Homeಮುಖಪುಟಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು - ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ...

ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

- Advertisement -
- Advertisement -

ಮಧ್ಯಪ್ರದೇಶದ ದೇವಾಸ್‌ನಲ್ಲಿ ಪೊಲೀಸ್ ಠಾಣೆಯಲ್ಲಿ ಸಾವಿಗೀಡಾದ ದಲಿತ ಯುವಕನ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಸರ್ಕಾರದ ಬೆಂಬಲವಿಲ್ಲದೆ ಇದು ಸಾಧ್ಯವಿಲ್ಲ ಎಂದು ಹೇಳಿದೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, “ಇದು ನಾಚಿಕೆಗೇಡಿನ ಮತ್ತು ಅತ್ಯಂತ ಖಂಡನೀಯವಾಗಿದ್ದು ಇಂತಹ ಘಟನೆಗಳನ್ನು ಕಾಂಗ್ರೆಸ್ ಸಹಿಸುವುದಿಲ್ಲ” ಎಂದು ಹೇಳಿದ್ದಾರೆ. ಮಧ್ಯಪ್ರದೇಶ ಪೊಲೀಸ್

ಕಾಂಗ್ರೆಸ್ ಪಕ್ಷವು “ಬಹುಜನರ” ಹಕ್ಕುಗಳಿಗಾಗಿ ಅವರು ನ್ಯಾಯ ಪಡೆಯುವವರೆಗೆ ಹೋರಾಟವನ್ನು ಮುಂದುವರೆಸಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಒಂದೆಡೆ, ಮಧ್ಯಪ್ರದೇಶದ ದೇವಾಸ್‌ನಲ್ಲಿ ದಲಿತ ಯುವಕನನ್ನು ಪೊಲೀಸ್ ಕಸ್ಟಡಿಯಲ್ಲಿ ಕೊಲ್ಲಲಾಯಿತು. ಮತ್ತೊಂದೆಡೆ, ಒಡಿಶಾದ ಬಾಲಸೋರ್‌ನಲ್ಲಿ ಬುಡಕಟ್ಟು ಮಹಿಳೆಯರನ್ನು ಮರಗಳಿಗೆ ಕಟ್ಟಿ ಥಳಿಸಲಾಗಿದೆ. ಈ ಎರಡೂ ಘಟನೆಗಳು ದುಃಖಕರ, ನಾಚಿಕೆಗೇಡಿನ ಮತ್ತು ಅತ್ಯಂತ ಖಂಡನೀಯ,” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿಯ ಮನುವಾದಿ ಚಿಂತನೆಯಿಂದಾಗಿ, ಅವರ ಆಡಳಿತದ ರಾಜ್ಯಗಳಲ್ಲಿ ಇಂತಹ ಘಟನೆಗಳು ಒಂದರ ಹಿಂದೆ ಒಂದರಂತೆ ನಡೆಯುತ್ತಿವೆ. ಇವೆಲ್ಲಾ ಸರ್ಕಾರದ ಬೆಂಬಲವಿಲ್ಲದೆ ಇದು ಸಾಧ್ಯವಿಲ್ಲ. ದೇಶದ ಬಹುಜನರ ವಿರುದ್ಧದ ಇಂತಹ ಅನಾಗರಿಕತೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ. ಮಧ್ಯಪ್ರದೇಶ ಪೊಲೀಸ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಘಟನೆಯನ್ನು ಖಂಡಿಸಿದ್ದು, “ಬಾಬಾಸಾಹೇಬ್ ಅಂಬೇಡ್ಕರ್ ಅವರ ಅವಮಾನ ಮತ್ತು ದುರ್ಬಲ ವರ್ಗಗಳ ಮೇಲಿನ ದಬ್ಬಾಳಿಕೆಯು ಬಿಜೆಪಿಯ ಆಡಳಿತದ ಮೂಲ ಮಂತ್ರ” ಎಂದು ಆರೋಪಿಸಿದ್ದಾರೆ. ದೇವಾಸ್‌ನಲ್ಲಿ ಪೊಲೀಸ್ ಕಸ್ಟಡಿ ವೇಳೆ ದಲಿತ ಯುವಕನ ಸಾವು ಅತ್ಯಂತ ಗಂಭೀರವಾಗಿದೆ ಎಂದು ಅವರು ಹೇಳಿದರು.

ಪೊಲೀಸರ ದೌರ್ಜನ್ಯದಿಂದ ಯುವಕ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಈ ಹಿಂದೆ, ಪರ್ಭಾನಿ (ಮಹಾರಾಷ್ಟ್ರ)ಯ ದಲಿತ ಕುಟುಂಬಗಳ ಮೇಲೆ ದೌರ್ಜನ್ಯ ಎಸಗಿ ಪೊಲೀಸ್ ಕಸ್ಟಡಿಯಲ್ಲಿ ದಲಿತ ಯುವಕನ ಸಾವಿಗೀಡಾಗಿದ್ದರು. ಬಿಜೆಪಿ ಆಡಳಿತದಲ್ಲಿ ದಲಿತರು, ಆದಿವಾಸಿಗಳು ಮತ್ತು ಶೋಷಿತರಂತಹ ದುರ್ಬಲ ವರ್ಗಗಳನ್ನು ದಮನ ಮಾಡಲು ಪೊಲೀಸರಿಗೆ ಮುಕ್ತ ಹಸ್ತ ದೊರೆತಂತಿದೆ ಎಂದು ಪ್ರಿಯಾಂಕ ಹೇಳಿದ್ದಾರೆ.

ದೇವಾಸ್‌ ಘಟನೆಯ ಕೆಲವೇ ಗಂಟೆಗಳ ನಂತರ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ಮತ್ತು ಮಾಜಿ ಸಚಿವ ಸಜ್ಜನ್ ಸಿಂಗ್ ವರ್ಮಾ ನೇತೃತ್ವದಲ್ಲಿ ಪಕ್ಷದ ನಾಯಕರು ಘಟನೆಯ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ; 17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ

17 ತಿಂಗಳ ವೇತನ ಬಿಡುಗಡೆಗೆ ಇಮಾಮ್‌ಗಳ ಒತ್ತಾಯ: ಎಎಪಿಯಿಂದ ಅರ್ಚಕರಿಗೆ ಭತ್ಯೆ ಏರಿಕೆ ಭರವಸೆ ನಡುವೆ ಪ್ರತಿಭಟನೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...