Homeಮುಖಪುಟಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5...

ಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5 ದಿನವಾದರೂ ಬಂಧನವಿಲ್ಲ

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಇಬ್ಬರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಬಿಜೆಪಿ ಪರ ಸಂಘಟನೆಯಾದ ಬಜರಂಗದಳ ಮತ್ತು ವಿಎಚ್‌ಪಿಯ ದುಷ್ಕರ್ಮಿಗಳು ಸೋಮವಾರ ದಾಳಿ ನಡೆಸಿರುವ ಘಟನೆ ನಡೆದಿದೆ. ಪೊಲೀಸರ ಮುಂದೆಯೆ ಈ ಹಲ್ಲೆ ನಡೆದಿದ್ದರೂ, ಪೊಲೀಸರು ಈ ದುಷ್ಕರ್ಮಿಗಳ ವಿರುದ್ಧ ಮೂರು ದಿನಗಳ ಎಫ್‌ಐಆರ್‌ ದಾಖಲಿಸಿದ್ದಾರೆ. ಅದಾಗ್ಯೂ, ಘಟನೆ ನಡೆದು 5 ದಿನಗಳಾದರೂ ಪ್ರಕರಣದಲ್ಲಿ ಪೊಲೀಸರು ಇಲ್ಲಿವರೆಗೆ ಯಾವುದೆ ದುಷ್ಕರ್ಮಿಗಳ ಬಂಧನ ಮಾಡಿಲ್ಲ ಎಂದು ವರದಿಯಾಗಿದೆ. ಮಧ್ಯಪ್ರದೇಶ

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಿಂದ ಸುಮಾರು 50 ಕ್ರಿಶ್ಚಿಯನ್ ಯಾತ್ರಿಕರು ಸೋಮವಾರ ಒಂದು ದಿನದ ಚರ್ಚ್ ಭೇಟಿಗಾಗಿ ಜಬಲ್ಪುರ ತಲುಪಿದ್ದರು. ಈ ವೇಳೆ ಬಿಜೆಪಿ ಪರ ಸಂಘಟನೆಗಳ ದುಷ್ಕರ್ಮಿಗಳ ಗುಂಪು ಯಾತ್ರಿಕರ ಮೇಲೆ ಧಾರ್ಮಿಕ ಮತಾಂತರದ ಆರೋಪ ಹೊರಿಸಿ ಅವರು ಪ್ರಯಾಣಿಸುತ್ತಿದ್ದ ಬಸ್ ಅನ್ನು ತಡೆದು ಅವರನ್ನು ರಂಜಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮಧ್ಯಪ್ರದೇಶ

ಈ ವೇಳೆ ಅವರನ್ನು ಪೊಲೀಸ್‌ ಠಾಣೆಯಲ್ಲಿ ಆರು ಗಂಟೆಗಳ ಕಾಲ ಬಂಧಿಸಲಾಗಿತ್ತ. ಆದಾಗ್ಯೂ, ಜಬಲ್ಪುರ ಡಯೋಸಿಸ್‌ನ ವಿಕಾರ್ ಜನರಲ್ ಫಾದರ್ ಡೇವಿಸ್ ಜಾರ್ಜ್ ಮತ್ತು ಡಯೋಸಿಸ್‌ನ ಪ್ರೊಕ್ಯುರೇಟರ್ ಫಾದರ್ ಜಾರ್ಜ್ ಥಾಮಸ್ ಅವರು ಯಾತ್ರಿಕರಿಗೆ ಸಹಾಯ ಮಾಡಲು ಪೊಲೀಸ್ ಠಾಣೆಗೆ ತಲುಪಿದಾಗ, ಅವರ ಮೇಲೆ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸುವ ವೇಳೆ ದುಷ್ಕರ್ಮಿಗಳ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಡಾ ಕೂಗಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಬಂಧನಗಳನ್ನು ನಡೆದಿಲ್ಲವಾದರೂ, ಕೇರಳದ ಇಬ್ಬರು ಸಂಸತ್ ಸದಸ್ಯರಾದ ಕೋಡಿಕುನ್ನಿಲ್ ಸುರೇಶ್ ಮತ್ತು ದೀನ್ ಕುರಿಯಾಕೋಸ್ ಅವರು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಪೊಲೀಸರು ಏಪ್ರಿಲ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ಹಲ್ಲೆಯನ್ನು ತಡೆಯಲು, ಎಫ್‌ಐಆರ್ ಅನ್ನು ಬೇಗ ದಾಖಲಿಸಲು ಮತ್ತು ದಾಳಿಕೋರರನ್ನು ಬಂಧಿಸಲು ಏಕೆ ಸಾಧ್ಯವಾಗಲಿಲ್ಲ ಎಂಬ ನ್ಯೂಸ್ ಲಾಂಡ್ರಿ ಜಬಲ್ಪುರ್ ಪ್ರಶ್ನೆಗೆ ಉತ್ತರಿಸಿರುವ ರಂಜಿ ಪ್ರದೇಶದ ನಗರ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಸಾಹು, “ನಾವು ಮಧ್ಯಪ್ರವೇಶಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಶೀಘ್ರದಲ್ಲೇ ನಾವು ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಿದ್ದೇವೆ” ಎಂದು ಹೇಳಿದ್ದಾರೆ.

ಆಪಾದಿತ ದಾಳಿಯ ಸಮಯದಲ್ಲಿ ಪೊಲೀಸರು ಇದ್ದರು ಆದರೆ ಅವರ ಹಸ್ತಕ್ಷೇಪ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿತ್ತು ಎಂದು ತನಗೆ ತಿಳಿದಿಲ್ಲ ಎಂದು ಫಾದರ್ ಜಾರ್ಜ್ ನ್ಯೂಸ್ ಲಾಂಡ್ರಿಗೆ ತಿಳಿಸಿದ್ದಾರೆ. “ಪೊಲೀಸ್ ಹಸ್ತಕ್ಷೇಪ ಹೆಚ್ಚು ಪರಿಣಾಮಕಾರಿಯಾಗಿರಬೇಕಿತ್ತು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಹೇಗೆ ಹಲ್ಲೆ ನಡೆಸಲು ಸಾಧ್ಯ” ಎಂದು ಫಾದರ್ ಜಾರ್ಜ್ ಹೇಳಿದ್ದಾರೆ.

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿಯ ನಾಯಕ ಘಟನೆಯನ್ನು ಸಮರ್ಥಿಸಿಕೊಂಡಿದ್ದು, ಧಾರ್ಮಿಕ ಮತಾಂತರಕ್ಕಾಗಿ ಬುಡಕಟ್ಟು ಜನರನ್ನು ಜಬಲ್ಪುರಕ್ಕೆ ಕರೆತರಲಾಗುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಹೇಳಿದ್ದಾರೆ. “ಬುಡಕಟ್ಟು ಜನರನ್ನು ಬೆದರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವಂತೆ ಪ್ರಚೋದಿಸಲಾಯಿತು. ಇದರ ನಂತರ, ವಿಎಚ್‌ಪಿ ಮತ್ತು ಬಜರಂಗದಳ ಸದಸ್ಯರು ಮಧ್ಯಪ್ರವೇಶಿಸಿ ಯಾತ್ರಿಕರನ್ನು ಪೊಲೀಸ್ ಠಾಣೆಗೆ ಕರೆತಂದರು” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಯಾತ್ರಿಕರು ಈ ಹೇಳಿಕೆಯನ್ನು ನಿರಾಕರಿಸಿದ್ದು, ದುಷ್ಕರ್ಮಿಗಳು ಯಾವುದೇ ಕಾರಣವಿಲ್ಲದೆ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. “ಯಾತ್ರಿಕರ ಭೇಟಿಯ ಸಮಯದಲ್ಲಿ ಯಾವುದೇ ಮತಾಂತರ ನಡೆಯುತ್ತಿರಲಿಲ್ಲ. ನನ್ನ ಪೋಷಕರು ಕ್ರಿಶ್ಚಿಯನ್ನರು, ಮತ್ತು ನಾನು ಹುಟ್ಟಿನಿಂದಲೇ ಕ್ರಿಶ್ಚಿಯನ್ ಆಗಿದ್ದೇನೆ. ಧಾರ್ಮಿಕ ಪ್ರವಾಸದ ಭಾಗವಾಗಿ ನಾವು ಜಬಲ್ಪುರದ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಆದರೆ ಈ ದುಷ್ಕರ್ಮಿಗಳು ಕಥೆಗಳನ್ನು ಹೆಣೆದು, ನಮ್ಮನ್ನು ಮತಾಂತರಕ್ಕಾಗಿ ಇಲ್ಲಿಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ. ಅವರು ಪೊಲೀಸರ ಸಹಾಯದಿಂದ ನಮ್ಮನ್ನು ತಡೆದು ರಂಝಿ ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ನಮ್ಮನ್ನು ಗಂಟೆಗಟ್ಟಲೆ ಬಂಧಿಸಲಾಯಿತು.” ಎಂದು ಯಾತ್ರಿಕರೊಬ್ಬರು ಹೇಳಿದ್ದಾರೆ.

ಮತ್ತೊಬ್ಬ ಯಾತ್ರಿಕರು ಮಾತನಾಡಿ, “ನನ್ನ ಕುಟುಂಬವು ಮೂರು ತಲೆಮಾರುಗಳಿಂದ ಕ್ರಿಶ್ಚಿಯನ್ ಆಗಿದೆ. ನಾನು ಹುಟ್ಟಿನಿಂದ ಕ್ರಿಶ್ಚಿಯನ್. ಪರಿಸ್ಥಿತಿ ಹೀಗಿರುವಾಗ ನನ್ನನ್ನು ಮತ್ತೆ ಹೇಗೆ ಮತಾಂತರಿಸಲು ಸಾಧ್ಯ? ನಮ್ಮಲ್ಲಿ ಸುಮಾರು 50 ಜನರು ಮಾಂಡ್ಲಾದಿಂದ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಪೊಲೀಸರು ನಮ್ಮ ಹೆಸರುಗಳನ್ನು ಬರೆದುಕೊಂಡು ಜಬಲ್‌ಪುರಕ್ಕೆ ಏಕೆ ಬಂದಿದ್ದೇವೆ ಎಂದು ಕೇಳಿದ್ದಾರೆ. ಇದು ಕಿರುಕುಳ ಅಲ್ಲದೆ ಇನ್ನೇನೂ ಅಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...