Homeಮುಖಪುಟಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5...

ಮಧ್ಯಪ್ರದೇಶ | ಪೊಲೀಸರ ಮುಂದೆಯೆ ಕ್ರೈಸ್ತ ಪಾದ್ರಿಗಳಿಗೆ ಹಲ್ಲೆ ನಡೆಸಿದ ಬಿಜೆಪಿ ಪರ ದುಷ್ಕರ್ಮಿಗಳು; 5 ದಿನವಾದರೂ ಬಂಧನವಿಲ್ಲ

- Advertisement -
- Advertisement -

ಮಧ್ಯಪ್ರದೇಶದ ಜಬಲ್ಪುರದಲ್ಲಿ ಇಬ್ಬರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪಾದ್ರಿಗಳ ಮೇಲೆ ಬಿಜೆಪಿ ಪರ ಸಂಘಟನೆಯಾದ ಬಜರಂಗದಳ ಮತ್ತು ವಿಎಚ್‌ಪಿಯ ದುಷ್ಕರ್ಮಿಗಳು ಸೋಮವಾರ ದಾಳಿ ನಡೆಸಿರುವ ಘಟನೆ ನಡೆದಿದೆ. ಪೊಲೀಸರ ಮುಂದೆಯೆ ಈ ಹಲ್ಲೆ ನಡೆದಿದ್ದರೂ, ಪೊಲೀಸರು ಈ ದುಷ್ಕರ್ಮಿಗಳ ವಿರುದ್ಧ ಮೂರು ದಿನಗಳ ಎಫ್‌ಐಆರ್‌ ದಾಖಲಿಸಿದ್ದಾರೆ. ಅದಾಗ್ಯೂ, ಘಟನೆ ನಡೆದು 5 ದಿನಗಳಾದರೂ ಪ್ರಕರಣದಲ್ಲಿ ಪೊಲೀಸರು ಇಲ್ಲಿವರೆಗೆ ಯಾವುದೆ ದುಷ್ಕರ್ಮಿಗಳ ಬಂಧನ ಮಾಡಿಲ್ಲ ಎಂದು ವರದಿಯಾಗಿದೆ. ಮಧ್ಯಪ್ರದೇಶ

ಮಧ್ಯಪ್ರದೇಶದ ಮಾಂಡ್ಲಾ ಜಿಲ್ಲೆಯಿಂದ ಸುಮಾರು 50 ಕ್ರಿಶ್ಚಿಯನ್ ಯಾತ್ರಿಕರು ಸೋಮವಾರ ಒಂದು ದಿನದ ಚರ್ಚ್ ಭೇಟಿಗಾಗಿ ಜಬಲ್ಪುರ ತಲುಪಿದ್ದರು. ಈ ವೇಳೆ ಬಿಜೆಪಿ ಪರ ಸಂಘಟನೆಗಳ ದುಷ್ಕರ್ಮಿಗಳ ಗುಂಪು ಯಾತ್ರಿಕರ ಮೇಲೆ ಧಾರ್ಮಿಕ ಮತಾಂತರದ ಆರೋಪ ಹೊರಿಸಿ ಅವರು ಪ್ರಯಾಣಿಸುತ್ತಿದ್ದ ಬಸ್ ಅನ್ನು ತಡೆದು ಅವರನ್ನು ರಂಜಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮಧ್ಯಪ್ರದೇಶ

ಈ ವೇಳೆ ಅವರನ್ನು ಪೊಲೀಸ್‌ ಠಾಣೆಯಲ್ಲಿ ಆರು ಗಂಟೆಗಳ ಕಾಲ ಬಂಧಿಸಲಾಗಿತ್ತ. ಆದಾಗ್ಯೂ, ಜಬಲ್ಪುರ ಡಯೋಸಿಸ್‌ನ ವಿಕಾರ್ ಜನರಲ್ ಫಾದರ್ ಡೇವಿಸ್ ಜಾರ್ಜ್ ಮತ್ತು ಡಯೋಸಿಸ್‌ನ ಪ್ರೊಕ್ಯುರೇಟರ್ ಫಾದರ್ ಜಾರ್ಜ್ ಥಾಮಸ್ ಅವರು ಯಾತ್ರಿಕರಿಗೆ ಸಹಾಯ ಮಾಡಲು ಪೊಲೀಸ್ ಠಾಣೆಗೆ ತಲುಪಿದಾಗ, ಅವರ ಮೇಲೆ ಬಿಜೆಪಿ ಪರ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸುವ ವೇಳೆ ದುಷ್ಕರ್ಮಿಗಳ ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಡಾ ಕೂಗಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಬಂಧನಗಳನ್ನು ನಡೆದಿಲ್ಲವಾದರೂ, ಕೇರಳದ ಇಬ್ಬರು ಸಂಸತ್ ಸದಸ್ಯರಾದ ಕೋಡಿಕುನ್ನಿಲ್ ಸುರೇಶ್ ಮತ್ತು ದೀನ್ ಕುರಿಯಾಕೋಸ್ ಅವರು ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ನಂತರ ಪೊಲೀಸರು ಏಪ್ರಿಲ್ 3 ರಂದು ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರಿಗೆ ಹಲ್ಲೆಯನ್ನು ತಡೆಯಲು, ಎಫ್‌ಐಆರ್ ಅನ್ನು ಬೇಗ ದಾಖಲಿಸಲು ಮತ್ತು ದಾಳಿಕೋರರನ್ನು ಬಂಧಿಸಲು ಏಕೆ ಸಾಧ್ಯವಾಗಲಿಲ್ಲ ಎಂಬ ನ್ಯೂಸ್ ಲಾಂಡ್ರಿ ಜಬಲ್ಪುರ್ ಪ್ರಶ್ನೆಗೆ ಉತ್ತರಿಸಿರುವ ರಂಜಿ ಪ್ರದೇಶದ ನಗರ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಸಾಹು, “ನಾವು ಮಧ್ಯಪ್ರವೇಶಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. ಶೀಘ್ರದಲ್ಲೇ ನಾವು ಘಟನೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಿದ್ದೇವೆ” ಎಂದು ಹೇಳಿದ್ದಾರೆ.

ಆಪಾದಿತ ದಾಳಿಯ ಸಮಯದಲ್ಲಿ ಪೊಲೀಸರು ಇದ್ದರು ಆದರೆ ಅವರ ಹಸ್ತಕ್ಷೇಪ ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿತ್ತು ಎಂದು ತನಗೆ ತಿಳಿದಿಲ್ಲ ಎಂದು ಫಾದರ್ ಜಾರ್ಜ್ ನ್ಯೂಸ್ ಲಾಂಡ್ರಿಗೆ ತಿಳಿಸಿದ್ದಾರೆ. “ಪೊಲೀಸ್ ಹಸ್ತಕ್ಷೇಪ ಹೆಚ್ಚು ಪರಿಣಾಮಕಾರಿಯಾಗಿರಬೇಕಿತ್ತು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಹೇಗೆ ಹಲ್ಲೆ ನಡೆಸಲು ಸಾಧ್ಯ” ಎಂದು ಫಾದರ್ ಜಾರ್ಜ್ ಹೇಳಿದ್ದಾರೆ.

ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿಯ ನಾಯಕ ಘಟನೆಯನ್ನು ಸಮರ್ಥಿಸಿಕೊಂಡಿದ್ದು, ಧಾರ್ಮಿಕ ಮತಾಂತರಕ್ಕಾಗಿ ಬುಡಕಟ್ಟು ಜನರನ್ನು ಜಬಲ್ಪುರಕ್ಕೆ ಕರೆತರಲಾಗುತ್ತಿದೆ ಎಂಬ ಮಾಹಿತಿ ತಮಗೆ ಬಂದಿದೆ ಎಂದು ಹೇಳಿದ್ದಾರೆ. “ಬುಡಕಟ್ಟು ಜನರನ್ನು ಬೆದರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವಂತೆ ಪ್ರಚೋದಿಸಲಾಯಿತು. ಇದರ ನಂತರ, ವಿಎಚ್‌ಪಿ ಮತ್ತು ಬಜರಂಗದಳ ಸದಸ್ಯರು ಮಧ್ಯಪ್ರವೇಶಿಸಿ ಯಾತ್ರಿಕರನ್ನು ಪೊಲೀಸ್ ಠಾಣೆಗೆ ಕರೆತಂದರು” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಯಾತ್ರಿಕರು ಈ ಹೇಳಿಕೆಯನ್ನು ನಿರಾಕರಿಸಿದ್ದು, ದುಷ್ಕರ್ಮಿಗಳು ಯಾವುದೇ ಕಾರಣವಿಲ್ಲದೆ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. “ಯಾತ್ರಿಕರ ಭೇಟಿಯ ಸಮಯದಲ್ಲಿ ಯಾವುದೇ ಮತಾಂತರ ನಡೆಯುತ್ತಿರಲಿಲ್ಲ. ನನ್ನ ಪೋಷಕರು ಕ್ರಿಶ್ಚಿಯನ್ನರು, ಮತ್ತು ನಾನು ಹುಟ್ಟಿನಿಂದಲೇ ಕ್ರಿಶ್ಚಿಯನ್ ಆಗಿದ್ದೇನೆ. ಧಾರ್ಮಿಕ ಪ್ರವಾಸದ ಭಾಗವಾಗಿ ನಾವು ಜಬಲ್ಪುರದ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಆದರೆ ಈ ದುಷ್ಕರ್ಮಿಗಳು ಕಥೆಗಳನ್ನು ಹೆಣೆದು, ನಮ್ಮನ್ನು ಮತಾಂತರಕ್ಕಾಗಿ ಇಲ್ಲಿಗೆ ಕರೆತರಲಾಗಿದೆ ಎಂದು ಹೇಳಿದ್ದಾರೆ. ಅವರು ಪೊಲೀಸರ ಸಹಾಯದಿಂದ ನಮ್ಮನ್ನು ತಡೆದು ರಂಝಿ ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ನಮ್ಮನ್ನು ಗಂಟೆಗಟ್ಟಲೆ ಬಂಧಿಸಲಾಯಿತು.” ಎಂದು ಯಾತ್ರಿಕರೊಬ್ಬರು ಹೇಳಿದ್ದಾರೆ.

ಮತ್ತೊಬ್ಬ ಯಾತ್ರಿಕರು ಮಾತನಾಡಿ, “ನನ್ನ ಕುಟುಂಬವು ಮೂರು ತಲೆಮಾರುಗಳಿಂದ ಕ್ರಿಶ್ಚಿಯನ್ ಆಗಿದೆ. ನಾನು ಹುಟ್ಟಿನಿಂದ ಕ್ರಿಶ್ಚಿಯನ್. ಪರಿಸ್ಥಿತಿ ಹೀಗಿರುವಾಗ ನನ್ನನ್ನು ಮತ್ತೆ ಹೇಗೆ ಮತಾಂತರಿಸಲು ಸಾಧ್ಯ? ನಮ್ಮಲ್ಲಿ ಸುಮಾರು 50 ಜನರು ಮಾಂಡ್ಲಾದಿಂದ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಲು ಬಂದಿದ್ದೇವೆ. ಪೊಲೀಸರು ನಮ್ಮ ಹೆಸರುಗಳನ್ನು ಬರೆದುಕೊಂಡು ಜಬಲ್‌ಪುರಕ್ಕೆ ಏಕೆ ಬಂದಿದ್ದೇವೆ ಎಂದು ಕೇಳಿದ್ದಾರೆ. ಇದು ಕಿರುಕುಳ ಅಲ್ಲದೆ ಇನ್ನೇನೂ ಅಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...