Homeಮುಖಪುಟಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

- Advertisement -
- Advertisement -

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್ ಹೈಕೋರ್ಟ್‌ ಸರ್ಕಾರಕ್ಕೆ ಕಠಿಣ ಛೀಮಾರಿ ಹಾಕಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣವು ಆಗಸ್ಟ್ 29, 2025 ರಂದು ಜೋಧ್‌ಪುರ ನಿವಾಸಿ ಸೋಹನ್‌ಲಾಲ್ ವಿರುದ್ಧ 2.7 ಕೆಜಿ ಅಫೀಮು ಹೊಂದಿದ್ದ ಆರೋಪದ ಮೇಲೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಯಿತು.

ಮಲ್ಹರ್‌ಗಢ ಪೊಲೀಸರು ಸಂಜೆ 5 ಗಂಟೆಗೆ ಆತನ ಬಂಧನ ಮಾಡಿದರು. ಸ್ಥಳೀಯ ಸ್ಮಶಾನದ ಎದುರಿಗಿನ ಮೈದಾನದ ಬಳಿ ಆತನನ್ನು ಬಂಧಿಸಿದ್ದೇವೆ ಎಂದು ಹೇಳಿಕೊಂಡರು. ಆದರೆ, ಸೋಹನ್‌ಲಾಲ್ ಅವರ ಕುಟುಂಬವು ಬಸ್‌ನಿಂದ ಯುವಕ ಇಳಿದ ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರದರ್ಶಿಸಿತು. ಪೊಲೀಸ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಸಮಯಕ್ಕಿಂತ ಐದು ಗಂಟೆಗಳ ಮೊದಲು ಬೆಳಿಗ್ಗೆ 11.39 ಕ್ಕೆ ಸಾಮಾನ್ಯ ಉಡುಪಿನಲ್ಲಿರುವ ವ್ಯಕ್ತಿಗಳು ಆತನನ್ನು ಬಲವಂತವಾಗಿ ಕರೆದುಕೊಂಡು ಹೋಗುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ದೃಶ್ಯಗಳಲ್ಲಿ ತೋರಿಸಲಾದ ಸ್ಥಳವು ಪೊಲೀಸರು ಉಲ್ಲೇಖಿಸಿದ ಸ್ಥಳದಿಂದ ಸುಮಾರು 35 ಕಿ.ಮೀ ದೂರದಲ್ಲಿದೆ.

ಹೈಕೋರ್ಟ್‌ಗೆ ಸಲ್ಲಿಸಿದ ದೃಶ್ಯಗಳಲ್ಲಿ, ಮಲ್ಹರ್‌ಗಢ ಪೊಲೀಸ್ ಕಾನ್‌ಸ್ಟೆಬಲ್‌ಗಳು ಎಂದು ಗುರುತಿಸಲಾದ ಗುಂಪು ಸೋಹನ್‌ಲಾಲ್ ಅವರನ್ನು ಬಸ್‌ನಿಂದ ಕೆಳಗಿಳಿಸುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.

ಇದರ ಹೊರತಾಗಿಯೂ, ತನಿಖಾಧಿಕಾರಿ ಎಸ್‌ಐ ಸಂಜಯ್ ಪ್ರತಾಪ್ ಈ ಹಿಂದೆ ನ್ಯಾಯಾಲಯಕ್ಕೆ ವಿಡಿಯೋದಲ್ಲಿರುವ ವ್ಯಕ್ತಿಗಳು “ಮಲ್ಹರ್‌ಗಢ ಪೊಲೀಸರಲ್ಲ” ಎಂದು ಹೇಳಿದ್ದರು. ಡಿಸೆಂಬರ್ 9 ರಂದು ಸಮನ್ಸ್ ಜಾರಿಯಾದ ಮಂದ್‌ಸೌರ್ ಎಸ್‌ಪಿ ವಿನೋದ್ ಕುಮಾರ್ ಮೀನಾ, ವೀಡಿಯೊದಲ್ಲಿ ಕಂಡುಬರುವ ಅಧಿಕಾರಿಗಳನ್ನು ವಾಸ್ತವವಾಗಿ ಮಲ್ಹರ್‌ಗಢ ಠಾಣೆಯಲ್ಲಿ ನಿಯೋಜಿಸಲಾಗಿದೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಾಗ ಈ ಹೇಳಿಕೆ ಬಯಲಾಯಿತು.

ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು ಕಾನೂನು ವಿಧಾನಗಳನ್ನು ಅನುಸರಿಸಲು ವಿಫಲರಾಗಿದ್ದಾರೆ ಎಂದು ಎಸ್‌ಪಿ ಒಪ್ಪಿಕೊಂಡರು. ನಂತರ ಅವರು ಆಗಿನ ಟಿಐ ರಾಜೇಂದ್ರ ಪನ್ವರ್, ಎಸ್‌ಐ ಸಂಜಯ್ ಪ್ರತಾಪ್, ಎಸ್‌ಐ ಸಾಜಿದ್ ಮನ್ಸೂರಿ ಮತ್ತು ಕಾನ್‌ಸ್ಟೆಬಲ್‌ಗಳಾದ ನರೇಂದ್ರ ಸಿಂಗ್, ಜಿತೇಂದ್ರ ಸಿಂಗ್ ಮತ್ತು ದಿಲೀಪ್ ಜಾಟ್ ಸೇರಿದಂತೆ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿ, ಹೆಚ್ಚುವರಿ ಎಸ್‌ಪಿ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶಿಸಿದರು.

ಡಿಸೆಂಬರ್ 5 ರಂದು ಹೈಕೋರ್ಟ್, ಸೋಹನ್‌ಲಾಲ್ ಅವರನ್ನು ನಿರಪರಾಧಿ ಎಂದು ಘೋಷಿಸದಿದ್ದರೂ, ಪೊಲೀಸ್ ಹೇಳಿಕೆಯಲ್ಲಿನ ತೊಂದರೆದಾಯಕ ವ್ಯತ್ಯಾಸಗಳನ್ನು ಗಮನಿಸಿ, ಹೈಕೋರ್ಟ್ ಅವರನ್ನು ಜಾಮೀನು ನೀಡಿತ್ತು. ಆದರೂ ನ್ಯಾಯಾಲಯವು ಅವರನ್ನು ಇನ್ನೂ ನಿರಪರಾಧಿ ಎಂದು ಘೋಷಿಸಿಲ್ಲ, ತನ್ನ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಸೋಹನ್‌ಲಾಲ್ ಅವರ ಸಹೋದರ ಕರ್ತಾರಾಮ್ ವರದಿಗಾರರೊಂದಿಗೆ ಮಾತನಾಡುತ್ತಾ, ಬಸ್ ಮಾಲೀಕರು ಆರಂಭದಲ್ಲಿ ಬಸ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲು ನಿರಾಕರಿಸಿತು. ನಮ್ಮ ಕುಟುಂಬವು ಬಸ್‌ನಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲು ದಿನಗಟ್ಟಲೆ ಕಷ್ಟಪಡಬೇಕಾಯಿತು ಎಂದು ಹೇಳಿದರು. “ಅವರು ಯುವಕನನ್ನು ಬಸ್‌ನಿಂದ ಅಪಹರಿಸಿ ನಂತರ ಅಫೀಮು ಹೊಂದಿದ್ದ ಆರೋಪಿಸಿದರು. ಹೈಕೋರ್ಟ್‌ನ ಹಸ್ತಕ್ಷೇಪವೇ ಸತ್ಯ ಹೊರಬರಲು ಏಕೈಕ ಕಾರಣ ಎಂದು ಹೇಳಿದರು.

ತನಿಖಾ ಅಧಿಕಾರಿಯ ಸಾಕ್ಷ್ಯದಲ್ಲಿನ ವಿರೋಧಾಭಾಸಗಳನ್ನು ಗಮನಿಸಿ, “ಅಸಂವಿಧಾನಿಕ ಮತ್ತು ಕಾನೂನುಬಾಹಿರ ನಡವಳಿಕೆ”ಗಾಗಿ ನ್ಯಾಯಾಲಯ ಪೊಲೀಸರನ್ನು ಖಂಡಿಸಿದೆ ಎಂದು ಡಿಫೆನ್ಸ್‌ ವಕೀಲ ಹಿಮಾಂಶು ಠಾಕೂರ್ ಹೇಳಿದರು. ಅಮಾನತುಗೊಂಡ ಅಧಿಕಾರಿಗಳ ಪಟ್ಟಿಯನ್ನು ಎಸ್‌ಪಿ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇಲಾಖಾ ವಿಚಾರಣೆಗಳು ಪ್ರಾರಂಭವಾಗಿವೆ ಎಂದು ಅವರು ಖಚಿತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...