Homeಮುಖಪುಟಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಪೊಲೀಸರು ಪತ್ರಕರ್ತರ ಗುಂಪನ್ನು ಬಂಧಿಸಿ ಅರೆಬೆತ್ತಲಾಗಿ ನಿಲ್ಲಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೈರಲ್ ಪೋಸ್ಟ್ ಹರಿದಾಡುತ್ತಿದೆ.

ಪೋಸ್ಟ್ ಜೊತೆಗೆ ಹಂಚಿಕೊಂಡಿರುವ ಫೋಟೋದಲ್ಲಿ ಎಂಟು ಮಂದಿ ಇದ್ದು, ಒಳ ಉಡುಪು ಮಾತ್ರ ಧರಿಸಿ ಅರೆಬೆತ್ತಲೆಯಾಗಿ ನಿಂತಿದ್ದಾರೆ. ಏಪ್ರಿಲ್ 2 ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಅವರ ಪುತ್ರ ಗುರುದತ್ ವಿರುದ್ಧ ಅಸಭ್ಯವಾಗಿ ಟೀಕಿಸಲಾಗಿದೆ ಎಂದು ಆರೋಪಿಸಿ ಬಂಧನಕ್ಕೊಳಕ್ಕಾಗಿರುವ ರಂಗಭೂಮಿ ಕಲಾವಿದ ನೀರಜ್ ಕುಂದರ್ ಕುರಿತು ವರದಿ ಮಾಡಲು ಹೋಗಿದ್ದೆ” ಎಂದು ಫೋಟೋದಲ್ಲಿ ಗುರುತಿಸಲ್ಪಟ್ಟಿರುವ ಸ್ಥಳೀಯ ಪತ್ರಕರ್ತ, ಯೂಟ್ಯೂಬರ್ ಕನಿಷ್ಕ್ ತಿವಾರಿ ಹೇಳಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರ ಬಂಧನದ ಬಗ್ಗೆ ವಿಚಾರಿಸಲು ನಾವು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆದರೆ ಪೊಲೀಸರು ನಮ್ಮನ್ನು ಬಂಧಿಸಿದರು. ಸುಮಾರು 18 ಗಂಟೆಗಳ ಕಾಲ ಲಾಕ್‌ಅಪ್‌ನಲ್ಲಿ ಇರಿಸಿದರು. ನಮ್ಮನ್ನು ಥಳಿಸಲಾಯಿತು ಹಾಗೂ ನಿಂದಿಸಲಾಯಿತು. ನಮ್ಮ ಬಟ್ಟೆಗಳನ್ನು ಕಳಚುವಂತೆ ಹೇಳಲಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನೀರಜ್ ಕುಂದರ್ ಅವರು ಸಿಧಿ ಜಿಲ್ಲೆಯ ಇಂದ್ರಾವತಿ ನಾಟ್ಯ ಸಮಿತಿಯ ನಿರ್ದೇಶಕರಾಗಿದ್ದು, ವಿಂಧ್ಯ ಕಲೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ಕುಂದರ್ ಅವರು ಅನುರಾಗ್ ಮಿಶ್ರಾ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿಯನ್ನು ರಚಿಸಿದ್ದರು. ಬಂಧನದ ನಂತರ ಕುಂದರ್ ಅವರ ಪೋಷಕರು ಮತ್ತು ತಿವಾರಿ ಸೇರಿದಂತೆ ಅನೇಕರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ನೀರಜ್ ಕುಂದರ್ ಅವರನ್ನು ಬೆಂಬಲಿಸಿ ಪೊಲೀಸ್ ಠಾಣೆಗೆ ತೆರಳಿದ ಮತ್ತೊಬ್ಬ ರಂಗಭೂಮಿ ಕಲಾವಿದ ನರೇಂದ್ರ ಬಹದ್ದೂರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ತಮ್ಮೆಲ್ಲರನ್ನು ವಿವಸ್ತ್ರಗೊಳಿಸಿ ಥಳಿಸಲಾಯಿತು” ಎಂದಿದ್ದಾರೆ.

“ನಾವು ಮನವಿ ಪತ್ರ ನೀಡಲು ಹೋಗಿದ್ದೆವು. ಆದರೆ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು. ಪತ್ರಕರ್ತ ಕನಿಷ್ಕ್ ತಿವಾರಿ ಅವರನ್ನೂ ಥಳಿಸಲಾಗಿದೆ. ಕನಿಷ್ಕ್ ಅವರು ಸ್ಥಳೀಯ ಪೊಲೀಸರು ಮತ್ತು ಶಾಸಕ ಕೇದಾರನಾಥ್ ಶುಕ್ಲಾ ಅವರ ಹಗರಣಗಳನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ವಿರೋಧ ಎದುರಿಸುತ್ತಿದ್ದಾರೆ” ಎಂದು ನರೇಂದ್ರ ಬಹುದ್ದೂರ್‌ ಸಿಂಗ್‌ ತಿಳಿಸಿದ್ದಾರೆ.

‘ದಿ ಕ್ವಿಂಟ್‌’ನೊಂದಿಗೆ ಮಾತನಾಡಿರುವ ಸಿಧಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮುಖೇಶ್ ಕುಮಾರ್ ಶ್ರೀವಾಸ್ತವ, “ಯಾವುದೇ ಪತ್ರಕರ್ತರು ಇರಲಿಲ್ಲ. ಆದರೆ ದುಷ್ಕರ್ಮಿಗಳನ್ನು ಬಂಧಿಸಲಾಯಿತು” ಎಂದಿದ್ದಾರೆ.

“ಏಪ್ರಿಲ್ 2 ರಂದು ಈ ಘಟನೆ ನಡೆದಿದೆ. ಕನಿಷ್ಕ್ ತಿವಾರಿ ಮತ್ತು ಇತರ ಕೆಲವು ಜನರು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದರು. ಒಬ್ಬ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಬಗ್ಗೆ ಗಲಾಟೆಯನ್ನು ಮಾಡಿದರು. ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಕನಿಷ್ಕ್ ಮತ್ತು ಇತರರನ್ನು ಬಂಧಿಸಲಾಯಿತು. ಬಳಿಕ ಏಪ್ರಿಲ್ 3 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಮುಖೇಶ್ ಕುಮಾರ್‌ ತಿಳಿಸಿದ್ದಾರೆ.

ಕನಿಷ್ಕ್ ಮತ್ತು ಇತರರು ಅರೆಬೆತ್ತಲೆಯಾಗಿ ನಿಲ್ಲಿಸಿರುವ ಫೋಟೋ ವೈರಲ್‌ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಶ್ರೀವಾಸ್ತವ, “ಅವರ ಬಳಿ ಯಾವುದಾದರೂ ಆಯುಧ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ಅನುಸರಿಸುವ ಸಾಮಾನ್ಯ ವಿಧಾನ ಇದಾಗಿದೆ. ಫೋಟೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೋಟೋ ಕ್ಲಿಕ್ಕಿಸಿ ಹಂಚಿದವರು ಯಾರೆಂದು ಶೀಘ್ರ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದಾಗ್ಯೂ, ಪೊಲೀಸರ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. ನೀರಜ್ ಕುಂದರ್ ಬಂಧನದ ಬೆಳವಣಿಗೆಗಳನ್ನು ವರದಿ ಮಾಡಲು ಹೋಗಿದ್ದಾಗಿ ಕನಿಷ್ಕ್ ತಿವಾರಿಯವರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಿ ಅವಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ನಾನೊಬ್ಬ ಪತ್ರಕರ್ತ. ರಾಜಕಾರಣಿಗಳ ಬಗ್ಗೆ ವಿಶೇಷವಾಗಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಇಲ್ಲಿನ ಪೊಲೀಸ್ ಇಲಾಖೆ ಬಗ್ಗೆ ಕಟುವಾಗಿ ಪ್ರಶ್ನಿಸುತ್ತಿದ್ದೇನೆ. ನನ್ನ ಯೂಟ್ಯೂಬ್ ಚಾನೆಲ್ mpsandeshnews24 170K ಚಂದಾದಾರರನ್ನು ಹೊಂದಿದೆ. ವಿಮರ್ಶಾತ್ಮಕ ಪತ್ರಿಕೋದ್ಯಮದ ಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಕನಿಷ್ಕ್‌ ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....