Homeಚಳವಳಿಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ - ಈ ಸಮಾಜ...

ಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ – ಈ ಸಮಾಜ ಬದಲಾಗುವುದೆಂದು?

- Advertisement -
- Advertisement -

ಮಹಿಳೆಯರ ವಿಚಾರದಲ್ಲಿ ನಮ್ಮ ಸಮಾಜ ಇನ್ನು ಎಷ್ಟು ಹಿಂದುಳಿದಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿರುತ್ತದೆ. ಈ ಇಪ್ಪತ್ತೊಂದನೇ ಶತಮಾನದಲ್ಲಿಯೂ ಭಾರತದ ಹಲವು ಪುರುಷರ ತಲೆಗಳು ಕ್ರಿ.ಪೂ ಕಾಲದಂತೆಯೇ ಯೋಚಿಸುತ್ತವೆ ಎಂಬುದನ್ನು ಮಧ್ಯಪ್ರದೇಶದ ರಾಜಕಾರಣಿಗಳು ಸಾಬೀತುಪಡಿಸುತ್ತಿದ್ದಾರೆ. “ಯಾವುದೇ ಮಹಿಳೆಯು ಕೆಲಸಕ್ಕಾಗಿ ಮನೆಯಿಂದ ಹೊರಹೋದರೆ ಅವರು ತಾವಾಗಿಯೇ ಸರ್ಕಾರದ ಬಳಿ ನೋಂದಣಿ ಮಾಡಿಸಬೇಕು ಮತ್ತು ಸರ್ಕಾರ ಅವರನ್ನು ಟ್ಯ್ರಾಕ್ ಮಾಡಲಾಗುತ್ತದೆ” ಎಂದು ಅಲ್ಲಿನ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಪುರುಷಾಧಿಪತ್ಯ ವಿಚಾರದಲ್ಲಿ ನಾವೇನು ಕಡಿಮೆಯಿಲ್ಲವೆಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಖಂಡ “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ, ಹಾಗಿದ್ದಮೇಲೆ ಮದುವೆ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವುದೇಕೆ” ಎಂದು ಪ್ರಶ್ನಿಸುವ ಮೂಲಕ ತಮ್ಮ ಸನಾತನ ಕಸವನ್ನು ಹೊರಹಾಕಿದ್ದಾರೆ.

ಮಧ್ಯಪ್ರದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಮಹಿಳೆಯರನ್ನು ಮತ್ತಷ್ಟು ಬಂಧಿಯಾಗಿಸುವ ಹುನ್ನಾರದಲ್ಲಿ ನಿರತರಾಗಿವೆ. ಮಹಿಳೆಯರನ್ನು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಾಗಿಯೇ ನೋಡುತ್ತಿದ್ದಾರೆಯೇ ಹೊರತು ಮಹಿಳೆಯರು ಸಹ ಮನುಷ್ಯರು, ಅವರಿಗೆ ಭಾವನೆಗಳಿವೆ, ಅವರಿಗೂ ಸಮಾನ ಹಕ್ಕುಗಳಿವೆ ಎಂಬ ಕನಿಷ್ಠ ಜ್ಞಾನವನ್ನು ಈ ರಾಜಕಾರಣಿಗಳು ಮರೆತ್ತಿದ್ದಾರೆ.


ಇದನ್ನೂ ಓದಿ: ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ


ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹಿಳೆಯರ ಸುರಕ್ಷತೆಗಾಗಿ ಸಮ್ಮಾನ್ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಆ ವೇಳೆ ಮಹಿಳೆಯರು ಮನೆಯಿಂದ ಹೊರಗೆ ದುಡಿಯಲು ಹೋದರೆ ಅವರು ಸರ್ಕಾರದ ಬಳಿ ದಾಖಲು ಮಾಡಿಕೊಳ್ಳಬೇಕು. ಸರ್ಕಾರ ಅವರನ್ನು ನಿರಂತರವಾಗಿ ಟ್ಯ್ರಾಕ್ ಮಾಡುತ್ತದೆ ಎಂದಿದ್ದಾರೆ. ಅಂದರೆ ಮಹಿಳೆಯರ ರಕ್ಷಣೆಗಾಗಿ ಮೂಲಭೂತವಾಗಿ ಏನು ಮಾಡಬೇಕು ಎಂಬುದೇ ಸರ್ಕಾರಕ್ಕೆ ಗೊತ್ತಿಲ್ಲ. ಸರ್ಕಾರ, ಸಮಾಜ ಮತ್ತು ಸಂಪತ್ತಿನಲ್ಲಿ ಮಹಿಳೆಯರಿಗೆ ಸಮಪಾಲು ನೀಡಿದಾಗ ಮಾತ್ರ ಅವರ ರಕ್ಷಣೆ ಸಾಧ್ಯ ಎಂದು ಮಹಿಳಾ ಸಂಘಟನೆಗಳು ಆಗ್ರಹಿಸುತ್ತಿವೆ. ಆದರೆ ಸರ್ಕಾರ ಮಾತ್ರ ಅವರನ್ನು ಟ್ಯ್ರಾಕ್ ಮಾಡುತ್ತೇವೆ ಎನ್ನುತ್ತದೆ.

ಇನ್ನು ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಪಿಡಬ್ಲೂಡಿ ಸಚಿವರಾಗಿದ್ದ, ಮಾಜಿ ಸಿಎಂ ಕಮಲ್ ನಾಥ್‌ರವರ ಆಪ್ತ ಎನ್ನಲಾದ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮಾ ಹುಡುಗಿಯರಿಗೆ 15 ವರ್ಷಕ್ಕೆ ಮದುವೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ. ಇದನ್ನು ನಾನು ಕಂಡುಹಿಡಿದುದ್ದಲ್ಲ. ಹಲವು ವೈದ್ಯರುಗಳೇ ಹೇಳಿದ್ದಾರೆ. ಹಾಗಾಗಿ 18 ವರ್ಷಕ್ಕೆ ಅವರಿಗೆ ಮದುವೆ ಮಾಡುವುದು ಸರಿಯಿದೆ. ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬೇಡ” ಎಂದು ಅವರು ವಾದಿಸಿದ್ದಾರೆ.

ಮುಂದುವರಿದು “ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಲು ಹೊರಟಿದ್ದಾರೆ. ಇದನ್ನು ಮಾಡಲು ಅವರೇನು ವಿಜ್ಞಾನಿಗಳೆ ಅಥವಾ ವೈದ್ಯರೇ” ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಸಜ್ಜನ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಸೋನಿಯಾಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇದ್ದು ಇಂತಹ ಹೇಳಿಕೆ ಕೊಡುವವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.

ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಸಜ್ಜನ್ ವರ್ಮಾ ಅವರಿಗೆ ನೋಟಿಸ್ ನೀಡಿದ್ದು, ಎರಡು ದಿನಗಳಲ್ಲಿ ವಿವರಣೆಯನ್ನು ನೀಡುವಂತೆ ಆದೇಶಿಸಿದೆ. ಆದರೆ ಕಾಂಗ್ರೆಸ್ ಮುಖಂಡರು ಸಜ್ಜನ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳದೆ, ಅವರು ಮುಖ್ಯಮಂತ್ರಿಗಳು ಕೇವಲ ಪ್ರಚಾರಕ್ಕಾಗಿ ಹೇಳಿಕೆ ಕೊಡುವುದನ್ನು ವಿರೋಧಿಸಿದ್ದಾರೆ ಅಷ್ಟೇ ಎಂದು ತೇಪೆ ಹಚ್ಚಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳಿಗೂ ಮಹಿಳೆಯರ ವಿಚಾರದಲ್ಲಿ ಸಂವೇದನಾಶೀಲತೆ ಹೊಂದಿಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...