Homeಮುಖಪುಟಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5...

ಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5 ದಿನವಾದರೂ ಬಂಧನವಿಲ್ಲ

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಇಬ್ಬರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಬಿಜೆಪಿ ಪರ ಸಂಘಟನೆಯಾದ ಬಜರಂಗದಳ ಮತ್ತು ವಿಎಚ್‌ಪಿಯ ದುಷ್ಕರ್ಮಿಗಳು ಸೋಮವಾರ ದಾಳಿ ನಡೆಸಿರುವ ಘಟನೆ ನಡೆದಿದೆ. ಪೊಲೀಸರ ಮುಂದೆಯೆ ಈ ಹಲ್ಲೆ ನಡೆದಿದ್ದರೂ, ಪೊಲೀಸರು ಈ ದುಷ್ಕರ್ಮಿಗಳ ವಿರುದ್ಧ ಮೂರು ದಿನಗಳ ಎಫ್‌ಐಆರ್‌ ದಾಖಲಿಸಿದ್ದಾರೆ. ಅದಾಗ್ಯೂ, ಘಟನೆ ನಡೆದು 5 ದಿನಗಳಾದರೂ ಪ್ರಕರಣದಲ್ಲಿ ಪೊಲೀಸರು ಇಲ್ಲಿವರೆಗೆ ಯಾವುದೆ ದುಷ್ಕರ್ಮಿಗಳ ಬಂಧನ ಮಾಡಿಲ್ಲ ಎಂದು ವರದಿಯಾಗಿದೆ. ಮಧ್ಯಪ್ರದೇಶ

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಿಂದ ಸುಮಾರು 50 ಕ್ರಿಶ್ಚಿಯನ್ ಯಾತ್ರಿಕರು ಸೋಮವಾರ ಒಂದು ದಿನದ ಚರ್ಚ್ ಭೇಟಿಗಾಗಿ ಜಬಲ್ಪುರ ತಲುಪಿದ್ದರು. ಈ ವೇಳೆ ಬಿಜೆಪಿ ಪರ ಸಂಘಟನೆಗಳ ದುಷ್ಕರ್ಮಿಗಳ ಗುಂಪು ಯಾತ್ರಿಕರ ಮೇಲೆ ಧಾರ್ಮಿಕ ಮತಾಂತರದ ಆರೋಪ ಹೊರಿಸಿ ಅವರು ಪ್ರಯಾಣಿಸುತ್ತಿದ್ದ ಬಸ್ ಅನ್ನು ತಡೆದು ಅವರನ್ನು ರಂಜಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮಧ್ಯಪ್ರದೇಶ

ಈ ವೇಳೆ ಅವರನ್ನು ಪೊಲೀಸ್‌ ಠಾಣೆಯಲ್ಲಿ ಆರು ಗಂಟೆಗಳ ಕಾಲ ಬಂಧಿಸಲಾಗಿತ್ತ. ಆದಾಗ್ಯೂ, ಜಬಲ್ಪುರ ಡಯೋಸಿಸ್‌ನ ವಿಕಾರ್ ಜನರಲ್ ಫಾದರ್ ಡೇವಿಸ್ ಜಾರ್ಜ್ ಮತ್ತು ಡಯೋಸಿಸ್‌ನ ಪ್ರೊಕ್ಯುರೇಟರ್ ಫಾದರ್ ಜಾರ್ಜ್ ಥಾಮಸ್ ಅವರು ಯಾತ್ರಿಕರಿಗೆ ಸಹಾಯ ಮಾಡಲು ಪೊಲೀಸ್ ಠಾಣೆಗೆ ತಲುಪಿದಾಗ, ಅವರ ಮೇಲೆ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸುವ ವೇಳೆ ದುಷ್ಕರ್ಮಿಗಳ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಡಾ ಕೂಗಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಬಂಧನಗಳನ್ನು ನಡೆದಿಲ್ಲವಾದರೂ, ಕೇರಳದ ಇಬ್ಬರು ಸಂಸತ್ ಸದಸ್ಯರಾದ ಕೋಡಿಕುನ್ನಿಲ್ ಸುರೇಶ್ ಮತ್ತು ದೀನ್ ಕುರಿಯಾಕೋಸ್ ಅವರು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಪೊಲೀಸರು ಏಪ್ರಿಲ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ಹಲ್ಲೆಯನ್ನು ತಡೆಯಲು, ಎಫ್‌ಐಆರ್ ಅನ್ನು ಬೇಗ ದಾಖಲಿಸಲು ಮತ್ತು ದಾಳಿಕೋರರನ್ನು ಬಂಧಿಸಲು ಏಕೆ ಸಾಧ್ಯವಾಗಲಿಲ್ಲ ಎಂಬ ನ್ಯೂಸ್ ಲಾಂಡ್ರಿ ಜಬಲ್ಪುರ್ ಪ್ರಶ್ನೆಗೆ ಉತ್ತರಿಸಿರುವ ರಂಜಿ ಪ್ರದೇಶದ ನಗರ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಸಾಹು, “ನಾವು ಮಧ್ಯಪ್ರವೇಶಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಶೀಘ್ರದಲ್ಲೇ ನಾವು ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಿದ್ದೇವೆ” ಎಂದು ಹೇಳಿದ್ದಾರೆ.

ಆಪಾದಿತ ದಾಳಿಯ ಸಮಯದಲ್ಲಿ ಪೊಲೀಸರು ಇದ್ದರು ಆದರೆ ಅವರ ಹಸ್ತಕ್ಷೇಪ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿತ್ತು ಎಂದು ತನಗೆ ತಿಳಿದಿಲ್ಲ ಎಂದು ಫಾದರ್ ಜಾರ್ಜ್ ನ್ಯೂಸ್ ಲಾಂಡ್ರಿಗೆ ತಿಳಿಸಿದ್ದಾರೆ. “ಪೊಲೀಸ್ ಹಸ್ತಕ್ಷೇಪ ಹೆಚ್ಚು ಪರಿಣಾಮಕಾರಿಯಾಗಿರಬೇಕಿತ್ತು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಹೇಗೆ ಹಲ್ಲೆ ನಡೆಸಲು ಸಾಧ್ಯ” ಎಂದು ಫಾದರ್ ಜಾರ್ಜ್ ಹೇಳಿದ್ದಾರೆ.

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿಯ ನಾಯಕ ಘಟನೆಯನ್ನು ಸಮರ್ಥಿಸಿಕೊಂಡಿದ್ದು, ಧಾರ್ಮಿಕ ಮತಾಂತರಕ್ಕಾಗಿ ಬುಡಕಟ್ಟು ಜನರನ್ನು ಜಬಲ್ಪುರಕ್ಕೆ ಕರೆತರಲಾಗುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಹೇಳಿದ್ದಾರೆ. “ಬುಡಕಟ್ಟು ಜನರನ್ನು ಬೆದರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವಂತೆ ಪ್ರಚೋದಿಸಲಾಯಿತು. ಇದರ ನಂತರ, ವಿಎಚ್‌ಪಿ ಮತ್ತು ಬಜರಂಗದಳ ಸದಸ್ಯರು ಮಧ್ಯಪ್ರವೇಶಿಸಿ ಯಾತ್ರಿಕರನ್ನು ಪೊಲೀಸ್ ಠಾಣೆಗೆ ಕರೆತಂದರು” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಯಾತ್ರಿಕರು ಈ ಹೇಳಿಕೆಯನ್ನು ನಿರಾಕರಿಸಿದ್ದು, ದುಷ್ಕರ್ಮಿಗಳು ಯಾವುದೇ ಕಾರಣವಿಲ್ಲದೆ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. “ಯಾತ್ರಿಕರ ಭೇಟಿಯ ಸಮಯದಲ್ಲಿ ಯಾವುದೇ ಮತಾಂತರ ನಡೆಯುತ್ತಿರಲಿಲ್ಲ. ನನ್ನ ಪೋಷಕರು ಕ್ರಿಶ್ಚಿಯನ್ನರು, ಮತ್ತು ನಾನು ಹುಟ್ಟಿನಿಂದಲೇ ಕ್ರಿಶ್ಚಿಯನ್ ಆಗಿದ್ದೇನೆ. ಧಾರ್ಮಿಕ ಪ್ರವಾಸದ ಭಾಗವಾಗಿ ನಾವು ಜಬಲ್ಪುರದ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಆದರೆ ಈ ದುಷ್ಕರ್ಮಿಗಳು ಕಥೆಗಳನ್ನು ಹೆಣೆದು, ನಮ್ಮನ್ನು ಮತಾಂತರಕ್ಕಾಗಿ ಇಲ್ಲಿಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ. ಅವರು ಪೊಲೀಸರ ಸಹಾಯದಿಂದ ನಮ್ಮನ್ನು ತಡೆದು ರಂಝಿ ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ನಮ್ಮನ್ನು ಗಂಟೆಗಟ್ಟಲೆ ಬಂಧಿಸಲಾಯಿತು.” ಎಂದು ಯಾತ್ರಿಕರೊಬ್ಬರು ಹೇಳಿದ್ದಾರೆ.

ಮತ್ತೊಬ್ಬ ಯಾತ್ರಿಕರು ಮಾತನಾಡಿ, “ನನ್ನ ಕುಟುಂಬವು ಮೂರು ತಲೆಮಾರುಗಳಿಂದ ಕ್ರಿಶ್ಚಿಯನ್ ಆಗಿದೆ. ನಾನು ಹುಟ್ಟಿನಿಂದ ಕ್ರಿಶ್ಚಿಯನ್. ಪರಿಸ್ಥಿತಿ ಹೀಗಿರುವಾಗ ನನ್ನನ್ನು ಮತ್ತೆ ಹೇಗೆ ಮತಾಂತರಿಸಲು ಸಾಧ್ಯ? ನಮ್ಮಲ್ಲಿ ಸುಮಾರು 50 ಜನರು ಮಾಂಡ್ಲಾದಿಂದ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಪೊಲೀಸರು ನಮ್ಮ ಹೆಸರುಗಳನ್ನು ಬರೆದುಕೊಂಡು ಜಬಲ್‌ಪುರಕ್ಕೆ ಏಕೆ ಬಂದಿದ್ದೇವೆ ಎಂದು ಕೇಳಿದ್ದಾರೆ. ಇದು ಕಿರುಕುಳ ಅಲ್ಲದೆ ಇನ್ನೇನೂ ಅಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...