Homeಮುಖಪುಟಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5...

ಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5 ದಿನವಾದರೂ ಬಂಧನವಿಲ್ಲ

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಇಬ್ಬರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಬಿಜೆಪಿ ಪರ ಸಂಘಟನೆಯಾದ ಬಜರಂಗದಳ ಮತ್ತು ವಿಎಚ್‌ಪಿಯ ದುಷ್ಕರ್ಮಿಗಳು ಸೋಮವಾರ ದಾಳಿ ನಡೆಸಿರುವ ಘಟನೆ ನಡೆದಿದೆ. ಪೊಲೀಸರ ಮುಂದೆಯೆ ಈ ಹಲ್ಲೆ ನಡೆದಿದ್ದರೂ, ಪೊಲೀಸರು ಈ ದುಷ್ಕರ್ಮಿಗಳ ವಿರುದ್ಧ ಮೂರು ದಿನಗಳ ಎಫ್‌ಐಆರ್‌ ದಾಖಲಿಸಿದ್ದಾರೆ. ಅದಾಗ್ಯೂ, ಘಟನೆ ನಡೆದು 5 ದಿನಗಳಾದರೂ ಪ್ರಕರಣದಲ್ಲಿ ಪೊಲೀಸರು ಇಲ್ಲಿವರೆಗೆ ಯಾವುದೆ ದುಷ್ಕರ್ಮಿಗಳ ಬಂಧನ ಮಾಡಿಲ್ಲ ಎಂದು ವರದಿಯಾಗಿದೆ. ಮಧ್ಯಪ್ರದೇಶ

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಿಂದ ಸುಮಾರು 50 ಕ್ರಿಶ್ಚಿಯನ್ ಯಾತ್ರಿಕರು ಸೋಮವಾರ ಒಂದು ದಿನದ ಚರ್ಚ್ ಭೇಟಿಗಾಗಿ ಜಬಲ್ಪುರ ತಲುಪಿದ್ದರು. ಈ ವೇಳೆ ಬಿಜೆಪಿ ಪರ ಸಂಘಟನೆಗಳ ದುಷ್ಕರ್ಮಿಗಳ ಗುಂಪು ಯಾತ್ರಿಕರ ಮೇಲೆ ಧಾರ್ಮಿಕ ಮತಾಂತರದ ಆರೋಪ ಹೊರಿಸಿ ಅವರು ಪ್ರಯಾಣಿಸುತ್ತಿದ್ದ ಬಸ್ ಅನ್ನು ತಡೆದು ಅವರನ್ನು ರಂಜಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮಧ್ಯಪ್ರದೇಶ

ಈ ವೇಳೆ ಅವರನ್ನು ಪೊಲೀಸ್‌ ಠಾಣೆಯಲ್ಲಿ ಆರು ಗಂಟೆಗಳ ಕಾಲ ಬಂಧಿಸಲಾಗಿತ್ತ. ಆದಾಗ್ಯೂ, ಜಬಲ್ಪುರ ಡಯೋಸಿಸ್‌ನ ವಿಕಾರ್ ಜನರಲ್ ಫಾದರ್ ಡೇವಿಸ್ ಜಾರ್ಜ್ ಮತ್ತು ಡಯೋಸಿಸ್‌ನ ಪ್ರೊಕ್ಯುರೇಟರ್ ಫಾದರ್ ಜಾರ್ಜ್ ಥಾಮಸ್ ಅವರು ಯಾತ್ರಿಕರಿಗೆ ಸಹಾಯ ಮಾಡಲು ಪೊಲೀಸ್ ಠಾಣೆಗೆ ತಲುಪಿದಾಗ, ಅವರ ಮೇಲೆ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸುವ ವೇಳೆ ದುಷ್ಕರ್ಮಿಗಳ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಡಾ ಕೂಗಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಬಂಧನಗಳನ್ನು ನಡೆದಿಲ್ಲವಾದರೂ, ಕೇರಳದ ಇಬ್ಬರು ಸಂಸತ್ ಸದಸ್ಯರಾದ ಕೋಡಿಕುನ್ನಿಲ್ ಸುರೇಶ್ ಮತ್ತು ದೀನ್ ಕುರಿಯಾಕೋಸ್ ಅವರು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಪೊಲೀಸರು ಏಪ್ರಿಲ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ಹಲ್ಲೆಯನ್ನು ತಡೆಯಲು, ಎಫ್‌ಐಆರ್ ಅನ್ನು ಬೇಗ ದಾಖಲಿಸಲು ಮತ್ತು ದಾಳಿಕೋರರನ್ನು ಬಂಧಿಸಲು ಏಕೆ ಸಾಧ್ಯವಾಗಲಿಲ್ಲ ಎಂಬ ನ್ಯೂಸ್ ಲಾಂಡ್ರಿ ಜಬಲ್ಪುರ್ ಪ್ರಶ್ನೆಗೆ ಉತ್ತರಿಸಿರುವ ರಂಜಿ ಪ್ರದೇಶದ ನಗರ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಸಾಹು, “ನಾವು ಮಧ್ಯಪ್ರವೇಶಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಶೀಘ್ರದಲ್ಲೇ ನಾವು ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಿದ್ದೇವೆ” ಎಂದು ಹೇಳಿದ್ದಾರೆ.

ಆಪಾದಿತ ದಾಳಿಯ ಸಮಯದಲ್ಲಿ ಪೊಲೀಸರು ಇದ್ದರು ಆದರೆ ಅವರ ಹಸ್ತಕ್ಷೇಪ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿತ್ತು ಎಂದು ತನಗೆ ತಿಳಿದಿಲ್ಲ ಎಂದು ಫಾದರ್ ಜಾರ್ಜ್ ನ್ಯೂಸ್ ಲಾಂಡ್ರಿಗೆ ತಿಳಿಸಿದ್ದಾರೆ. “ಪೊಲೀಸ್ ಹಸ್ತಕ್ಷೇಪ ಹೆಚ್ಚು ಪರಿಣಾಮಕಾರಿಯಾಗಿರಬೇಕಿತ್ತು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಹೇಗೆ ಹಲ್ಲೆ ನಡೆಸಲು ಸಾಧ್ಯ” ಎಂದು ಫಾದರ್ ಜಾರ್ಜ್ ಹೇಳಿದ್ದಾರೆ.

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿಯ ನಾಯಕ ಘಟನೆಯನ್ನು ಸಮರ್ಥಿಸಿಕೊಂಡಿದ್ದು, ಧಾರ್ಮಿಕ ಮತಾಂತರಕ್ಕಾಗಿ ಬುಡಕಟ್ಟು ಜನರನ್ನು ಜಬಲ್ಪುರಕ್ಕೆ ಕರೆತರಲಾಗುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಹೇಳಿದ್ದಾರೆ. “ಬುಡಕಟ್ಟು ಜನರನ್ನು ಬೆದರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವಂತೆ ಪ್ರಚೋದಿಸಲಾಯಿತು. ಇದರ ನಂತರ, ವಿಎಚ್‌ಪಿ ಮತ್ತು ಬಜರಂಗದಳ ಸದಸ್ಯರು ಮಧ್ಯಪ್ರವೇಶಿಸಿ ಯಾತ್ರಿಕರನ್ನು ಪೊಲೀಸ್ ಠಾಣೆಗೆ ಕರೆತಂದರು” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಯಾತ್ರಿಕರು ಈ ಹೇಳಿಕೆಯನ್ನು ನಿರಾಕರಿಸಿದ್ದು, ದುಷ್ಕರ್ಮಿಗಳು ಯಾವುದೇ ಕಾರಣವಿಲ್ಲದೆ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. “ಯಾತ್ರಿಕರ ಭೇಟಿಯ ಸಮಯದಲ್ಲಿ ಯಾವುದೇ ಮತಾಂತರ ನಡೆಯುತ್ತಿರಲಿಲ್ಲ. ನನ್ನ ಪೋಷಕರು ಕ್ರಿಶ್ಚಿಯನ್ನರು, ಮತ್ತು ನಾನು ಹುಟ್ಟಿನಿಂದಲೇ ಕ್ರಿಶ್ಚಿಯನ್ ಆಗಿದ್ದೇನೆ. ಧಾರ್ಮಿಕ ಪ್ರವಾಸದ ಭಾಗವಾಗಿ ನಾವು ಜಬಲ್ಪುರದ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಆದರೆ ಈ ದುಷ್ಕರ್ಮಿಗಳು ಕಥೆಗಳನ್ನು ಹೆಣೆದು, ನಮ್ಮನ್ನು ಮತಾಂತರಕ್ಕಾಗಿ ಇಲ್ಲಿಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ. ಅವರು ಪೊಲೀಸರ ಸಹಾಯದಿಂದ ನಮ್ಮನ್ನು ತಡೆದು ರಂಝಿ ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ನಮ್ಮನ್ನು ಗಂಟೆಗಟ್ಟಲೆ ಬಂಧಿಸಲಾಯಿತು.” ಎಂದು ಯಾತ್ರಿಕರೊಬ್ಬರು ಹೇಳಿದ್ದಾರೆ.

ಮತ್ತೊಬ್ಬ ಯಾತ್ರಿಕರು ಮಾತನಾಡಿ, “ನನ್ನ ಕುಟುಂಬವು ಮೂರು ತಲೆಮಾರುಗಳಿಂದ ಕ್ರಿಶ್ಚಿಯನ್ ಆಗಿದೆ. ನಾನು ಹುಟ್ಟಿನಿಂದ ಕ್ರಿಶ್ಚಿಯನ್. ಪರಿಸ್ಥಿತಿ ಹೀಗಿರುವಾಗ ನನ್ನನ್ನು ಮತ್ತೆ ಹೇಗೆ ಮತಾಂತರಿಸಲು ಸಾಧ್ಯ? ನಮ್ಮಲ್ಲಿ ಸುಮಾರು 50 ಜನರು ಮಾಂಡ್ಲಾದಿಂದ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಪೊಲೀಸರು ನಮ್ಮ ಹೆಸರುಗಳನ್ನು ಬರೆದುಕೊಂಡು ಜಬಲ್‌ಪುರಕ್ಕೆ ಏಕೆ ಬಂದಿದ್ದೇವೆ ಎಂದು ಕೇಳಿದ್ದಾರೆ. ಇದು ಕಿರುಕುಳ ಅಲ್ಲದೆ ಇನ್ನೇನೂ ಅಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...