Homeಚಳವಳಿಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ - ಈ ಸಮಾಜ...

ಮಧ್ಯಪ್ರದೇಶ: ಮಹಿಳಾ ವಿರೋಧಿ ಹೇಳಿಕೆ ನೀಡಲು ಬಿಜೆಪಿ -ಕಾಂಗ್ರೆಸ್ ನಡುವೆ ಪೈಪೋಟಿ – ಈ ಸಮಾಜ ಬದಲಾಗುವುದೆಂದು?

- Advertisement -
- Advertisement -

ಮಹಿಳೆಯರ ವಿಚಾರದಲ್ಲಿ ನಮ್ಮ ಸಮಾಜ ಇನ್ನು ಎಷ್ಟು ಹಿಂದುಳಿದಿದೆ ಎಂಬುದು ಪದೇ ಪದೇ ಸಾಬೀತಾಗುತ್ತಿರುತ್ತದೆ. ಈ ಇಪ್ಪತ್ತೊಂದನೇ ಶತಮಾನದಲ್ಲಿಯೂ ಭಾರತದ ಹಲವು ಪುರುಷರ ತಲೆಗಳು ಕ್ರಿ.ಪೂ ಕಾಲದಂತೆಯೇ ಯೋಚಿಸುತ್ತವೆ ಎಂಬುದನ್ನು ಮಧ್ಯಪ್ರದೇಶದ ರಾಜಕಾರಣಿಗಳು ಸಾಬೀತುಪಡಿಸುತ್ತಿದ್ದಾರೆ. “ಯಾವುದೇ ಮಹಿಳೆಯು ಕೆಲಸಕ್ಕಾಗಿ ಮನೆಯಿಂದ ಹೊರಹೋದರೆ ಅವರು ತಾವಾಗಿಯೇ ಸರ್ಕಾರದ ಬಳಿ ನೋಂದಣಿ ಮಾಡಿಸಬೇಕು ಮತ್ತು ಸರ್ಕಾರ ಅವರನ್ನು ಟ್ಯ್ರಾಕ್ ಮಾಡಲಾಗುತ್ತದೆ” ಎಂದು ಅಲ್ಲಿನ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಪುರುಷಾಧಿಪತ್ಯ ವಿಚಾರದಲ್ಲಿ ನಾವೇನು ಕಡಿಮೆಯಿಲ್ಲವೆಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಖಂಡ “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ, ಹಾಗಿದ್ದಮೇಲೆ ಮದುವೆ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವುದೇಕೆ” ಎಂದು ಪ್ರಶ್ನಿಸುವ ಮೂಲಕ ತಮ್ಮ ಸನಾತನ ಕಸವನ್ನು ಹೊರಹಾಕಿದ್ದಾರೆ.

ಮಧ್ಯಪ್ರದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ. ಈ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳು ಮಹಿಳೆಯರನ್ನು ಮತ್ತಷ್ಟು ಬಂಧಿಯಾಗಿಸುವ ಹುನ್ನಾರದಲ್ಲಿ ನಿರತರಾಗಿವೆ. ಮಹಿಳೆಯರನ್ನು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಾಗಿಯೇ ನೋಡುತ್ತಿದ್ದಾರೆಯೇ ಹೊರತು ಮಹಿಳೆಯರು ಸಹ ಮನುಷ್ಯರು, ಅವರಿಗೆ ಭಾವನೆಗಳಿವೆ, ಅವರಿಗೂ ಸಮಾನ ಹಕ್ಕುಗಳಿವೆ ಎಂಬ ಕನಿಷ್ಠ ಜ್ಞಾನವನ್ನು ಈ ರಾಜಕಾರಣಿಗಳು ಮರೆತ್ತಿದ್ದಾರೆ.


ಇದನ್ನೂ ಓದಿ: ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ


ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಹಿಳೆಯರ ಸುರಕ್ಷತೆಗಾಗಿ ಸಮ್ಮಾನ್ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಆ ವೇಳೆ ಮಹಿಳೆಯರು ಮನೆಯಿಂದ ಹೊರಗೆ ದುಡಿಯಲು ಹೋದರೆ ಅವರು ಸರ್ಕಾರದ ಬಳಿ ದಾಖಲು ಮಾಡಿಕೊಳ್ಳಬೇಕು. ಸರ್ಕಾರ ಅವರನ್ನು ನಿರಂತರವಾಗಿ ಟ್ಯ್ರಾಕ್ ಮಾಡುತ್ತದೆ ಎಂದಿದ್ದಾರೆ. ಅಂದರೆ ಮಹಿಳೆಯರ ರಕ್ಷಣೆಗಾಗಿ ಮೂಲಭೂತವಾಗಿ ಏನು ಮಾಡಬೇಕು ಎಂಬುದೇ ಸರ್ಕಾರಕ್ಕೆ ಗೊತ್ತಿಲ್ಲ. ಸರ್ಕಾರ, ಸಮಾಜ ಮತ್ತು ಸಂಪತ್ತಿನಲ್ಲಿ ಮಹಿಳೆಯರಿಗೆ ಸಮಪಾಲು ನೀಡಿದಾಗ ಮಾತ್ರ ಅವರ ರಕ್ಷಣೆ ಸಾಧ್ಯ ಎಂದು ಮಹಿಳಾ ಸಂಘಟನೆಗಳು ಆಗ್ರಹಿಸುತ್ತಿವೆ. ಆದರೆ ಸರ್ಕಾರ ಮಾತ್ರ ಅವರನ್ನು ಟ್ಯ್ರಾಕ್ ಮಾಡುತ್ತೇವೆ ಎನ್ನುತ್ತದೆ.

ಇನ್ನು ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಪಿಡಬ್ಲೂಡಿ ಸಚಿವರಾಗಿದ್ದ, ಮಾಜಿ ಸಿಎಂ ಕಮಲ್ ನಾಥ್‌ರವರ ಆಪ್ತ ಎನ್ನಲಾದ ಕಾಂಗ್ರೆಸ್ ಮುಖಂಡ ಸಜ್ಜನ್ ಸಿಂಗ್ ವರ್ಮಾ ಹುಡುಗಿಯರಿಗೆ 15 ವರ್ಷಕ್ಕೆ ಮದುವೆ ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಹುಡುಗಿಯರು 15 ವರ್ಷಕ್ಕೆ ಮಕ್ಕಳೆರುತ್ತಾರೆ. ಇದನ್ನು ನಾನು ಕಂಡುಹಿಡಿದುದ್ದಲ್ಲ. ಹಲವು ವೈದ್ಯರುಗಳೇ ಹೇಳಿದ್ದಾರೆ. ಹಾಗಾಗಿ 18 ವರ್ಷಕ್ಕೆ ಅವರಿಗೆ ಮದುವೆ ಮಾಡುವುದು ಸರಿಯಿದೆ. ಹುಡುಗಿಯರ ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬೇಡ” ಎಂದು ಅವರು ವಾದಿಸಿದ್ದಾರೆ.

ಮುಂದುವರಿದು “ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಲು ಹೊರಟಿದ್ದಾರೆ. ಇದನ್ನು ಮಾಡಲು ಅವರೇನು ವಿಜ್ಞಾನಿಗಳೆ ಅಥವಾ ವೈದ್ಯರೇ” ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ವಿಚಾರದಲ್ಲಿ ಬಿಜೆಪಿ ಮುಖಂಡರು ಸಜ್ಜನ್ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಸೋನಿಯಾಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಇದ್ದು ಇಂತಹ ಹೇಳಿಕೆ ಕೊಡುವವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.

ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗವು ಸಜ್ಜನ್ ವರ್ಮಾ ಅವರಿಗೆ ನೋಟಿಸ್ ನೀಡಿದ್ದು, ಎರಡು ದಿನಗಳಲ್ಲಿ ವಿವರಣೆಯನ್ನು ನೀಡುವಂತೆ ಆದೇಶಿಸಿದೆ. ಆದರೆ ಕಾಂಗ್ರೆಸ್ ಮುಖಂಡರು ಸಜ್ಜನ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳದೆ, ಅವರು ಮುಖ್ಯಮಂತ್ರಿಗಳು ಕೇವಲ ಪ್ರಚಾರಕ್ಕಾಗಿ ಹೇಳಿಕೆ ಕೊಡುವುದನ್ನು ವಿರೋಧಿಸಿದ್ದಾರೆ ಅಷ್ಟೇ ಎಂದು ತೇಪೆ ಹಚ್ಚಲು ಮುಂದಾಗಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳಿಗೂ ಮಹಿಳೆಯರ ವಿಚಾರದಲ್ಲಿ ಸಂವೇದನಾಶೀಲತೆ ಹೊಂದಿಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ.


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...