Homeಮುಖಪುಟಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಪೊಲೀಸರು ಪತ್ರಕರ್ತರ ಗುಂಪನ್ನು ಬಂಧಿಸಿ ಅರೆಬೆತ್ತಲಾಗಿ ನಿಲ್ಲಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೈರಲ್ ಪೋಸ್ಟ್ ಹರಿದಾಡುತ್ತಿದೆ.

ಪೋಸ್ಟ್ ಜೊತೆಗೆ ಹಂಚಿಕೊಂಡಿರುವ ಫೋಟೋದಲ್ಲಿ ಎಂಟು ಮಂದಿ ಇದ್ದು, ಒಳ ಉಡುಪು ಮಾತ್ರ ಧರಿಸಿ ಅರೆಬೆತ್ತಲೆಯಾಗಿ ನಿಂತಿದ್ದಾರೆ. ಏಪ್ರಿಲ್ 2 ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಅವರ ಪುತ್ರ ಗುರುದತ್ ವಿರುದ್ಧ ಅಸಭ್ಯವಾಗಿ ಟೀಕಿಸಲಾಗಿದೆ ಎಂದು ಆರೋಪಿಸಿ ಬಂಧನಕ್ಕೊಳಕ್ಕಾಗಿರುವ ರಂಗಭೂಮಿ ಕಲಾವಿದ ನೀರಜ್ ಕುಂದರ್ ಕುರಿತು ವರದಿ ಮಾಡಲು ಹೋಗಿದ್ದೆ” ಎಂದು ಫೋಟೋದಲ್ಲಿ ಗುರುತಿಸಲ್ಪಟ್ಟಿರುವ ಸ್ಥಳೀಯ ಪತ್ರಕರ್ತ, ಯೂಟ್ಯೂಬರ್ ಕನಿಷ್ಕ್ ತಿವಾರಿ ಹೇಳಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರ ಬಂಧನದ ಬಗ್ಗೆ ವಿಚಾರಿಸಲು ನಾವು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆದರೆ ಪೊಲೀಸರು ನಮ್ಮನ್ನು ಬಂಧಿಸಿದರು. ಸುಮಾರು 18 ಗಂಟೆಗಳ ಕಾಲ ಲಾಕ್‌ಅಪ್‌ನಲ್ಲಿ ಇರಿಸಿದರು. ನಮ್ಮನ್ನು ಥಳಿಸಲಾಯಿತು ಹಾಗೂ ನಿಂದಿಸಲಾಯಿತು. ನಮ್ಮ ಬಟ್ಟೆಗಳನ್ನು ಕಳಚುವಂತೆ ಹೇಳಲಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನೀರಜ್ ಕುಂದರ್ ಅವರು ಸಿಧಿ ಜಿಲ್ಲೆಯ ಇಂದ್ರಾವತಿ ನಾಟ್ಯ ಸಮಿತಿಯ ನಿರ್ದೇಶಕರಾಗಿದ್ದು, ವಿಂಧ್ಯ ಕಲೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ಕುಂದರ್ ಅವರು ಅನುರಾಗ್ ಮಿಶ್ರಾ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿಯನ್ನು ರಚಿಸಿದ್ದರು. ಬಂಧನದ ನಂತರ ಕುಂದರ್ ಅವರ ಪೋಷಕರು ಮತ್ತು ತಿವಾರಿ ಸೇರಿದಂತೆ ಅನೇಕರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ನೀರಜ್ ಕುಂದರ್ ಅವರನ್ನು ಬೆಂಬಲಿಸಿ ಪೊಲೀಸ್ ಠಾಣೆಗೆ ತೆರಳಿದ ಮತ್ತೊಬ್ಬ ರಂಗಭೂಮಿ ಕಲಾವಿದ ನರೇಂದ್ರ ಬಹದ್ದೂರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ತಮ್ಮೆಲ್ಲರನ್ನು ವಿವಸ್ತ್ರಗೊಳಿಸಿ ಥಳಿಸಲಾಯಿತು” ಎಂದಿದ್ದಾರೆ.

“ನಾವು ಮನವಿ ಪತ್ರ ನೀಡಲು ಹೋಗಿದ್ದೆವು. ಆದರೆ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು. ಪತ್ರಕರ್ತ ಕನಿಷ್ಕ್ ತಿವಾರಿ ಅವರನ್ನೂ ಥಳಿಸಲಾಗಿದೆ. ಕನಿಷ್ಕ್ ಅವರು ಸ್ಥಳೀಯ ಪೊಲೀಸರು ಮತ್ತು ಶಾಸಕ ಕೇದಾರನಾಥ್ ಶುಕ್ಲಾ ಅವರ ಹಗರಣಗಳನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ವಿರೋಧ ಎದುರಿಸುತ್ತಿದ್ದಾರೆ” ಎಂದು ನರೇಂದ್ರ ಬಹುದ್ದೂರ್‌ ಸಿಂಗ್‌ ತಿಳಿಸಿದ್ದಾರೆ.

‘ದಿ ಕ್ವಿಂಟ್‌’ನೊಂದಿಗೆ ಮಾತನಾಡಿರುವ ಸಿಧಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮುಖೇಶ್ ಕುಮಾರ್ ಶ್ರೀವಾಸ್ತವ, “ಯಾವುದೇ ಪತ್ರಕರ್ತರು ಇರಲಿಲ್ಲ. ಆದರೆ ದುಷ್ಕರ್ಮಿಗಳನ್ನು ಬಂಧಿಸಲಾಯಿತು” ಎಂದಿದ್ದಾರೆ.

“ಏಪ್ರಿಲ್ 2 ರಂದು ಈ ಘಟನೆ ನಡೆದಿದೆ. ಕನಿಷ್ಕ್ ತಿವಾರಿ ಮತ್ತು ಇತರ ಕೆಲವು ಜನರು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದರು. ಒಬ್ಬ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಬಗ್ಗೆ ಗಲಾಟೆಯನ್ನು ಮಾಡಿದರು. ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಕನಿಷ್ಕ್ ಮತ್ತು ಇತರರನ್ನು ಬಂಧಿಸಲಾಯಿತು. ಬಳಿಕ ಏಪ್ರಿಲ್ 3 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಮುಖೇಶ್ ಕುಮಾರ್‌ ತಿಳಿಸಿದ್ದಾರೆ.

ಕನಿಷ್ಕ್ ಮತ್ತು ಇತರರು ಅರೆಬೆತ್ತಲೆಯಾಗಿ ನಿಲ್ಲಿಸಿರುವ ಫೋಟೋ ವೈರಲ್‌ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಶ್ರೀವಾಸ್ತವ, “ಅವರ ಬಳಿ ಯಾವುದಾದರೂ ಆಯುಧ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ಅನುಸರಿಸುವ ಸಾಮಾನ್ಯ ವಿಧಾನ ಇದಾಗಿದೆ. ಫೋಟೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೋಟೋ ಕ್ಲಿಕ್ಕಿಸಿ ಹಂಚಿದವರು ಯಾರೆಂದು ಶೀಘ್ರ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದಾಗ್ಯೂ, ಪೊಲೀಸರ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. ನೀರಜ್ ಕುಂದರ್ ಬಂಧನದ ಬೆಳವಣಿಗೆಗಳನ್ನು ವರದಿ ಮಾಡಲು ಹೋಗಿದ್ದಾಗಿ ಕನಿಷ್ಕ್ ತಿವಾರಿಯವರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಿ ಅವಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ನಾನೊಬ್ಬ ಪತ್ರಕರ್ತ. ರಾಜಕಾರಣಿಗಳ ಬಗ್ಗೆ ವಿಶೇಷವಾಗಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಇಲ್ಲಿನ ಪೊಲೀಸ್ ಇಲಾಖೆ ಬಗ್ಗೆ ಕಟುವಾಗಿ ಪ್ರಶ್ನಿಸುತ್ತಿದ್ದೇನೆ. ನನ್ನ ಯೂಟ್ಯೂಬ್ ಚಾನೆಲ್ mpsandeshnews24 170K ಚಂದಾದಾರರನ್ನು ಹೊಂದಿದೆ. ವಿಮರ್ಶಾತ್ಮಕ ಪತ್ರಿಕೋದ್ಯಮದ ಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಕನಿಷ್ಕ್‌ ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...