Homeಮುಖಪುಟಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

- Advertisement -
- Advertisement -

ಮಧ್ಯಪ್ರದೇಶದ ಪೊಲೀಸರು ಪತ್ರಕರ್ತರ ಗುಂಪನ್ನು ಬಂಧಿಸಿ ಅರೆಬೆತ್ತಲಾಗಿ ನಿಲ್ಲಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ವೈರಲ್ ಪೋಸ್ಟ್ ಹರಿದಾಡುತ್ತಿದೆ.

ಪೋಸ್ಟ್ ಜೊತೆಗೆ ಹಂಚಿಕೊಂಡಿರುವ ಫೋಟೋದಲ್ಲಿ ಎಂಟು ಮಂದಿ ಇದ್ದು, ಒಳ ಉಡುಪು ಮಾತ್ರ ಧರಿಸಿ ಅರೆಬೆತ್ತಲೆಯಾಗಿ ನಿಂತಿದ್ದಾರೆ. ಏಪ್ರಿಲ್ 2 ರಂದು ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

“ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಅವರ ಪುತ್ರ ಗುರುದತ್ ವಿರುದ್ಧ ಅಸಭ್ಯವಾಗಿ ಟೀಕಿಸಲಾಗಿದೆ ಎಂದು ಆರೋಪಿಸಿ ಬಂಧನಕ್ಕೊಳಕ್ಕಾಗಿರುವ ರಂಗಭೂಮಿ ಕಲಾವಿದ ನೀರಜ್ ಕುಂದರ್ ಕುರಿತು ವರದಿ ಮಾಡಲು ಹೋಗಿದ್ದೆ” ಎಂದು ಫೋಟೋದಲ್ಲಿ ಗುರುತಿಸಲ್ಪಟ್ಟಿರುವ ಸ್ಥಳೀಯ ಪತ್ರಕರ್ತ, ಯೂಟ್ಯೂಬರ್ ಕನಿಷ್ಕ್ ತಿವಾರಿ ಹೇಳಿರುವುದಾಗಿ ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರ ಬಂಧನದ ಬಗ್ಗೆ ವಿಚಾರಿಸಲು ನಾವು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದೆವು. ಆದರೆ ಪೊಲೀಸರು ನಮ್ಮನ್ನು ಬಂಧಿಸಿದರು. ಸುಮಾರು 18 ಗಂಟೆಗಳ ಕಾಲ ಲಾಕ್‌ಅಪ್‌ನಲ್ಲಿ ಇರಿಸಿದರು. ನಮ್ಮನ್ನು ಥಳಿಸಲಾಯಿತು ಹಾಗೂ ನಿಂದಿಸಲಾಯಿತು. ನಮ್ಮ ಬಟ್ಟೆಗಳನ್ನು ಕಳಚುವಂತೆ ಹೇಳಲಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನೀರಜ್ ಕುಂದರ್ ಅವರು ಸಿಧಿ ಜಿಲ್ಲೆಯ ಇಂದ್ರಾವತಿ ನಾಟ್ಯ ಸಮಿತಿಯ ನಿರ್ದೇಶಕರಾಗಿದ್ದು, ವಿಂಧ್ಯ ಕಲೆಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ವರದಿಗಳ ಪ್ರಕಾರ ಕುಂದರ್ ಅವರು ಅನುರಾಗ್ ಮಿಶ್ರಾ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿಯನ್ನು ರಚಿಸಿದ್ದರು. ಬಂಧನದ ನಂತರ ಕುಂದರ್ ಅವರ ಪೋಷಕರು ಮತ್ತು ತಿವಾರಿ ಸೇರಿದಂತೆ ಅನೇಕರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ನೀರಜ್ ಕುಂದರ್ ಅವರನ್ನು ಬೆಂಬಲಿಸಿ ಪೊಲೀಸ್ ಠಾಣೆಗೆ ತೆರಳಿದ ಮತ್ತೊಬ್ಬ ರಂಗಭೂಮಿ ಕಲಾವಿದ ನರೇಂದ್ರ ಬಹದ್ದೂರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ತಮ್ಮೆಲ್ಲರನ್ನು ವಿವಸ್ತ್ರಗೊಳಿಸಿ ಥಳಿಸಲಾಯಿತು” ಎಂದಿದ್ದಾರೆ.

“ನಾವು ಮನವಿ ಪತ್ರ ನೀಡಲು ಹೋಗಿದ್ದೆವು. ಆದರೆ ಪೊಲೀಸರು ನಮ್ಮ ಮೇಲೆ ಹಲ್ಲೆ ಮಾಡಲು ನಿರ್ಧರಿಸಿದ್ದರು. ಪತ್ರಕರ್ತ ಕನಿಷ್ಕ್ ತಿವಾರಿ ಅವರನ್ನೂ ಥಳಿಸಲಾಗಿದೆ. ಕನಿಷ್ಕ್ ಅವರು ಸ್ಥಳೀಯ ಪೊಲೀಸರು ಮತ್ತು ಶಾಸಕ ಕೇದಾರನಾಥ್ ಶುಕ್ಲಾ ಅವರ ಹಗರಣಗಳನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ವಿರೋಧ ಎದುರಿಸುತ್ತಿದ್ದಾರೆ” ಎಂದು ನರೇಂದ್ರ ಬಹುದ್ದೂರ್‌ ಸಿಂಗ್‌ ತಿಳಿಸಿದ್ದಾರೆ.

‘ದಿ ಕ್ವಿಂಟ್‌’ನೊಂದಿಗೆ ಮಾತನಾಡಿರುವ ಸಿಧಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮುಖೇಶ್ ಕುಮಾರ್ ಶ್ರೀವಾಸ್ತವ, “ಯಾವುದೇ ಪತ್ರಕರ್ತರು ಇರಲಿಲ್ಲ. ಆದರೆ ದುಷ್ಕರ್ಮಿಗಳನ್ನು ಬಂಧಿಸಲಾಯಿತು” ಎಂದಿದ್ದಾರೆ.

“ಏಪ್ರಿಲ್ 2 ರಂದು ಈ ಘಟನೆ ನಡೆದಿದೆ. ಕನಿಷ್ಕ್ ತಿವಾರಿ ಮತ್ತು ಇತರ ಕೆಲವು ಜನರು ಕೊತ್ವಾಲಿ ಪೊಲೀಸ್ ಠಾಣೆಗೆ ಹೋಗಿದ್ದರು. ಒಬ್ಬ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಬಗ್ಗೆ ಗಲಾಟೆಯನ್ನು ಮಾಡಿದರು. ಐಪಿಸಿ ಸೆಕ್ಷನ್ 151ರ ಅಡಿಯಲ್ಲಿ ಕನಿಷ್ಕ್ ಮತ್ತು ಇತರರನ್ನು ಬಂಧಿಸಲಾಯಿತು. ಬಳಿಕ ಏಪ್ರಿಲ್ 3 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಮುಖೇಶ್ ಕುಮಾರ್‌ ತಿಳಿಸಿದ್ದಾರೆ.

ಕನಿಷ್ಕ್ ಮತ್ತು ಇತರರು ಅರೆಬೆತ್ತಲೆಯಾಗಿ ನಿಲ್ಲಿಸಿರುವ ಫೋಟೋ ವೈರಲ್‌ ಆಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಶ್ರೀವಾಸ್ತವ, “ಅವರ ಬಳಿ ಯಾವುದಾದರೂ ಆಯುಧ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ಅನುಸರಿಸುವ ಸಾಮಾನ್ಯ ವಿಧಾನ ಇದಾಗಿದೆ. ಫೋಟೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ. ಫೋಟೋ ಕ್ಲಿಕ್ಕಿಸಿ ಹಂಚಿದವರು ಯಾರೆಂದು ಶೀಘ್ರ ಪತ್ತೆ ಹಚ್ಚಿ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಆದಾಗ್ಯೂ, ಪೊಲೀಸರ ಹೇಳಿಕೆಯನ್ನು ಅಲ್ಲಗಳೆಯಲಾಗಿದೆ. ನೀರಜ್ ಕುಂದರ್ ಬಂಧನದ ಬೆಳವಣಿಗೆಗಳನ್ನು ವರದಿ ಮಾಡಲು ಹೋಗಿದ್ದಾಗಿ ಕನಿಷ್ಕ್ ತಿವಾರಿಯವರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲೆಯ ಸ್ಥಳೀಯ ರಾಜಕಾರಣಿಗಳು ಮತ್ತು ಪೊಲೀಸರ ವಿರುದ್ಧ ವರದಿ ಮಾಡಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಿ ಅವಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ನಾನೊಬ್ಬ ಪತ್ರಕರ್ತ. ರಾಜಕಾರಣಿಗಳ ಬಗ್ಗೆ ವಿಶೇಷವಾಗಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಇಲ್ಲಿನ ಪೊಲೀಸ್ ಇಲಾಖೆ ಬಗ್ಗೆ ಕಟುವಾಗಿ ಪ್ರಶ್ನಿಸುತ್ತಿದ್ದೇನೆ. ನನ್ನ ಯೂಟ್ಯೂಬ್ ಚಾನೆಲ್ mpsandeshnews24 170K ಚಂದಾದಾರರನ್ನು ಹೊಂದಿದೆ. ವಿಮರ್ಶಾತ್ಮಕ ಪತ್ರಿಕೋದ್ಯಮದ ಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗಿದೆ” ಎಂದು ಕನಿಷ್ಕ್‌ ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...