Homeಚಳವಳಿಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ - ಈ ಸಮಾಜ...

ಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ – ಈ ಸಮಾಜ ಬದಲಾಗುವುದೆಂದು?

- Advertisement -
- Advertisement -

ಮಹಿಳೆಯರ ವಿಚಾರದಲ್ಲಿ ನಮ್ಮ ಸಮಾಜ ಇನ್ನು ಎಷ್ಟು ಹಿಂದುಳಿದಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿರುತ್ತದೆ. ಈ ಇಪ್ಪತ್ತೊಂದನೇ ಶತಮಾನದಲ್ಲಿಯೂ ಭಾರತದ ಹಲವು ಪುರುಷರ ತಲೆಗಳು ಕ್ರಿ.ಪೂ ಕಾಲದಂತೆಯೇ ಯೋಚಿಸುತ್ತವೆ ಎಂಬುದನ್ನು ಮಧ್ಯಪ್ರದೇಶದ ರಾಜಕಾರಣಿಗಳು ಸಾಬೀತುಪಡಿಸುತ್ತಿದ್ದಾರೆ. “ಯಾವುದೇ ಮಹಿಳೆಯು ಕೆಲಸಕ್ಕಾಗಿ ಮನೆಯಿಂದ ಹೊರಹೋದರೆ ಅವರು ತಾವಾಗಿಯೇ ಸರ್ಕಾರದ ಬಳಿ ನೋಂದಣಿ ಮಾಡಿಸಬೇಕು ಮತ್ತು ಸರ್ಕಾರ ಅವರನ್ನು ಟ್ಯ್ರಾಕ್ ಮಾಡಲಾಗುತ್ತದೆ” ಎಂದು ಅಲ್ಲಿನ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಪುರುಷಾಧಿಪತ್ಯ ವಿಚಾರದಲ್ಲಿ ನಾವೇನು ಕಡಿಮೆಯಿಲ್ಲವೆಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಖಂಡ “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ, ಹಾಗಿದ್ದಮೇಲೆ ಮದುವೆ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವುದೇಕೆ” ಎಂದು ಪ್ರಶ್ನಿಸುವ ಮೂಲಕ ತಮ್ಮ ಸನಾತನ ಕಸವನ್ನು ಹೊರಹಾಕಿದ್ದಾರೆ.

ಮಧ್ಯಪ್ರದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಮಹಿಳೆಯರನ್ನು ಮತ್ತಷ್ಟು ಬಂಧಿಯಾಗಿಸುವ ಹುನ್ನಾರದಲ್ಲಿ ನಿರತರಾಗಿವೆ. ಮಹಿಳೆಯರನ್ನು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಾಗಿಯೇ ನೋಡುತ್ತಿದ್ದಾರೆಯೇ ಹೊರತು ಮಹಿಳೆಯರು ಸಹ ಮನುಷ್ಯರು, ಅವರಿಗೆ ಭಾವನೆಗಳಿವೆ, ಅವರಿಗೂ ಸಮಾನ ಹಕ್ಕುಗಳಿವೆ ಎಂಬ ಕನಿಷ್ಠ ಜ್ಞಾನವನ್ನು ಈ ರಾಜಕಾರಣಿಗಳು ಮರೆತ್ತಿದ್ದಾರೆ.


ಇದನ್ನೂ ಓದಿ: ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ


ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹಿಳೆಯರ ಸುರಕ್ಷತೆಗಾಗಿ ಸಮ್ಮಾನ್ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಆ ವೇಳೆ ಮಹಿಳೆಯರು ಮನೆಯಿಂದ ಹೊರಗೆ ದುಡಿಯಲು ಹೋದರೆ ಅವರು ಸರ್ಕಾರದ ಬಳಿ ದಾಖಲು ಮಾಡಿಕೊಳ್ಳಬೇಕು. ಸರ್ಕಾರ ಅವರನ್ನು ನಿರಂತರವಾಗಿ ಟ್ಯ್ರಾಕ್ ಮಾಡುತ್ತದೆ ಎಂದಿದ್ದಾರೆ. ಅಂದರೆ ಮಹಿಳೆಯರ ರಕ್ಷಣೆಗಾಗಿ ಮೂಲಭೂತವಾಗಿ ಏನು ಮಾಡಬೇಕು ಎಂಬುದೇ ಸರ್ಕಾರಕ್ಕೆ ಗೊತ್ತಿಲ್ಲ. ಸರ್ಕಾರ, ಸಮಾಜ ಮತ್ತು ಸಂಪತ್ತಿನಲ್ಲಿ ಮಹಿಳೆಯರಿಗೆ ಸಮಪಾಲು ನೀಡಿದಾಗ ಮಾತ್ರ ಅವರ ರಕ್ಷಣೆ ಸಾಧ್ಯ ಎಂದು ಮಹಿಳಾ ಸಂಘಟನೆಗಳು ಆಗ್ರಹಿಸುತ್ತಿವೆ. ಆದರೆ ಸರ್ಕಾರ ಮಾತ್ರ ಅವರನ್ನು ಟ್ಯ್ರಾಕ್ ಮಾಡುತ್ತೇವೆ ಎನ್ನುತ್ತದೆ.

ಇನ್ನು ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಪಿಡಬ್ಲೂಡಿ ಸಚಿವರಾಗಿದ್ದ, ಮಾಜಿ ಸಿಎಂ ಕಮಲ್ ನಾಥ್‌ರವರ ಆಪ್ತ ಎನ್ನಲಾದ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮಾ ಹುಡುಗಿಯರಿಗೆ 15 ವರ್ಷಕ್ಕೆ ಮದುವೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ. ಇದನ್ನು ನಾನು ಕಂಡುಹಿಡಿದುದ್ದಲ್ಲ. ಹಲವು ವೈದ್ಯರುಗಳೇ ಹೇಳಿದ್ದಾರೆ. ಹಾಗಾಗಿ 18 ವರ್ಷಕ್ಕೆ ಅವರಿಗೆ ಮದುವೆ ಮಾಡುವುದು ಸರಿಯಿದೆ. ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬೇಡ” ಎಂದು ಅವರು ವಾದಿಸಿದ್ದಾರೆ.

ಮುಂದುವರಿದು “ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಲು ಹೊರಟಿದ್ದಾರೆ. ಇದನ್ನು ಮಾಡಲು ಅವರೇನು ವಿಜ್ಞಾನಿಗಳೆ ಅಥವಾ ವೈದ್ಯರೇ” ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಸಜ್ಜನ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಸೋನಿಯಾಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇದ್ದು ಇಂತಹ ಹೇಳಿಕೆ ಕೊಡುವವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.

ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಸಜ್ಜನ್ ವರ್ಮಾ ಅವರಿಗೆ ನೋಟಿಸ್ ನೀಡಿದ್ದು, ಎರಡು ದಿನಗಳಲ್ಲಿ ವಿವರಣೆಯನ್ನು ನೀಡುವಂತೆ ಆದೇಶಿಸಿದೆ. ಆದರೆ ಕಾಂಗ್ರೆಸ್ ಮುಖಂಡರು ಸಜ್ಜನ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳದೆ, ಅವರು ಮುಖ್ಯಮಂತ್ರಿಗಳು ಕೇವಲ ಪ್ರಚಾರಕ್ಕಾಗಿ ಹೇಳಿಕೆ ಕೊಡುವುದನ್ನು ವಿರೋಧಿಸಿದ್ದಾರೆ ಅಷ್ಟೇ ಎಂದು ತೇಪೆ ಹಚ್ಚಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳಿಗೂ ಮಹಿಳೆಯರ ವಿಚಾರದಲ್ಲಿ ಸಂವೇದನಾಶೀಲತೆ ಹೊಂದಿಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...