Homeಮುಖಪುಟಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ ನಂತರ 11 ಮನೆಗಳನ್ನು ಕೆಡವಿದ ಪೊಲೀಸರು

ಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ ನಂತರ 11 ಮನೆಗಳನ್ನು ಕೆಡವಿದ ಪೊಲೀಸರು

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ 11 ವ್ಯಕ್ತಿಗಳು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿಕೊಂಡಿದ್ದ ಮೆನಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ಮಾಂಸಕ್ಕಾಗಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಸುಳಿವು ದೊರೆತ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

“ಪೊಲೀಸ್ ತಂಡ ಅಲ್ಲಿಗೆ ಧಾವಿಸಿತು, ಆರೋಪಿಗಳ ಹಿತ್ತಲಿನಲ್ಲಿ ಕಟ್ಟಿಹಾಕಲಾಗಿದ್ದ 150 ಹಸುಗಳನ್ನು ನಾವು ವಶಪಡಿಸಕೊಂಡಿದ್ದೇವೆ. ಎಲ್ಲ 11 ಆರೋಪಿಗಳ ಮನೆಗಳಲ್ಲಿನ ರೆಫ್ರಿಜರೇಟರ್‌ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಕೊಠಡಿಯಲ್ಲಿ ಪ್ರಾಣಿಗಳ ಕೊಬ್ಬು, ಜಾನುವಾರು ಚರ್ಮ ಮತ್ತು ಮೂಳೆಗಳನ್ನು ಕೂಡ ಪತ್ತೆ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಸರ್ಕಾರಿ ಪಶುವೈದ್ಯರು ವಶಪಡಿಸಿಕೊಂಡ ಮಾಂಸವು ದನದ ಮಾಂಸ ಎಂದು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಹೈದರಾಬಾದ್‌ಗೆ ಮಾದರಿಗಳನ್ನು ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿರುವುದರಿಂದ ಅವುಗಳನ್ನು ನೆಲಸಮ ಮಾಡಲಾಗಿದೆ ಎಂದು ಎಸ್‌ಪಿ ಹೇಳಿದರು.

ಶುಕ್ರವಾರ ರಾತ್ರಿ ಹಸುಗಳು ಮತ್ತು ದನದ ಮಾಂಸವನ್ನು ವಶಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದರು. ಉಳಿದ 10 ಮಂದಿಗಾಗಿ ಹುಡುಕಾಟ ನಡೆಸುತ್ತಿರುವಾಗ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಇಬ್ಬರು ಆರೋಪಿಗಳ ಕ್ರಿಮಿನಲ್ ಇತಿಹಾಸವನ್ನು ಸಂಗ್ರಹಿಸಲಾಗಿದ್ದು, ಉಳಿದ ವ್ಯಕ್ತಿಗಳ ಪೂರ್ವಾಪರಗಳನ್ನು ಕಂಡುಹಿಡಿಯಲು ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳೆಲ್ಲರೂ ಮುಸ್ಲಿಮರು ಎಂದು ಪೊಲೀಸರು ಹೇಳಿದ್ದಾರೆ.

ಪೊಲೀಸರ ವರ್ತನೆಗೆ ಪ್ರಶಾಂತ್ ಭೂಷಣ್ ವಿರೋಧ:

ಗೋಮಾಂಸ ಪತ್ತೆಯಾಯಿತು ಎಂಬ ಕಾರಣಕ್ಕೆ ಮನೆಗಳನ್ನು ಧ್ವಂಸ ಮಾಡಿರುವ ಪ್ರಕರಣಕ್ಕೆ ಆಕ್ರೋಶ ಹೊರಹಾಕಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಇದು ಫಾರೆಸ್ಟ್‌ ಫ್ಯಾಸಿಸ್ಟ್ ಆಳ್ವಿಕೆ! ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಇದನ್ನೂ ಓದಿ; ‘ಇಂಡಿಯಾ ಬ್ಲಾಕ್‌’ನ ಐತಿಹಾಸಿಕ ಗೆಲುವು ಬಿಜೆಪಿಯನ್ನು 240 ಸ್ಥಾನಗಳಿಗೆ ಸೀಮಿತಗೊಳಿಸಿದೆ: ಎಂಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...