Homeಮುಖಪುಟಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5...

ಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5 ದಿನವಾದರೂ ಬಂಧನವಿಲ್ಲ

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಇಬ್ಬರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಬಿಜೆಪಿ ಪರ ಸಂಘಟನೆಯಾದ ಬಜರಂಗದಳ ಮತ್ತು ವಿಎಚ್‌ಪಿಯ ದುಷ್ಕರ್ಮಿಗಳು ಸೋಮವಾರ ದಾಳಿ ನಡೆಸಿರುವ ಘಟನೆ ನಡೆದಿದೆ. ಪೊಲೀಸರ ಮುಂದೆಯೆ ಈ ಹಲ್ಲೆ ನಡೆದಿದ್ದರೂ, ಪೊಲೀಸರು ಈ ದುಷ್ಕರ್ಮಿಗಳ ವಿರುದ್ಧ ಮೂರು ದಿನಗಳ ಎಫ್‌ಐಆರ್‌ ದಾಖಲಿಸಿದ್ದಾರೆ. ಅದಾಗ್ಯೂ, ಘಟನೆ ನಡೆದು 5 ದಿನಗಳಾದರೂ ಪ್ರಕರಣದಲ್ಲಿ ಪೊಲೀಸರು ಇಲ್ಲಿವರೆಗೆ ಯಾವುದೆ ದುಷ್ಕರ್ಮಿಗಳ ಬಂಧನ ಮಾಡಿಲ್ಲ ಎಂದು ವರದಿಯಾಗಿದೆ. ಮಧ್ಯಪ್ರದೇಶ

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಿಂದ ಸುಮಾರು 50 ಕ್ರಿಶ್ಚಿಯನ್ ಯಾತ್ರಿಕರು ಸೋಮವಾರ ಒಂದು ದಿನದ ಚರ್ಚ್ ಭೇಟಿಗಾಗಿ ಜಬಲ್ಪುರ ತಲುಪಿದ್ದರು. ಈ ವೇಳೆ ಬಿಜೆಪಿ ಪರ ಸಂಘಟನೆಗಳ ದುಷ್ಕರ್ಮಿಗಳ ಗುಂಪು ಯಾತ್ರಿಕರ ಮೇಲೆ ಧಾರ್ಮಿಕ ಮತಾಂತರದ ಆರೋಪ ಹೊರಿಸಿ ಅವರು ಪ್ರಯಾಣಿಸುತ್ತಿದ್ದ ಬಸ್ ಅನ್ನು ತಡೆದು ಅವರನ್ನು ರಂಜಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮಧ್ಯಪ್ರದೇಶ

ಈ ವೇಳೆ ಅವರನ್ನು ಪೊಲೀಸ್‌ ಠಾಣೆಯಲ್ಲಿ ಆರು ಗಂಟೆಗಳ ಕಾಲ ಬಂಧಿಸಲಾಗಿತ್ತ. ಆದಾಗ್ಯೂ, ಜಬಲ್ಪುರ ಡಯೋಸಿಸ್‌ನ ವಿಕಾರ್ ಜನರಲ್ ಫಾದರ್ ಡೇವಿಸ್ ಜಾರ್ಜ್ ಮತ್ತು ಡಯೋಸಿಸ್‌ನ ಪ್ರೊಕ್ಯುರೇಟರ್ ಫಾದರ್ ಜಾರ್ಜ್ ಥಾಮಸ್ ಅವರು ಯಾತ್ರಿಕರಿಗೆ ಸಹಾಯ ಮಾಡಲು ಪೊಲೀಸ್ ಠಾಣೆಗೆ ತಲುಪಿದಾಗ, ಅವರ ಮೇಲೆ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸುವ ವೇಳೆ ದುಷ್ಕರ್ಮಿಗಳ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಡಾ ಕೂಗಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಬಂಧನಗಳನ್ನು ನಡೆದಿಲ್ಲವಾದರೂ, ಕೇರಳದ ಇಬ್ಬರು ಸಂಸತ್ ಸದಸ್ಯರಾದ ಕೋಡಿಕುನ್ನಿಲ್ ಸುರೇಶ್ ಮತ್ತು ದೀನ್ ಕುರಿಯಾಕೋಸ್ ಅವರು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಪೊಲೀಸರು ಏಪ್ರಿಲ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ಹಲ್ಲೆಯನ್ನು ತಡೆಯಲು, ಎಫ್‌ಐಆರ್ ಅನ್ನು ಬೇಗ ದಾಖಲಿಸಲು ಮತ್ತು ದಾಳಿಕೋರರನ್ನು ಬಂಧಿಸಲು ಏಕೆ ಸಾಧ್ಯವಾಗಲಿಲ್ಲ ಎಂಬ ನ್ಯೂಸ್ ಲಾಂಡ್ರಿ ಜಬಲ್ಪುರ್ ಪ್ರಶ್ನೆಗೆ ಉತ್ತರಿಸಿರುವ ರಂಜಿ ಪ್ರದೇಶದ ನಗರ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಸಾಹು, “ನಾವು ಮಧ್ಯಪ್ರವೇಶಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಶೀಘ್ರದಲ್ಲೇ ನಾವು ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಿದ್ದೇವೆ” ಎಂದು ಹೇಳಿದ್ದಾರೆ.

ಆಪಾದಿತ ದಾಳಿಯ ಸಮಯದಲ್ಲಿ ಪೊಲೀಸರು ಇದ್ದರು ಆದರೆ ಅವರ ಹಸ್ತಕ್ಷೇಪ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿತ್ತು ಎಂದು ತನಗೆ ತಿಳಿದಿಲ್ಲ ಎಂದು ಫಾದರ್ ಜಾರ್ಜ್ ನ್ಯೂಸ್ ಲಾಂಡ್ರಿಗೆ ತಿಳಿಸಿದ್ದಾರೆ. “ಪೊಲೀಸ್ ಹಸ್ತಕ್ಷೇಪ ಹೆಚ್ಚು ಪರಿಣಾಮಕಾರಿಯಾಗಿರಬೇಕಿತ್ತು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಹೇಗೆ ಹಲ್ಲೆ ನಡೆಸಲು ಸಾಧ್ಯ” ಎಂದು ಫಾದರ್ ಜಾರ್ಜ್ ಹೇಳಿದ್ದಾರೆ.

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿಯ ನಾಯಕ ಘಟನೆಯನ್ನು ಸಮರ್ಥಿಸಿಕೊಂಡಿದ್ದು, ಧಾರ್ಮಿಕ ಮತಾಂತರಕ್ಕಾಗಿ ಬುಡಕಟ್ಟು ಜನರನ್ನು ಜಬಲ್ಪುರಕ್ಕೆ ಕರೆತರಲಾಗುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಹೇಳಿದ್ದಾರೆ. “ಬುಡಕಟ್ಟು ಜನರನ್ನು ಬೆದರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವಂತೆ ಪ್ರಚೋದಿಸಲಾಯಿತು. ಇದರ ನಂತರ, ವಿಎಚ್‌ಪಿ ಮತ್ತು ಬಜರಂಗದಳ ಸದಸ್ಯರು ಮಧ್ಯಪ್ರವೇಶಿಸಿ ಯಾತ್ರಿಕರನ್ನು ಪೊಲೀಸ್ ಠಾಣೆಗೆ ಕರೆತಂದರು” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಯಾತ್ರಿಕರು ಈ ಹೇಳಿಕೆಯನ್ನು ನಿರಾಕರಿಸಿದ್ದು, ದುಷ್ಕರ್ಮಿಗಳು ಯಾವುದೇ ಕಾರಣವಿಲ್ಲದೆ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. “ಯಾತ್ರಿಕರ ಭೇಟಿಯ ಸಮಯದಲ್ಲಿ ಯಾವುದೇ ಮತಾಂತರ ನಡೆಯುತ್ತಿರಲಿಲ್ಲ. ನನ್ನ ಪೋಷಕರು ಕ್ರಿಶ್ಚಿಯನ್ನರು, ಮತ್ತು ನಾನು ಹುಟ್ಟಿನಿಂದಲೇ ಕ್ರಿಶ್ಚಿಯನ್ ಆಗಿದ್ದೇನೆ. ಧಾರ್ಮಿಕ ಪ್ರವಾಸದ ಭಾಗವಾಗಿ ನಾವು ಜಬಲ್ಪುರದ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಆದರೆ ಈ ದುಷ್ಕರ್ಮಿಗಳು ಕಥೆಗಳನ್ನು ಹೆಣೆದು, ನಮ್ಮನ್ನು ಮತಾಂತರಕ್ಕಾಗಿ ಇಲ್ಲಿಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ. ಅವರು ಪೊಲೀಸರ ಸಹಾಯದಿಂದ ನಮ್ಮನ್ನು ತಡೆದು ರಂಝಿ ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ನಮ್ಮನ್ನು ಗಂಟೆಗಟ್ಟಲೆ ಬಂಧಿಸಲಾಯಿತು.” ಎಂದು ಯಾತ್ರಿಕರೊಬ್ಬರು ಹೇಳಿದ್ದಾರೆ.

ಮತ್ತೊಬ್ಬ ಯಾತ್ರಿಕರು ಮಾತನಾಡಿ, “ನನ್ನ ಕುಟುಂಬವು ಮೂರು ತಲೆಮಾರುಗಳಿಂದ ಕ್ರಿಶ್ಚಿಯನ್ ಆಗಿದೆ. ನಾನು ಹುಟ್ಟಿನಿಂದ ಕ್ರಿಶ್ಚಿಯನ್. ಪರಿಸ್ಥಿತಿ ಹೀಗಿರುವಾಗ ನನ್ನನ್ನು ಮತ್ತೆ ಹೇಗೆ ಮತಾಂತರಿಸಲು ಸಾಧ್ಯ? ನಮ್ಮಲ್ಲಿ ಸುಮಾರು 50 ಜನರು ಮಾಂಡ್ಲಾದಿಂದ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಪೊಲೀಸರು ನಮ್ಮ ಹೆಸರುಗಳನ್ನು ಬರೆದುಕೊಂಡು ಜಬಲ್‌ಪುರಕ್ಕೆ ಏಕೆ ಬಂದಿದ್ದೇವೆ ಎಂದು ಕೇಳಿದ್ದಾರೆ. ಇದು ಕಿರುಕುಳ ಅಲ್ಲದೆ ಇನ್ನೇನೂ ಅಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...