಡರು. ನಂತರ ಅವರು ಆಗಿನ ಟಿಐ ರಾಜೇಂದ್ರ ಪನ್ವರ್, ಎಸ್‌ಐ ಸಂಜಯ್ ಪ್ರತಾಪ್, ಎಸ್‌ಐ ಸಾಜಿದ್ ಮನ್ಸೂರಿ ಮತ್ತು ಕಾನ್‌ಸ್ಟೆಬಲ್‌ಗಳಾದ ನರೇಂದ್ರ ಸಿಂಗ್, ಜಿತೇಂದ್ರ ಸಿಂಗ್ ಮತ್ತು ದಿಲೀಪ್ ಜಾಟ್ ಸೇರಿದಂತೆ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿ, ಹೆಚ್ಚುವರಿ ಎಸ್‌ಪಿ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶಿಸಿದರು.

ಡಿಸೆಂಬರ್ 5 ರಂದು ಹೈಕೋರ್ಟ್, ಸೋಹನ್‌ಲಾಲ್ ಅವರನ್ನು ನಿರಪರಾಧಿ ಎಂದು ಘೋಷಿಸದಿದ್ದರೂ, ಪೊಲೀಸ್ ಹೇಳಿಕೆಯಲ್ಲಿನ ತೊಂದರೆದಾಯಕ ವ್ಯತ್ಯಾಸಗಳನ್ನು ಗಮನಿಸಿ, ಹೈಕೋರ್ಟ್ ಅವರನ್ನು ಜಾಮೀನು ನೀಡಿತ್ತು. ಆದರೂ ನ್ಯಾಯಾಲಯವು ಅವರನ್ನು ಇನ್ನೂ ನಿರಪರಾಧಿ ಎಂದು ಘೋಷಿಸಿಲ್ಲ, ತನ್ನ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಸೋಹನ್‌ಲಾಲ್ ಅವರ ಸಹೋದರ ಕರ್ತಾರಾಮ್ ವರದಿಗಾರರೊಂದಿಗೆ ಮಾತನಾಡುತ್ತಾ, ಬಸ್ ಮಾಲೀಕರು ಆರಂಭದಲ್ಲಿ ಬಸ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲು ನಿರಾಕರಿಸಿತು. ನಮ್ಮ ಕುಟುಂಬವು ಬಸ್‌ನಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲು ದಿನಗಟ್ಟಲೆ ಕಷ್ಟಪಡಬೇಕಾಯಿತು ಎಂದು ಹೇಳಿದರು. “ಅವರು ಯುವಕನನ್ನು ಬಸ್‌ನಿಂದ ಅಪಹರಿಸಿ ನಂತರ ಅಫೀಮು ಹೊಂದಿದ್ದ ಆರೋಪಿಸಿದರು. ಹೈಕೋರ್ಟ್‌ನ ಹಸ್ತಕ್ಷೇಪವೇ ಸತ್ಯ ಹೊರಬರಲು ಏಕೈಕ ಕಾರಣ ಎಂದು ಹೇಳಿದರು.

ತನಿಖಾ ಅಧಿಕಾರಿಯ ಸಾಕ್ಷ್ಯದಲ್ಲಿನ ವಿರೋಧಾಭಾಸಗಳನ್ನು ಗಮನಿಸಿ, “ಅಸಂವಿಧಾನಿಕ ಮತ್ತು ಕಾನೂನುಬಾಹಿರ ನಡವಳಿಕೆ”ಗಾಗಿ ನ್ಯಾಯಾಲಯ ಪೊಲೀಸರನ್ನು ಖಂಡಿಸಿದೆ ಎಂದು ಡಿಫೆನ್ಸ್‌ ವಕೀಲ ಹಿಮಾಂಶು ಠಾಕೂರ್ ಹೇಳಿದರು. ಅಮಾನತುಗೊಂಡ ಅಧಿಕಾರಿಗಳ ಪಟ್ಟಿಯನ್ನು ಎಸ್‌ಪಿ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇಲಾಖಾ ವಿಚಾರಣೆಗಳು ಪ್ರಾರಂಭವಾಗಿವೆ ಎಂದು ಅವರು ಖಚಿತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...