Homeಚಳವಳಿಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ - ಈ ಸಮಾಜ...

ಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ – ಈ ಸಮಾಜ ಬದಲಾಗುವುದೆಂದು?

- Advertisement -
- Advertisement -

ಮಹಿಳೆಯರ ವಿಚಾರದಲ್ಲಿ ನಮ್ಮ ಸಮಾಜ ಇನ್ನು ಎಷ್ಟು ಹಿಂದುಳಿದಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿರುತ್ತದೆ. ಈ ಇಪ್ಪತ್ತೊಂದನೇ ಶತಮಾನದಲ್ಲಿಯೂ ಭಾರತದ ಹಲವು ಪುರುಷರ ತಲೆಗಳು ಕ್ರಿ.ಪೂ ಕಾಲದಂತೆಯೇ ಯೋಚಿಸುತ್ತವೆ ಎಂಬುದನ್ನು ಮಧ್ಯಪ್ರದೇಶದ ರಾಜಕಾರಣಿಗಳು ಸಾಬೀತುಪಡಿಸುತ್ತಿದ್ದಾರೆ. “ಯಾವುದೇ ಮಹಿಳೆಯು ಕೆಲಸಕ್ಕಾಗಿ ಮನೆಯಿಂದ ಹೊರಹೋದರೆ ಅವರು ತಾವಾಗಿಯೇ ಸರ್ಕಾರದ ಬಳಿ ನೋಂದಣಿ ಮಾಡಿಸಬೇಕು ಮತ್ತು ಸರ್ಕಾರ ಅವರನ್ನು ಟ್ಯ್ರಾಕ್ ಮಾಡಲಾಗುತ್ತದೆ” ಎಂದು ಅಲ್ಲಿನ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಪುರುಷಾಧಿಪತ್ಯ ವಿಚಾರದಲ್ಲಿ ನಾವೇನು ಕಡಿಮೆಯಿಲ್ಲವೆಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಖಂಡ “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ, ಹಾಗಿದ್ದಮೇಲೆ ಮದುವೆ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವುದೇಕೆ” ಎಂದು ಪ್ರಶ್ನಿಸುವ ಮೂಲಕ ತಮ್ಮ ಸನಾತನ ಕಸವನ್ನು ಹೊರಹಾಕಿದ್ದಾರೆ.

ಮಧ್ಯಪ್ರದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಮಹಿಳೆಯರನ್ನು ಮತ್ತಷ್ಟು ಬಂಧಿಯಾಗಿಸುವ ಹುನ್ನಾರದಲ್ಲಿ ನಿರತರಾಗಿವೆ. ಮಹಿಳೆಯರನ್ನು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಾಗಿಯೇ ನೋಡುತ್ತಿದ್ದಾರೆಯೇ ಹೊರತು ಮಹಿಳೆಯರು ಸಹ ಮನುಷ್ಯರು, ಅವರಿಗೆ ಭಾವನೆಗಳಿವೆ, ಅವರಿಗೂ ಸಮಾನ ಹಕ್ಕುಗಳಿವೆ ಎಂಬ ಕನಿಷ್ಠ ಜ್ಞಾನವನ್ನು ಈ ರಾಜಕಾರಣಿಗಳು ಮರೆತ್ತಿದ್ದಾರೆ.


ಇದನ್ನೂ ಓದಿ: ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ


ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹಿಳೆಯರ ಸುರಕ್ಷತೆಗಾಗಿ ಸಮ್ಮಾನ್ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಆ ವೇಳೆ ಮಹಿಳೆಯರು ಮನೆಯಿಂದ ಹೊರಗೆ ದುಡಿಯಲು ಹೋದರೆ ಅವರು ಸರ್ಕಾರದ ಬಳಿ ದಾಖಲು ಮಾಡಿಕೊಳ್ಳಬೇಕು. ಸರ್ಕಾರ ಅವರನ್ನು ನಿರಂತರವಾಗಿ ಟ್ಯ್ರಾಕ್ ಮಾಡುತ್ತದೆ ಎಂದಿದ್ದಾರೆ. ಅಂದರೆ ಮಹಿಳೆಯರ ರಕ್ಷಣೆಗಾಗಿ ಮೂಲಭೂತವಾಗಿ ಏನು ಮಾಡಬೇಕು ಎಂಬುದೇ ಸರ್ಕಾರಕ್ಕೆ ಗೊತ್ತಿಲ್ಲ. ಸರ್ಕಾರ, ಸಮಾಜ ಮತ್ತು ಸಂಪತ್ತಿನಲ್ಲಿ ಮಹಿಳೆಯರಿಗೆ ಸಮಪಾಲು ನೀಡಿದಾಗ ಮಾತ್ರ ಅವರ ರಕ್ಷಣೆ ಸಾಧ್ಯ ಎಂದು ಮಹಿಳಾ ಸಂಘಟನೆಗಳು ಆಗ್ರಹಿಸುತ್ತಿವೆ. ಆದರೆ ಸರ್ಕಾರ ಮಾತ್ರ ಅವರನ್ನು ಟ್ಯ್ರಾಕ್ ಮಾಡುತ್ತೇವೆ ಎನ್ನುತ್ತದೆ.

ಇನ್ನು ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಪಿಡಬ್ಲೂಡಿ ಸಚಿವರಾಗಿದ್ದ, ಮಾಜಿ ಸಿಎಂ ಕಮಲ್ ನಾಥ್‌ರವರ ಆಪ್ತ ಎನ್ನಲಾದ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮಾ ಹುಡುಗಿಯರಿಗೆ 15 ವರ್ಷಕ್ಕೆ ಮದುವೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ. ಇದನ್ನು ನಾನು ಕಂಡುಹಿಡಿದುದ್ದಲ್ಲ. ಹಲವು ವೈದ್ಯರುಗಳೇ ಹೇಳಿದ್ದಾರೆ. ಹಾಗಾಗಿ 18 ವರ್ಷಕ್ಕೆ ಅವರಿಗೆ ಮದುವೆ ಮಾಡುವುದು ಸರಿಯಿದೆ. ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬೇಡ” ಎಂದು ಅವರು ವಾದಿಸಿದ್ದಾರೆ.

ಮುಂದುವರಿದು “ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಲು ಹೊರಟಿದ್ದಾರೆ. ಇದನ್ನು ಮಾಡಲು ಅವರೇನು ವಿಜ್ಞಾನಿಗಳೆ ಅಥವಾ ವೈದ್ಯರೇ” ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಸಜ್ಜನ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಸೋನಿಯಾಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇದ್ದು ಇಂತಹ ಹೇಳಿಕೆ ಕೊಡುವವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.

ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಸಜ್ಜನ್ ವರ್ಮಾ ಅವರಿಗೆ ನೋಟಿಸ್ ನೀಡಿದ್ದು, ಎರಡು ದಿನಗಳಲ್ಲಿ ವಿವರಣೆಯನ್ನು ನೀಡುವಂತೆ ಆದೇಶಿಸಿದೆ. ಆದರೆ ಕಾಂಗ್ರೆಸ್ ಮುಖಂಡರು ಸಜ್ಜನ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳದೆ, ಅವರು ಮುಖ್ಯಮಂತ್ರಿಗಳು ಕೇವಲ ಪ್ರಚಾರಕ್ಕಾಗಿ ಹೇಳಿಕೆ ಕೊಡುವುದನ್ನು ವಿರೋಧಿಸಿದ್ದಾರೆ ಅಷ್ಟೇ ಎಂದು ತೇಪೆ ಹಚ್ಚಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳಿಗೂ ಮಹಿಳೆಯರ ವಿಚಾರದಲ್ಲಿ ಸಂವೇದನಾಶೀಲತೆ ಹೊಂದಿಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....